ಇಡೀ ದೇಶ, ಸೇನೆ, ಯೋಧರು ಪ್ರಧಾನಿ ಪಾದಕ್ಕೆ ನಮಸ್ಕರಿಸುತ್ತದೆ: ಮಧ್ಯಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ

Date:

ಇಡೀ ದೇಶ, ಭಾರತೀಯ ಸೇನೆ, ಯೋಧರು ಪ್ರಧಾನಿ ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸುತ್ತದೆ ಎಂದು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಜಗದೀಶ್ ದೇವ್ಡಾ ಭಾರತೀಯ ಸೇನೆಯ ಪಾತ್ರವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಪಕ್ಷಗಳು ದೂರಿದೆ.

ಜಬಲ್ಪುರದಲ್ಲಿ ನಡೆದ ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದ ಸಂದರ್ಭದಲ್ಲಿ, ಪಹಲ್ಗಾಮ್ ಭಯೋತ್ಪಾದಕಾ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ ಕ್ರಮದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾತ್ರ ಶ್ಲಾಘಿಸಿದರು. ಸೇನೆ, ಯೋಧರು ಪ್ರಧಾನಿ ಪಾದಕ್ಕೆ ನಮಸ್ಕರಿಸುತ್ತದೆ” ಎಂದು ಹೇಳಿದ್ದಾರೆ. ಈ ಹೇಳಿಕೆಯು ತೀವ್ರ ಟೀಕೆಗೆ ಗುರಿಯಾಗಿದೆ.

ಇದನ್ನು ಓದಿದ್ದೀರಾ? ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿಹಾಕಿದ ಭಯೋತ್ಪಾದಕರು, ಅವರಿಗೆ ಆಶ್ರಯ ನೀಡುವವರನ್ನು ಬೇರುಸಹಿತ ನಿರ್ಮೂಲನೆ ಮಾಡುವವರೆಗೆ ನಾವು ವಿಶ್ರಾಂತಿ ಪಡೆಯುವುದಿಲ್ಲ. ಈ ವಿಚಾರದಲ್ಲಿ ನಾವು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಬೇಕು. ಇಡೀ ದೇಶ ಮತ್ತು ನಮ್ಮ ಸೇನೆ ಪಿಎಂ ಮೋದಿ ಪಾದಗಳಿಗೆ ನಮಸ್ಕರಿಸುತ್ತಿದೆ. ಮೋದಿ ಅವರು ನೀಡಿದ ಸೂಕ್ತ ಉತ್ತರವನ್ನು ಎಷ್ಟು ಹೊಗಳಿದರೂ ಸಾಲದು” ಎಂದು ಹೇಳಿದರು.

ಭಾರತೀಯ ಸೇನೆಯು ಪ್ರಧಾನಿಯ ಮುಂದೆ ತಲೆಬಾಗುತ್ತದೆ ಎಂಬ ಹೇಳಿಕೆ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯು ಯೋಧರ ತ್ಯಾಗಕ್ಕೆ ಬೆಲೆಯೇ ಇಲ್ಲದಂತೆ ಮಾಡುತ್ತದೆ. ಭಾರತೀಯ ಸೇನೆಗೆ ಇರುವ ಗೌರವವನ್ನು ತಗ್ಗಿಸಲಾಗುತ್ತಿದೆ” ಎಂದು ವಿಪಕ್ಷಗಳು ಆರೋಪಿಸಿದೆ.

ದೇವ್ಡಾ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. “ತುಂಬಾ ಕೀಳಾದ ಮತ್ತು ನಾಚಿಕೆಗೇಡಿನ” ಹೇಳಿಕೆ ಎಂದು ಹೇಳಿದೆ. “ಇದು ಸೇನೆಯ ಶೌರ್ಯ ಮತ್ತು ಧೈರ್ಯಕ್ಕೆ ಮಾಡಿದ ಅವಮಾನ. ಇಂದು ಇಡೀ ದೇಶ ಸೇನೆಯ ಮುಂದೆ ತಲೆಬಾಗುತ್ತಿರುವಾಗ, ಬಿಜೆಪಿ ನಾಯಕರು ನಮ್ಮ ಧೈರ್ಯಶಾಲಿ ಸೇನೆಯ ಬಗ್ಗೆ ತಮ್ಮ ಕೀಳು ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ದೂರಿದೆ.

ಈ ವಿವಾದಾತ್ಮಿಕ ಹೇಳಿಕೆ ನೀಡಿದ ದೇವ್ಡಾ ರಾಜೀನಾಮೆ ನೀಡಬೇಕು ಮತ್ತು ಬಿಜೆಪಿಯು ಅಧಿಕೃತವಾಗಿ ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...