ಹಿಂಸಾತ್ಮಕ ಘಟನೆಗಳಿಂದ ಭಾರತದ ಪ್ರಗತಿಪರ, ಜಾತ್ಯತೀತ ಚಿತ್ರಣ ಹಾಳು: ಮಲ್ಲಿಕಾರ್ಜುನ ಖರ್ಗೆ

Date:

ದೇಶವು ‘ಗಂಭೀರ ಆಂತರಿಕ ಸವಾಲುಗಳನ್ನು’ ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ

ಹೈದರಾಬಾದ್‌ನಲ್ಲಿ ಪುನರ್ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಯ ಮೊದಲ ಸಭೆಯಲ್ಲಿ ಮಾತನಾಡಿದ ಅವರು, “ಹಿಂಸಾಚಾರದ ಘಟನೆಗಳು ಪ್ರಗತಿಪರ ಮತ್ತು ಜಾತ್ಯತೀತ ಭಾರತದ ಪ್ರತಿಷ್ಠೆಗೆ ಕಳಂಕ ತರುತ್ತಿವೆ. ಬಿಜೆಪಿಯು ಇದಕ್ಕೆ ‘ಬೆಂಕಿಗೆ ಇಂಧನ’ ಸೇರಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಸಮಾಜದ ವಂಚಿತ ವರ್ಗಗಳಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಆಹಾರ ಭದ್ರತೆಯ ಹಕ್ಕನ್ನು ನೀಡಲು ಜಾತಿ ಸಮೀಕ್ಷೆಯೊಂದಿಗೆ ಜನಗಣತಿ ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸಲು ಪಕ್ಷವು ಒತ್ತಾಯಿಸುತ್ತದೆ. ಈ ವಿಚಾರದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳ ನಿಲುವು ಸ್ಪಷ್ಟವಾಗಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ಯಶಸ್ವಿ ಸಭೆಗಳ ನಂತರ, ಪ್ರತಿಪಕ್ಷಗಳ ಮೈತ್ರಿಯು ‘ಜನ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರದ’ ವಿರುದ್ಧ ಹೋರಾಡಲು ಮುಂದಾಗುತ್ತಿದೆ. ಈ ಬೆಳವಣಿಗೆಯಿಂದ ವಿಚಲಿತರಾಗಿರುವ ಬಿಜೆಪಿಯು ವಿರೋಧ ಪಕ್ಷಗಳ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿದೆ” ಎಂದು ಕಾಂಗ್ರೆಸ್ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ನಾವು ಯಾರನ್ನೂ ನಿಷೇಧಿಸಿಲ್ಲ, ಬಹಿಷ್ಕರಿಸಿಲ್ಲ: ‘ಇಂಡಿಯಾ’ ಒಕ್ಕೂಟದ ಮಾಧ್ಯಮ ನೀತಿ ಕುರಿತು ಕಾಂಗ್ರೆಸ್ ಸ್ಪಷ್ಟನೆ

“ಸಂಸತ್ತಿನಲ್ಲಿ ಪ್ರತಿಪಕ್ಷಗಳನ್ನು ಬಗ್ಗುಬಡಿಯಲು ಮತ್ತು ಸಾರ್ವಜನಿಕ ಪರಿಶೀಲನೆಯನ್ನು ಮೊಟಕುಗೊಳಿಸುವ ಸರ್ಕಾರದ ಪ್ರಯತ್ನಗಳನ್ನು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ತೀವ್ರವಾಗಿ ಖಂಡಿಸುತ್ತೇವೆ. ಸಂಸತ್ತಿನ ಮುಂಬರುವ ವಿಶೇಷ ಅಧಿವೇಶನವು ಆಡಳಿತ ಪಕ್ಷದ ಉದ್ದೇಶಗಳ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

“ದೇಶವು ಇಂದು ಅನೇಕ ಗಂಭೀರ ಆಂತರಿಕ ಸವಾಲುಗಳನ್ನು ಎದುರಿಸುತ್ತಿದೆ. ಹಣದುಬ್ಬರ, ನಿರುದ್ಯೋಗ, ಮಣಿಪುರದಲ್ಲಿ ಉಲ್ಬಣಗೊಳ್ಳುತ್ತಿರುವ ಹಿಂಸಾಚಾರ, ಅಸಮಾನತೆಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸಂಪೂರ್ಣ ವಿಫಲವಾಗಿದೆ. ಇಡೀ ರಾಷ್ಟ್ರವು ಮಣಿಪುರದಲ್ಲಿ ಇನ್ನೂ ತೆರೆದುಕೊಳ್ಳುತ್ತಿರುವ ದುರಂತ ಘಟನೆಗಳಿಗೆ ಸಾಕ್ಷಿಯಾಗಿದೆ. ನರೇಂದ್ರ ಮೋದಿ ಸರ್ಕಾರವು ಮಣಿಪುರದ ಬೆಂಕಿಯು ಹರಿಯಾಣದ ನುಹ್ ಅನ್ನು ತಲುಪಲು ಅವಕಾಶ ಮಾಡಿಕೊಟ್ಟಿತು” ಎಂದು ಖರ್ಗೆ ಆರೋಪಿಸಿದರು.

“ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಮೂಲಕ ದೇಶದ ಆರ್ಥಿಕತೆಯು ಗಂಭೀರ ಅಪಾಯದಲ್ಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...