ಇಂದಿರಾ ಗಾಂಧಿ, ವಾಜಪೇಯಿಯೇ ಸೋತಿದ್ರು, ಗಡ್ಕರಿ ಯಾವ ಲೆಕ್ಕ: ಕಾಂಗ್ರೆಸ್‌ ಅಭ್ಯರ್ಥಿ ವಿಕಾಸ್ ಠಾಕ್ರೆ

Date:

“ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರೇ ಚುನಾವಣೆಯಲ್ಲಿ ಸೋತಿದ್ದರು. ಇನ್ನು ನಿತಿನ್ ಗಡ್ಕರಿ ಯಾವ ಲೆಕ್ಕ” ಎಂದು ನಾಗ್ಪುರದಲ್ಲಿ ಗಡ್ಕರಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ವಿಕಾಸ್ ಠಾಕ್ರೆ ಹೇಳಿದರು.

ಪಿಟಿಐ ಸಂದರ್ಶನದಲ್ಲಿ ಮಾತನಾಡಿದ ವಿಕಾಸ್ ಠಾಕ್ರೆ , “ನಿತಿನ್ ಗಡ್ಕರಿ ಬರೀ ಕೆಲವೇ ಜನರಿಗೆ ಸಹಾಯವಾಗುವ ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತಾರೆ ಎಂದು ದೂರಿದರು. “ನಾನು ಸಿಂಹದ ಗುಹೆಯಲ್ಲಿ ಕೈ ಹಾಕಿದ್ದೇನೆಯೇ ಅಥವಾ ಸಿಂಹವು ಗುಡುಗುತ್ತದೆ ಎಂದು ಸಮಯ ಮಾತ್ರ ಹೇಳುತ್ತದೆ” ಎಂದು ತಿರುಗೇಟು ನೀಡಿದರು.

ಇದನ್ನು ಓದಿದ್ದೀರಾ?  ಅಘೋಷಿತ ತುರ್ತು ಪರಿಸ್ಥಿತಿ: ಪ್ರಧಾನಿ ಮೋದಿಗೆ ಸೋಲು ಕಟ್ಟಿಟ್ಟ ಬುತ್ತಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜಾಪ್ರಭುತ್ವದಲ್ಲಿ ಮತದಾರರು ಪ್ರಬಲರೇ ಹೊರತು ಅಭ್ಯರ್ಥಿಯಲ್ಲ. ಯಾರು ಯಶಸ್ವಿಯಾಗುತ್ತಾರೆ, ಯಾರು ಮಣ್ಣು ಮುಕ್ಕುತ್ತಾರೆ ಎಂದು ಮತದಾರರೇ ನಿರ್ಧಾರ ಮಾಡುತ್ತಾರೆ. ಪ್ರಬಲ ವ್ಯಕ್ತಿಗಳಾದ ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಅವರೇ ಚುನಾವಣೆಯಲ್ಲಿ ಸೋತಿದ್ದಾರೆ” ಎಂದರು.

ಇನ್ನು ನಿತಿನ್ ಗಡ್ಕರಿ ಮೆಟ್ರೋ ರೈಲು, ಮೇಲ್ಸೇತುವೆ, ಇತರೆ ಅಭಿವೃದ್ಧಿ ಮಾಡಿದರಲ್ಲವೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಕಾಸ್ ಠಾಕ್ರೆ, “ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಇರುವಾಗ ನೀವು ಮನೆಯಲ್ಲಿ ಕುಳಿತು ಹೊಳೆಯುವ ಮೆಟ್ರೋ ರೈಲನ್ನು ನೋಡಲು ಸಾಧ್ಯವೇ?” ಎಂದು ಟಾಂಗ್ ನೀಡಿದರು.

ಇದನ್ನು ಓದಿದ್ದೀರಾ?  ಕೇಂದ್ರ ಸಚಿವ ನಿತಿನ್ ಗಡ್ಕರಿ ‘ಬಾವಿಗೆ ಹಾರುವುದೇ ಲೇಸು’ ಎಂದಿದ್ದೇಕೆ?

“ಕಾಂಗ್ರೆಸ್‌ ಹೇಗೆ ಚುನಾವಣೆಯನ್ನು ಗೆದ್ದಿದೆ? ನಮ್ಮ ಕೆಲಸವನ್ನು ಜನರು ಮೆಚ್ಚಿಲ್ಲ ಎಂದಾದರೆ ನಮಗೆ ಠೇವಣಿ ಮಾಡಿದ ಚುನಾವಣಾ ಭದ್ರತಾ ಹಣ ಕೂಡಾ ವಾಪಾಸ್ ಸಿಗುತ್ತಿರಲಿಲ್ಲ” ಎಂದ ಠಾಕ್ರೆ, “ನಾವು ಅತೀ ಹೆಚ್ಚು ಮತ ಗಳಿಸಿ ಗೆಲುವು ಸಾಧಿಸುತ್ತೇವೆ ಎಂದು ಎಲ್ಲರೂ ಹೇಳಬಹುದು. ಐದು ಲಕ್ಷವೇಕೆ, 25 ಲಕ್ಷ ಮಾರ್ಜಿನ್‌ನಲ್ಲಿ ಗೆಲ್ಲುವುದಾಗಿ ಅವರು ಹೇಳಲಿ. ಆದರೆ ಚುನಾವಣೆ ಬಳಿಕವೇ ಉತ್ತರ ಸಿಗಲಿದೆ” ಎಂದರು.

“ಮತ ವಿಭಜನೆಯಾದಾಗ ಕಾಂಗ್ರೆಸ್ ಸೋತಿರುವುದನ್ನು ನೀವು ಲೋಕಸಭೆ ಚುನಾವಣೆಯ ಇತಿಹಾಸ ನೋಡಿದರೆ ತಿಳಿಯಬಹುದು. ಆದರೆ ಈಗ ಯಾವ ವಿಭಜನೆಯೂ ಇಲ್ಲ. ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲ ವಿಪಕ್ಷಗಳು ಒಂದಾಗಿದೆ” ಎಂದು ವಿಕಾಸ್ ಠಾಕ್ರೆ ಹೇಳಿದರು.

2019ರ ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಶೇಕಡ 56ರಷ್ಟು ಮತವನ್ನು ಗಳಿಸಿ ಜಯ ಕಂಡರೆ ಶೇಕಡ 37ರಷ್ಟು ಮತ ಗಳಿಸಿದ ಕಾಂಗ್ರೆಸ್ ಪರಾಭವಗೊಂಡಿದೆ. ಇನ್ನು ಬಿಎಸ್‌ಪಿ 31,725 ಮತಗಳನ್ನು, ವಿಬಿಎ 26,128 ಮತಗಳನ್ನು ಗಳಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...