ಬಾಗಲಕೋಟೆ | ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಿರೋಧಿ ಪ್ರಕಾಶ ನಾಯಕ ಬಿಜೆಪಿ ಸೇರ್ಪಡೆ

Date:

  • ವಿರೋಧ ಮಾಡಿದ ನಿರಾಣಿ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆ
  • ಭೂಸ್ವಾಧೀನ ರೈತ ಹೋರಾಟದ ನೇತೃತ್ವ ವಹಿಸಿದ್ದ ಪ್ರಕಾಶ

ಸಂಪದ್ಭರಿತ ಕೃಷಿ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಭೂಸ್ವಾಧಿನ ಮಾಡಿಕೊಳ್ಳಲು ಹೊರಟ್ಟಿದ್ದ ಸರ್ಕಾರದ ವಿರುದ್ಧ ಹಾಗೂ ಕೈಗಾರಿಕಾ ಸಚಿವ ಮುರುಗೇಶ ನಿರಾಣಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ರೈತ ಮುಖಂಡ ಪ್ರಕಾಶ ನಾಯಕ ಅವರು ಈಗ ನಿರಾಣಿ ಸಮ್ಮುಖದಲ್ಲಿಯೇ ಬಿಜೆಪಿ ಸೇರಿ ಅಚ್ಚರಿ ಮೂಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಸರ್ಕಾರವು ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದೆ ಬಂದಾಗ ಇದನ್ನು ವಿರೋಧಿಸಿದ್ದ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ಹೋರಾಟದ ಮುಂಚೂಣಿಯಲ್ಲಿದ್ದ ರೈತ ಮುಖಂಡ ಪ್ರಕಾಶ ನಾಯಕ ಇಷ್ಟಕ್ಕೆ ಸುಮ್ಮನಾಗದೇ ಸಾವಿರಾರು ರೈತರ ಸಮ್ಮುಖದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, ಕೈಗಾರಿಕಾ ಸಚಿವ ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ ನಿರಾಣಿ ವಿರುದ್ದ ಹರಿಹಾಯ್ದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

ಇದೇ ವಿಷಯವಾಗಿ ಇಬ್ಬರು ನಾಯಕರು ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಂಡು ಕೆಸರು ಎರಚಿಕೊಂಡಿದ್ದರು. ಇದೀಗ ಇದೇ ನಿರಾಣಿ ಸಮ್ಮುಖದಲ್ಲಿಯೇ ಪ್ರಕಾಶ ಬಿಜೆಪಿ ಸೇರಿದ್ದು ಜಿಲ್ಲೆಯಲ್ಲಿ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಕಾಶ ನಾಯಕ, “ಎರಡು ಸಾವಿರಕ್ಕೂ ಹೆಚ್ಚಿನ ರೈತರ ಭೂಮಿಯನ್ನು ಭೂಸ್ವಾಧಿನ ಮಾಡಿಕೊಳ್ಳುವುದಾಗಿ ಹೇಳಿದ್ದ ಮುರಗೇಶಿ ನಿರಾಣಿ ಹಲಕುರ್ಕಿ ಗ್ರಾಮದಲ್ಲಿರುವ ಯಾವ ರೈತರ ಜಮೀನುಗಳನ್ನು ಭೂ ಸ್ವಾಧಿನಪಡಿಸಿಕೊಳ್ಳುವುದಿಲ್ಲ ಎಂದು ಮಾತುಕೊಟ್ಟಿದ್ದಾರೆ” ಎಂದು ತಿಳಿಸಿದರು.

“ಭೂಸ್ವಾಧಿನ ಮಾಡಿಕೊಳ್ಳುವುದರ ವಿರುದ್ಧ ನಾನು ನಡೆಸಿದ ಹೋರಾಟದಲ್ಲಿ ಬೀಳಗಿ ಕ್ಷೇತ್ರದ ಯಾವೊಬ್ಬ ಕಾಂಗ್ರೆಸ್‌ ನಾಯಕರು ಪಾಲ್ಗೊಳ್ಳದೇ ಇದ್ದದ್ದರಿಂದ ಅಸಮಧಾನಿತನಾಗಿ ಮುರುಗೇಶ ನಿರಾಣಿ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...