ಚುನಾವಣಾ ಬಾಂಡ್‌ಗಳ ಮಾಹಿತಿ ‘ಸಿದ್ದ’ವಿದೆ: ಎಸ್‌ಬಿಐ

Date:

ಸುಪ್ರೀಂ ಕೋರ್ಟ್‌ ಆದೇಶದಂತೆ ಚುನಾವಣಾ ಬಾಂಡ್‌ಗಳ ಮಾಹಿತಿಯು ‘ಸಿದ್ದ’ವಾಗಿದೆ. ಬಾಂಡ್‌ಗಳನ್ನು ಖರೀದಿಸಿದವರು ಮತ್ತು ಅವರು ಯಾರಿಗೆ ಕೊಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಸಿದ್ದಪಡಿಸಲಾಗಿದೆ. ಅದರ ಅಂತಿಮ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಎಸ್‌ಬಿಐ ಹೇಳಿದೆ.

ಚುನಾವಣಾ ಬಾಂಡ್‌ಗಳ ಮಾಹಿತಿ ನೀಡಲು ಜೂನ್ 30ರವರೆಗೆ ಸಮಯ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ ಮಾಡಿತ್ತು. ಆದರೆ, ಎಸ್‌ಬಿಐ ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿತ್ತು. ಮಂಗಳವಾರವೇ ಮಾಹಿತಿಯನ್ನು ಒದಗಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದೆ. ಅಲ್ಲದೆ, ಮಾರ್ಚ್‌ 15ರ ಸಂಜೆಯೊಳಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಸೂಚಿಸಿದೆ. ಒಂದು ವೇಳೆ, ಗಡುವಿನೊಳಗೆ ಮಾಹಿತಿ ನೀಡದಿದ್ದರೆ, ಎಸ್‌ಬಿಐ ವಿರುದ್ಧ ಕ್ರಮಕ್ಕೆ ಮುಂದಾಗುವುದಾಗಿಯೂ ಹೇಳಿತ್ತು.

ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಎಸ್‌ಬಿಐ ಮಾಹಿತಿಯನ್ನು ಸಿದ್ದಪಡಿಸಿದೆ. ಮಾಹಿತಿಯ ಅಂಕಿಅಂಶಗಳಲ್ಲಿ ವ್ಯತ್ಯಾಸಗಳು ಇಲ್ಲದಂತೆ ನೋಡಿಕೊಳ್ಳಲು ಡೇಟಾ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಎಸ್‌ಬಿಐ ಹೇಳಿರುವುದಾಗಿ ಎನ್‌ಡಿಟಿವಿ ಪ್ರಾಫಿಟ್ ವರದಿ ಮಾಡಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ,ಫೆಬ್ರವರಿ 15ರಂದು ನೀಡಿದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು, ಚುನಾವಣಾ ಬಾಂಡ್‌ ಯೋಜನೆಯು ಅಸಂವಿಧಾನಿಕ. ಅನಾಮಧೇಯ ರಾಜಕೀಯ ನಿಧಿಯನ್ನು ಅನುಮತಿಸಲು ಸಾಧ್ಯವಿಲ್ಲ. ಚುನಾವಣಾ ಬಾಂಡ್‌ ಖರೀದಿಸಿದವರು ಮತ್ತು ಪಡೆದವರ ವಿವರನ್ನು ಮಾರ್ಚ್‌ 6ರರೊಳಗೆ ಒದಗಿಸಬೇಕು. ಮಾರ್ಚ್‌ 13ರರೊಳಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಹೇಳಿತ್ತು.

ಎಸ್‌ಬಿಐ ಕೋರಿದ್ದ ಸಮಯವನ್ನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಶ್ಲಾಘಿಸಿದೆ. “ಸುಪ್ರೀಂ ಕೋರ್ಟ್‌ ಅಸಂವಿಧಾನಿಕ ಎಂದಿರುವ ಈ ಬೃಹತ್ ಭ್ರಷ್ಟಾಚಾರ ಹಗರಣವು ಬಿಜೆಪಿ ಮತ್ತು ಅದರ ಭ್ರಷ್ಟ ಕಾರ್ಪೊರೇಟ್ ಮಾಸ್ಟರ್‌ಗಳ ನಡುವಿನ ಅಪವಿತ್ರ ಸಂಬಂಧವನ್ನು ಬಹಿರಂಗಪಡಿಸುತ್ತದೆ” ಎಂದು ಕಾಂಗ್ರೆಸ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...