ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಿದ್ದು ಅಪರಾಧ: ಜೈಶಂಕರ್ ವಿರುದ್ಧ ರಾಹುಲ್ ವಾಗ್ದಾಳಿ

Date:

ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, “ಶತ್ರು ದೇಶಕ್ಕೆ ನಾವು ದಾಳಿ ನಡೆಸುತ್ತೇವೆ ಎಂದು ಮೊದಲೇ ತಿಳಿಸಿ ದಾಳಿ ನಡೆಸುವುದು ಯಾವ ಮುರ್ಖತನ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. “ಮೊದಲೇ ಮಾಹಿತಿ ನೀಡಿದ್ದು ಅಪರಾಧ” ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಏಪ್ರಿಲ್ 22ರಂದು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿದೆ.

ಇದನ್ನು ಓದಿದ್ದೀರಾ? ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿವರೆಗೂ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ದಾಳಿ ನಡೆಸಿವೆ. ನೂರಕ್ಕೂ ಅಧಿಕ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಹೇಳಲಾಗಿದೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.

ಈ ಆಪರೇಷನ್ ಸಿಂಧೂರ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. “ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ನೆಲದ ಮೇಲೆ ದಾಳಿ ನಡೆಸುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದೆವು” ಎಂದು ಸಚಿವರು ಹೇಳುವ ಈ ವಿಡಿಯೋವನ್ನು ರಾಹುಲ್ ಗಾಂಧಿ ಅವರೂ ಹಂಚಿಕೊಂಡಿದ್ದಾರೆ.

“ಕಾರ್ಯಾಚರಣೆಯ ಆರಂಭದಲ್ಲಿ, ನಾವು ಪಾಕಿಸ್ತಾನಕ್ಕೆ ‘ನಾವು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಮತ್ತು ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ’ ಎಂದು ಸಂದೇಶವನ್ನು ಕಳುಹಿಸಿದ್ದೆವು” ಎಂದು ಜೈಶಂಕರ್ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿದ್ದೀರಾ? ಸೂಕ್ತ ಪ್ರತ್ಯುತ್ತರ ನೀಡಲಾಗಿದೆ: ಆಪರೇಷನ್ ಸಿಂಧೂರಗೆ ರಾಹುಲ್ ಗಾಂಧಿ, ಖರ್ಗೆ ಬೆಂಬಲ

“ಆದ್ದರಿಂದ ಮಿಲಿಟರಿಯು ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಆದರೆ ಅವರು ಈ ಉತ್ತಮ ಸಲಹೆಯನ್ನು ಪರಿಗಣಿಸದಿರಲು ನಿರ್ಧರಿಸಿದರು” ಎಂದು ಜೈಶಂಕರ್ ಅವರು ಹೇಳಿದ್ದಾರೆ.

ಈ ವಿಡಿಯೋ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ನಮ್ಮ ದಾಳಿಯ ಬಗ್ಗೆ ಮೊದಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಈ ಅಪರಾಧ ಮಾಡಿದೆ ಎಂದು ವಿದೇಶಾಂಗ ಸಚಿವಾಲಯ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ” ಎಂದಿದ್ದಾರೆ.

ಹಾಗೆಯೇ, “ಮೊದಲೇ ಮಾಹಿತಿ ನೀಡುವ ನಿರ್ಧಾರಕ್ಕೆ ಅನುಮತಿಸಿದ್ದು ಯಾರು ಮತ್ತು ಇದರಿಂದಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿದೆ” ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಪ್ರಶ್ನಿಸಿದ್ದಾರೆ.

ಆದರೆ ಆಪರೇಷನ್ ಸಿಂಧೂರ ಬಗ್ಗೆ ಭಾರತ ಮೊದಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂದು ಜೈಶಂಕರ್ ಹೇಳಿದ್ದರು ಎಂಬ ಹೇಳಿಕೆಗಳನ್ನು ಪತ್ರಿಕಾ ಮಾಹಿತಿ ಬ್ಯೂರೋ(ಪಿಐಬಿ) ತಳ್ಳಿಹಾಕಿದೆ. “ಸಚಿವರು ಅಂತಹ ಹೇಳಿಕೆ ನೀಡಿಲ್ಲ” ಎಂದು ಪಿಐಬಿಯ ಫ್ಯಾಕ್ಟ್ ಚೆಕ್ ಯೂನಿಟ್ ಹೇಳಿಕೊಂಡಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. “ನಿಜವಾಗಿಯೂ! ಈ ವ್ಯಕ್ತಿ ಏನು ಹೇಳುತ್ತಿದ್ದಾರೆ? ತಾನು ದಾಳಿ ನಡೆಸುತ್ತೇನೆ, ಆದರೆ ಅದು ಸೇನೆಯ ಮೇಲಿನ ದಾಳಿಯಲ್ಲ ಎಂದು ತನ್ನ ಶತ್ರುಗೆ ಹೇಳಿ ಬಳಿಕ ದಾಳಿ ನಡೆಸುವುದೇ? ನನ್ನ ದೇಶದ ಬಗ್ಗೆ ನನಗೆ ಭಯವಾಗಿದೆ” ಎಂದು ಸುರೇಶ್ ಎಂಬ ನೆಟ್ಟಿಗರು ಹೇಳಿದ್ದಾರೆ. “ಇದು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ನಡುವಿನ ಫಿಕ್ಸ್‌ ಮ್ಯಾಚ್‌ ಆಗಿದೆಯೇ” ಎಂದೂ ನೆಟ್ಟಿಗರು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...