ಒಳ ಮೀಸಲಾತಿ | ಬಿಜೆಪಿ ನಿಲುವು ಸ್ಪಷ್ಟವಿದೆ, ಕಾಂಗ್ರೆಸ್‌ನದ್ದೇ ಡಬಲ್ ಗೇಮ್: ಸಂಸದ ಬೊಮ್ಮಾಯಿ

Date:

ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, “ಮೊದಲು ಸಂವಿಧಾನ‌ ತಿದ್ದುಪಡಿ ಆದ ಮೇಲೆ ಮಾಡುತ್ತೇವೆ ಅಂತ ಕಣ್ಣೊರೆಸುವ ತಂತ್ರ ಮಾಡಿದರು. ಈಗ ಸುಪ್ರೀಂ ಕೋರ್ಟ್ ಆದೇಶ ಬಂದ ಮೇಲೆ ಚರ್ಚೆ ಮಾಡುತ್ತೇವೆ ಅಂತ ಹೇಳುತ್ತಾರೆ. ಅವರಿಗೆ ದಲಿತರಾಗಲಿ ಹಿಂದುಳಿದವರಾಗಲಿ ಅಭಿವೃದ್ಧಿ ಆಗುವುದು ಬೇಡ” ಎಂದರು.

“ಜಾತಿ ಗಣತಿ ವಿಚಾರದಲ್ಲಿಯೂ ಅಷ್ಟೆ, ಜಾತಿ ಗಣತಿ ವರದಿಯನ್ನು ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸ್ವೀಕಾರ ಮಾಡಲಿಲ್ಲ ಅಂತ ಹೇಳಿದ್ದಾರೆ. ಕಾಂತರಾಜು ಅವರು ಸಿದ್ದರಾಮಯ್ಯ ಅವರ ಅವಧಿಯಲ್ಲಿ 2017 ರಲ್ಲಿಯೇ ವರದಿ ನೀಡಿದ್ದಾರೆ. ಹಿಂದುಳಿಸ ವರ್ಗದ ಚಾಂಪಿಯನ್ ಅಂತ ಹೇಳಿಕೊಳ್ಳುವವರು ಆಗ ಯಾಕೆ ಒಪ್ಪಿಕೊಳ್ಳಲಿಲ್ಲ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂತರಾಜ್ ಅವರು ಅಧ್ಯಯನ ಮಾಡಿ ವರದಿ ಸಿದ್ದಪಡಿಸಿದ್ದರು. ಜಯಪ್ರಕಾಶ್ ಹೆಗಡೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ವರದಿ ತಿದ್ದುಪಡಿ ಮಾಡಿಸಿಕೊಂಡಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಹಿಂದುಳಿದ ವರ್ಗದವರ ಅಭಿವೃದ್ಧಿ ಆಗಬೇಕು. ಇದು ಗೊಂದಲದ ಗೂಡಾಗಬಾರದು, ಸಮಾಜದಲ್ಲಿ ಗೊಂದಲ ಉಂಟು ಮಾಡಬಾರದು. ಸಿಎಂ ತಮ್ಮ ಮೇಲೆ ಮುಡಾ ಹಗರಣದ ಆರೋಪ ಬಂದ ಕೂಡಲೆ ಅದರಿಂದ ದಾರಿ ತಪ್ಪಿಸಲು ಜಾತಿ ಗಣತಿ ವರದಿ ಪ್ರಸ್ತಾಪ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ” ಎಂದು ಕೇಳಿದರು.

ಬೊಮ್ಮಾಯಿ ಶಿಫಾರಸ್ಸು ಜಾರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಎಲ್ಲ ಪ್ರಮುಖರ ಜೊತೆ ಇಂದು ಸಮಾಲೋಚನಾ ಸಭೆ ಕರೆದಿದ್ದೆವು. ಹಿಂದೆ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಮೀಸಲಾತಿ ಬಗ್ಗೆ ನಿರ್ಣಯ ಕೈಗೊಂಡಿದ್ದರು. ವರ್ಗೀಕರಣ ಮಾಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿದ್ದರು. ಇವುಗಳ ಕುರಿತು ಚರ್ಚಿಸಿ ಒಳ ಮೀಸಲಾತಿ ವಿಚಾರವಾಗಿ ಸರ್ವರೊಂದಿಗೆ ಚರ್ಚೆ ಮಾಡಿದ್ದು, ಹಿಂದಿನ ಬೊಮ್ಮಾಯಿ ಸರಕಾರ ಕೇಂದ್ರಕ್ಕೆ ಮಾಡಿದ ಶಿಫಾರಸನ್ನು ರಾಜ್ಯದ ಕಾಂಗ್ರೆಸ್ ಸರಕಾರ ಯಥಾವತ್ತಾಗಿ ಜಾರಿಗೊಳಿಸಬೇಕು” ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...