ಎನ್‌ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ

Date:

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು, ‘ರಾಜ್ಯ ಶಿಕ್ಷಣ ನೀತಿ’ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ.

ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ 15 ಮಂದಿಯನ್ನೊಳಗೊಂಡ ಸಮಿತಿಯನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಎಂಟು ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಪ್ರಕಟಿಸಿದೆ.

ಈಗ ನೇಮಿಸಿರುವ ಸಮಿತಿಯು 2024ರ ಫೆಬ್ರವರಿ 28ರೊಳಗೆ ರಾಜ್ಯ ಸರ್ಕಾರಕ್ಕೆ ವರದಿಯನ್ನು ಒಪ್ಪಿಸುವಂತೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

doc

15 ಮಂದಿಯ ಸದಸ್ಯರ ಪಟ್ಟಿ ಹೀಗಿದೆ.

  1. ಪ್ರೊ.ಸಂಜಯ್ ಕೌಲ್(ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಮಾಜಿ ಕಾರ್ಯದರ್ಶಿ, ಕೇಂದ್ರ ಶಾಲಾ ಶಿಕ್ಷಣ)
  2. ಪ್ರೊಫೆಸರ್ ಎಸ್ ಜಾಫೆಟ್(ನಿವೃತ್ತ ಉಪಕುಲಪತಿ, ಬೆಂಗಳೂರು ನಗರ ವಿಶ್ವವಿದ್ಯಾನಿಲಯ)
  3. ಪ್ರೊಫೆಸರ್ ಜೋಗನ್ ಶಂಕರ್(ನಿವೃತ್ತ ಉಪಕುಲಪತಿ, ಕುವೆಂಪು ವಿಶ್ವವಿದ್ಯಾನಿಲಯ)
  4. ಡಾ. ಸುಧೀರ್ ಕೃಷ್ಣಸ್ವಾಮಿ(ಉಪಕುಲಪತಿ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ, ಬೆಂಗಳೂರು)
  5. ಪ್ರೊಫೆಸರ್ ರಾಜೇಂದ್ರ ಚನ್ನಿ(ನಿವೃತ್ತ ಪ್ರಾಧ್ಯಾಪಕರು, ಕುವೆಂಪು ವಿಶ್ವವಿದ್ಯಾನಿಲಯ))
  6. ಡಾ. ನಟರಾಜ್ ಬೂದಾಳು(ನಿವೃತ್ತ ಪ್ರಾಧ್ಯಾಪಕರು)
  7. ಪ್ರೊಫೆಸರ್ ಸುಧಾಂಶು ಭೂಷಣ್(ವಿಭಾಗ ಮುಖ್ಯಸ್ಥರು, ರಾಷ್ಟ್ರೀಯ ವೃತ್ತಿಪರ ಶಿಕ್ಷಣ, ಯೋಜನೆ ಮತ್ತು ಆಡಳಿತ (NIEPA), ನವದೆಹಲಿ)
  8. ಪ್ರೊಫೆಸರ್ ಪ್ರಣತಿ ಪಾಂಡಾ(ವಿಭಾಗ ಮುಖ್ಯಸ್ಥರು, ರಾಷ್ಟ್ರೀಯ ಔಪಚಾರಿಕವಲ್ಲದ ಶಿಕ್ಷಣ, ಯೋಜನೆ ಮತ್ತು ಆಡಳಿತ (NIEPA), ನವದೆಹಲಿ)
  9. ಡಾ. ಡಾ. ಫುರ್ಕಾನ್ ಕಮರ್(ಪ್ರಾಧ್ಯಾಪಕರು, ಜಾಮಿಯಾ ಮಿಲ್ಲೀಯಾ ವಿಶ್ವವಿದ್ಯಾನಿಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್, ನವದೆಹಲಿ)
  10. ಡಾ. ಶರತ್ ಅನಂತಮೂರ್ತಿ(ಪ್ರಾಧ್ಯಾಪಕರು, ಸ್ಕೂಲ್ ಆಫ್ ಫಿಸಿಕ್ಸ್, ಹೈದರಾಬಾದ್ ವಿಶ್ವವಿದ್ಯಾಲಯ)
  11. ಪ್ರೊಫೆಸರ್ ಎ ನಾರಾಯಣ(ಪ್ರಾಧ್ಯಾಪಕರು, ಅಝೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯ, ಬೆಂಗಳೂರು)
  12. ಡಾ. .ವಿ.ಪಿ. ನಿರಂಜನಾರಾಧ್ಯ(ಶಿಕ್ಷಣ ತಜ್ಞ ಹಾಗೂ ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿವಿಯ(ಎನ್‌ಎಲ್‌ಎಸ್‌ಐಯು) ಸಾರ್ವತ್ರೀಕರಣ ಶಿಕ್ಷಣ ವಿಭಾಗದ ಮುಖ್ಯಸ್ಥರು, ಬೆಂಗಳೂರು)
  13. ಡಾ.ಎಂ.ಎಸ್.ತಳವಾರ(ನಿವೃತ್ತ ಪ್ರಾಧ್ಯಾಪಕರು)
  14. ಡಾ.ಸಂತೋಷ್ ನಾಯ್ಕ್.ಆರ್.(ಪ್ರಾಧ್ಯಾಪಕರು, ಸಮಾಜಶಾಸ್ತ್ರ ವಿಭಾಗ, ಕರ್ನಾಟಕ ಮುಕ್ತ ವಿವಿ)
  15. ಡಾ.ವಿನಯ ಒಕ್ಕುಂದ(ಸಹ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾಂಡೇಲಿ, ಉ.ಕನ್ನಡ)

ಇವರುಗಳಲ್ಲದೇ, ಎಂಟು ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಆದೇಶದಲ್ಲಿ ಉಲ್ಲೇಖಿಸಿದ್ದು, ಸಮಿತಿಯು ಅವರನ್ನು ಸಂದರ್ಭಕ್ಕೆ ತಕ್ಕಂತೆ ಅವರ ಸಲಹೆಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದೆ.

ಎಂಟು ಮಂದಿ ವಿಷಯ ತಜ್ಞರು

  1. ಯೋಗೇಂದ್ರ ಯಾದವ್
  2. ಪ್ರೊಫೆಸರ್ ರಹಮತ್ ತರೀಕೆರೆ
  3. ಜಾನಕಿ ನಾಯರ್
  4. ಡಾ.ಎಸ್.ಚಂದ್ರಶೇಖರ ಶೆಟ್ಟಿ
  5. ಸೋನಮ್ ವಾಂಗ್ಚುಕ್
  6. ಪ್ರೊಫೆಸರ್ ವಲೇರಿಯನ್ ರೋಡ್ರಿಗಸ್
  7. ಪ್ರೊಫೆಸರ್ ಸಬೀಹಾ ಭೂಮಿಗೌಡ
  8. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪದನಿಮಿತ್ತ ನಿರ್ದೇಶಕರು(ಹಾಲಿ ಈ ಸ್ಥಾನದಲ್ಲಿ ನಿವೃತ್ತ ಪ್ರೊಫೆಸರ್ ಚಂದ್ರ ಪೂಜಾರಿ ಇದ್ದಾರೆ)

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

02 1 01 2

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...