ಮಂಡ್ಯ ಜನರ ನೆಮ್ಮದಿ ಹಾಳು ಮಾಡಲು ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ : ಚಲುವರಾಯಸ್ವಾಮಿ

Date:

ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಜೆಡಿಎಸ್ ನಾಯಕ ಎಚ್ ​ಡಿ ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ. ನೀವು ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದವೇ ಕಾರಣ ಎಂಬುದನ್ನು ಮರೆಯಬೇಡಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ. ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು (ಸರ್ಕಾರವನ್ನು) ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು” ಎಂದರು.

“ಚುನಾವಣೆ ಗಮನದಲ್ಲಿಟ್ಟುಕೊಂಡು ಕುಮಾರಸ್ವಾಮಿ ಈ ರೀತಿ ಮಾಡುತ್ತಿದ್ದಾರೆ. ಇವರು ಸಿಂಗಾಪುರದಲ್ಲಿ ಕುಳಿತುಕೊಂಡು ಹೇಗೆಲ್ಲಾ ಮಾತನಾಡಿದ್ದರು ಎಂಬುದನ್ನು ಗಮನಿಸಿ. ಕುಮಾರಸ್ವಾಮಿಯವರು ಬಿಜೆಪಿಯನ್ನು ಟೀಕಿಸಿದಷ್ಟು ಬೇರೆ ಯಾರೂ ಟೀಕಿಸಿಲ್ಲ. ದೇವೇಗೌಡರೇ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಜೆಡಿಎಸ್​ನವರು ಟೀಕೆ‌ ಮಾಡಿದಷ್ಟು ಕಾಂಗ್ರೆಸ್ ಕೂಡ ಮಾಡಿಲ್ಲ. ಇದೀಗ ಅವರಿಬ್ಬರೂ (ಜೆಡಿಎಸ್, ಬಿಜೆಪಿ) ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ಜಿಲ್ಲೆಯ ಜನರೇ ನಿಮಗೆ ಅಧಿಕಾರ ನೀಡಿದ್ದು. ಕಳೆದ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಮಂಡ್ಯ ಜಿಲ್ಲೆಯ ಜನರು ನಿಮ್ಮ ಗಿಮಿಕ್ ಅನ್ನು ನಂಬುವುದಿಲ್ಲ. ಅದೇ ರೀತಿ ನಿಮ್ಮನ್ನು ಕ್ಷಮಿಸುವುದೂ ಇಲ್ಲ. ಕೇಸರಿ ಶಾಲು ಹಾಕುವ ಬದಲು ನೇರವಾಗಿ ಬಿಜೆಪಿಗೆ ಸೇರ್ಪಡೆಯಾಗಿ. ರೈತರ ಹಸಿರು ಶಾಲು ಬಿಟ್ಟಾಯ್ತು. ಜೆಡಿಎಸ್​ನ ಜಾತ್ಯತೀತತೆಯನ್ನೂ ಬಿಟ್ಟಾಯ್ತು. ಇನ್ನು ಬಿಜೆಪಿಗೆ ಸೇರಿಕೊಳ್ಳಿ. ಎಲ್ಲವನ್ನೂ ಜನ ತೀರ್ಮಾನಿಸಲಿ” ಎಂದು ಕುಮಾರಸ್ವಾಮಿ ವಿರುದ್ಧ ಸಚಿವರು ಕಿಡಿ ಕಾರಿದರು.

“ಕೆರಗೋಡು ಗ್ರಾಮದ ಮಧ್ಯಭಾಗದಲ್ಲಿರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಮಾತ್ರ ಆರೋಹಣ, ಅವರೋಹಣ ಮಾಡುವುದಾಗಿ ಅನುಮತಿ-ಒಪ್ಪಂದ ಪತ್ರ ಬರೆಯಲಾಗಿದೆ. ಇದರಂತೆಯೇ ಅವರು ನಡೆದುಕೊಂಡಿದ್ದರು. ಆದರೆ, ನಂತರ ಅಲ್ಲಿ ಧರ್ಮದ ಧ್ವಜ ಆರೋಹಣ ಮಾಡಲು ಯಾರು ಪ್ರೇರೇಪಣೆ ಕೊಟ್ಟರೋ ತಿಳಿಯದು. ಚುನಾವಣೆ ಸಂದರ್ಭದಲ್ಲಿ ಅದರ ಲಾಭ ಪಡೆಯಲು ಮಾಡಿದ್ದಾರೋ ತಿಳಿಯದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...