ಒಳಮೀಸಲಾತಿ | ‌ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ವರದಿ ಜಾರಿ ಇಷ್ಟವಿಲ್ಲ: ವಿಪಕ್ಷ ನಾಯಕ ಆರ್‌ ಅಶೋಕ್

Date:

ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

‌ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಸೇರಿದಂತೆ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಇದು ಜಾರಿಯಾಗಲು ಇಷ್ಟವಿಲ್ಲ. ಎಲ್ಲ ಅವಕಾಶವಿದ್ದರೂ ಮತ್ತೆ ಆಯೋಗ ರಚಿಸಿ, ಮೂರು ತಿಂಗಳವರೆಗೆ ಕಾಯಲು ನಿರ್ಧರಿಸಲಾಗಿದೆ. ಇನ್ನು ಜನಗಣತಿ ಆರಂಭವಾದರೆ ಆಗ ಮತ್ತೊಂದು ಸಬೂಬು ಹೇಳಬಹುದು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ” ಎಂದರು.

“ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಒಪ್ಪಿತ್ತು. ಎಷ್ಟು ಮೀಸಲು ನೀಡಬೇಕೆಂದು ತಿಳಿಸಲಾಗಿತ್ತು. ಇನ್ನು ಯಾವುದೇ ಹುನ್ನಾರ ಮಾಡದೆ ಸರ್ಕಾರ ಒಳಮೀಸಲು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲ್ಯಾಂಡ್‌ ಜಿಹಾದ್‌

“ರಾಜ್ಯದಲ್ಲಿ ಲವ್‌ ಜಿಹಾದ್‌ನಂತೆಯೇ, ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್‌ ಜಿಹಾದ್‌ ನಡೆಯುತ್ತಿದೆ. ಭೂಮಿಯನ್ನು ಹೇಗೆ ಕಬಳಿಸಬೇಕೆಂದು ಸಚಿವ ಜಮೀರ್‌ ಅಹ್ಮದ್‌ ಯೋಜನೆ ರೂಪಿಸಿದ್ದಾರೆ. ಇನ್ನೂ ಕೆಲವರು ಸಂಸತ್ತು ನಮ್ಮದು, ವಿಧಾನಸೌಧವೂ ನಮ್ಮದು ಎಂದಿದ್ದಾರೆ. ಮುಸ್ಲಿಂ ಮತಾಂಧರ ವಿರುದ್ಧ ಇದ್ದ ಕೇಸು ವಾಪಸ್‌ ಪಡೆಯುವುದು, ಭಯೋತ್ಪಾದನೆ, ಪಾಕಿಸ್ತಾನಕ್ಕೆ ಜೈಕಾರ ಮೊದಲಾದವುಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ” ಎಂದು ದೂರಿದರು.

“ವಕ್ಫ್‌ ಬೋರ್ಡ್‌ ರೈತರ ಜಮೀನುಗಳನ್ನು ಕಬಳಿಸುತ್ತಿದೆ. ಇದು ಭಾರತಕ್ಕೆ ಸೇರಿದ ಆಸ್ತಿ. ಕಂಡ ಜಮೀನುಗಳೆಲ್ಲ ತಮ್ಮದೇ ಎಂದು ಇವರು ಹೇಳುತ್ತಿದ್ದಾರೆ. ಕೆಲವು ಮತಾಂಧ ಅಧಿಕಾರಿಗಳು ಖಬರ್‌ಸ್ತಾನ, ವಕ್ಫ್‌ ಬೋರ್ಡ್‌ ಆಸ್ತಿ ಎಂದು ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮೂಲಕ ರೈತರ ಅನ್ನ ಕೀಳುವ ಕೆಲಸ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಟಿಪ್ಪು ದೆವ್ವ ಬಂದಿದ್ದು, ಆ ದೆವ್ವವನ್ನು ಬಿಡಿಸಬೇಕಾಗಿದೆ. ಇದರ ವಿರುದ್ಧ ಹೋರಾಟ ಮಾಡಬೇಕಿದೆ. ಇಲ್ಲವಾದರೆ ವಿಧಾನಸೌಧ, ಸಂಸತ್ತು, ಬಳಿಕ ದೇವಸ್ಥಾನಗಳನ್ನೂ ವಕ್ಫ್‌ ಆಸ್ತಿ ಎನ್ನುತ್ತಾರೆ. ವಕ್ಫ್‌ ಆಸ್ತಿಗಳನ್ನು ದೊಡ್ಡ ದೊಡ್ಡ ನಾಯಕರು ನುಂಗಿದ್ದಾರೆ. ಈ ಕುರಿತ ವರದಿಯನ್ನು ಹಿಂದೆ ವಿಧಾನಪರಿಷತ್‌ನಲ್ಲಿ ಮಂಡಿಸಲಾಗಿತ್ತು. ಕಾಂಗ್ರೆಸ್‌ ಸರ್ಕಾರ ಈಗ ಆ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲಿ” ಎಂದು ಆಗ್ರಹಿಸಿದರು.

ದ್ವೇಷ ರಾಜಕಾರಣ

“ರಾಜ್ಯ ಸರ್ಕಾರಕ್ಕೆ ಹಣವಿಲ್ಲದೆ ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ ನೀಡಿದೆ. ಆದರೆ ಜಯನಗರ ಶಾಸಕರಿಗೆ ಆ ಅನುದಾನ ಕೂಡ ನೀಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ರಾಮಲಿಂಗಾರೆಡ್ಡಿ ಅವರ ಕ್ಷೇತ್ರಕ್ಕೆ 80 ಕೋಟಿ ರೂ. ನೀಡಲಾಗಿತ್ತು. ಜಯನಗರದ ಜನರು ಕೂಡ ತೆರಿಗೆ ಕಟ್ಟಿದ್ದಾರೆ. ಈ ದ್ವೇಷ ರಾಜಕಾರಣದ ವಿರುದ್ಧ ಹೋರಾಟ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...