ಒಳಮೀಸಲಾತಿ | ‘ಬೇಡ ಜಂಗಮ’ ಸಂಘ ಹೊರಡಿಸಿರುವ ಪ್ರಕಟಣೆ ವಿರುದ್ಧ ಪರಿಶಿಷ್ಟ ಸಮುದಾಯ ಆಕ್ರೋಶ

Date:

ಒಳಮೀಸಲಾತಿ ಒದಗಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆ ವೇಳೆ, ಗಣತಿದಾರರು ಮನೆಗಳಿಗೆ ಬಂದಾಗ ಯಾವ ರೀತಿ ಉತ್ತರಿಸಬೇಕು ಎಂಬುದುರ ಕುರಿತು ‘ಬೇಡ ಜಂಗಮ’ ಸಮುದಾಯಕ್ಕೆ ಸೂಚಿಸುವ ಪ್ರಕಟಣೆಯೊಂದನ್ನು ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿದೆ. ಈ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿರುವ ವಿವರಗಳು ಪರಿಶಿಷ್ಟ ಸಮುದಾಯಗಳ ಆಕ್ರೋಶಕ್ಕೆ ಗುರಿಯಾಗಿದೆ. ಜಂಗಮ ಸಮುದಾಯವನ್ನು ಸಂಘವು ಬೆದರಿಸುತ್ತಿದೆ ಎಂದು ಸಮುದಾಯಗಳು ಆರೋಪಿಸಿವೆ.

ಬೇಡ ಜಂಗಮ ಸಂಘವು ಹೊರಡಿಸಿರುವ ಪ್ರಕರಣೆಯಲ್ಲಿ ಸಮೀಕ್ಷೆದಾರರು ಕೇಳಬಹುದಾದ ಪ್ರಶ್ನೆಗಳಿಗೆ ಯಾವ ರೀತಿಯ ಉತ್ತರ ನೀಡಬೇಕು ಎಂದು ವಿವರಿಸಲಾಗಿದೆ. ಗಣತಿದಾರರು ‘ನೀವು ಪರಿಶಿಷ್ಟ ಜಾತಿಯವರೇ’ ಎಂದು ಕೇಳಿದಾಗ, ‘ಹೌದು’ ಎಂದು ಉತ್ತರಿಸಬೇಕು. ಮೂಲ ಜಾತಿ ಕಾಲಂನಲ್ಲಿ ‘ಬೇಡ ಜಂಗಮ’ ಮತ್ತು ಕಸುಬು ಕಾಲಂನಲ್ಲಿ ‘ಧಾರ್ಮಿಕ ಭಿಕ್ಷುಗಳು’ ಎಂದು ಬರೆಯಿಸಬೇಕು ಎಂದು ನಿರ್ದೇಶನ ನೀಡಿದೆ.

ದತ್ತಾಂಶ ಸಂಗ್ರಾಹಕರು ಜಾತಿ ಪ್ರಮಾಣಪತ್ರ ಕೇಳಿದರೆ, ‘ಗಣತಿಗೆ ಜಾತಿ ಪ್ರಮಾಣಪತ್ರ ಕಡ್ಡಾಯವಲ್ಲ’ ಎಂದು ಮಾತ್ರವೇ ಉತ್ತರಿಸಬೇಕು. ಆ ಮಾಹಿತಿ ಪರಿಗಣಿಸದಿದ್ದರೆ ಗಣತಿಯ ಹಸ್ತಪ್ರತಿಗೆ ಸಹಿ ಮಾಡಬೇಡಿ ಎಂದು ಸೂಚಿಸಿದೆ. ಅಲ್ಲದೆ, ಗಣತಿದಾರರ ಗುರುತಿನ ಚೀಟಿ, ಫೋಟೊ ಹಾಗೂ ಸಂಪರ್ಕ ಸಂಖ್ಯೆಯನ್ನು ಒಡೆದುಕೊಳ್ಳಿ ಎಂದು ಹೇಳಿದೆ. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕಟಣೆ ವಿರುದ್ಧ ಪರಿಶಿಷ್ಟ ಸಮುದಾಯಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಧಿಕೃತ ಸಂಘವು ಜಂಗಮ ಸಮುದಾಯದ ಜನರನ್ನು ಹೆದರಿಸುತ್ತಿದೆ. ಪರಿಶಿಷ್ಟ ಜಾತಿ ಸೌಲಭ್ಯಗಳನ್ನು ಪಡೆಯಲು ಷ್ಯಡ್ಯಂತ್ರ ಮಾಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಣಿ ಬೇಟೆಯಾಡಿ ತಿನ್ನುವ ಬೇಡ ಜಂಗಮ/ ಬುಡ್ಗ ಜಂಗಮ ಸಮುದಾಯದಲ್ಲಿ ಕೇವಲ 150 ಕುಟುಂಬಗಳು ಮಾತ್ರವೇ ಇವೆ. ಆದರೆ, ವೀರಶೈವ ಲಿಂಗಾಯತರು ತಮ್ಮ ಪಂಗಡದಲ್ಲಿರುವ ಜಂಗಮ ಪದವನ್ನು ಬಳಸಿಕೊಂಡು ಪರಿಶಿಷ್ಟ ಜಾತಿ ಸಮುದಾಯಗಳ ಹಕ್ಕು ಕಸಿದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ವೀರಶೈವ ಲಿಂಗಾಯತರು ‘ಜಂಗಮ’ ಹೆಸರನ್ನು ಬಳಸಿಕೊಂಡು ಪರಿಶಿಷ್ಟ ಜಾತಿಯ ಸೌಲಭ್ಯಗಳನ್ನು ಪಡೆಯಲು ಹುನ್ನಾರ ನಡೆಸಿದ್ದಾರೆ. ಇದು ಕಾನೂನುಬಾಹಿರವಾಗಿದೆ. ಈ ಕುರಿತು ನ್ಯಾ.ಎಚ್‌.ಎನ್‌. ನಾಗಮೋಹನದಾಸ್‌ ಆಯೋಗಕ್ಕೆ ದೂರು ನೀಡಲಿದ್ದೇವೆ” ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್‌.ಆಂಜನೇಯ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...