ಒಳ ಮೀಸಲಾತಿ | ಹೊಣೆ ಕೇಂದ್ರದ ಹೆಗಲಿಗೆ ಹಾಕಿ ರಾಜ್ಯ ಸರ್ಕಾರದಿಂದ ರಾಜಕೀಯ: ದೇವೇಗೌಡ ಆರೋಪ

Date:

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆಸಲಾಗಿದ್ದ ಸಂಪುಟ ಸಭೆಯಲ್ಲಿಈ ತೀರ್ಮಾನ ಕೈಗೊಳ್ಳಲಾಗಿತ್ತು.

ಈ ವಿಚಾರವಾಗಿ ಹಾಸನದಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, “ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಹೊಣೆ ಕೇಂದ್ರ ಸರ್ಕಾರಕ್ಕೆ ವರ್ಗಾಯಿಸುವ ಮೂಲಕ ರಾಜ್ಯ ಸರ್ಕಾರವು ರಾಜಕೀಯ ಮಾಡಲು ಹೊರಟಿದೆ” ಎಂದು ಆರೋಪಿಸಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ನನ್ನ ಸಚಿವ ಸಂಪುಟದ ಸದಸ್ಯರಾಗಿದ್ದ ಸಿದ್ಧರಾಮಯ್ಯ ನೇತೃತ್ವದಲ್ಲಿಯೇ ಮೀಸಲಾತಿಯಲ್ಲಿ ವರ್ಗೀಕರಣ ಮಾಡಿ ಸಾಮಾಜಿಕ ನ್ಯಾಯ ಒದಗಿಸಲಾಗಿತ್ತು. ಮುಸಲ್ಮಾನರಿಗೆ ಮೀಸಲಾತಿ, ನಾಯಕ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದು ನಾನು. ಈಗ ಪರಿಶಿಷ್ಟರ ಒಳ ಮೀಸಲಾತಿಯ ಹೊಣೆಯನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಿ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡಲು ಹೊರಟಿದೆ. ಲೋಕಸಭಾ ಚುನಾವಣೆಗೆ ಇದೇ ಒಳ ಮೀಸಲಾತಿ ವಿಷಯವನ್ನೇ ಮುಂದಿಟ್ಟುಕೊಂಡು ಹೋರಾಟ ಮಾಡುವೆ” ಎಂದು ದೇವೇಗೌಡರು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂದು ಒಕ್ಕಲಿಗ ಸಮುದಾಯಕ್ಕೆ ನೀಡಿದ್ದ ಮೀಸಲಾತಿಯನ್ನು ಕಡಿಮೆ ಮಾಡಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ನಾನು” ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿಕೊಂಡಿದ್ದಾರೆ.

“ಮುಸಲ್ಮಾನ ಬಂಧುಗಳು ನನ್ನ ಅಣ್ಣ ತಮ್ಮಂದಿರು, ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ. ನಿಮಗೆ ಮೀಸಲಾತಿ ನೀಡಿದ್ದೇನೆ. ಖರ್ಗೆಯವರು ಒಮ್ಮೆ ಮಾತ್ರ ಮೀಸಲಾತಿ ಕೊಡೋಣಾ ಎಂದಿದ್ದರು. ನಾನು ಕೊಟ್ಟ ಮೀಸಲಾತಿಯನ್ನ ಇಲ್ಲಿಯವರೆಗೂ ತೆಗೆದು ಹಾಕಲಿಕ್ಕೆ ಆಗಿಲ್ಲ. ಬೆಟ್ಟದ ರಂಗನಾಥ ಸ್ವಾಮಿಗೆ ಹರಕೆ ಮಾಡಿಕೊಂಡ ನಂತರ‌ ನಾನು ಹುಟ್ಟಿದ್ದೇನೆ. ಎಲ್ಲ ಸಮುದಾಯದ ದೇವಾಲಯಗಳಿಗೂ ಹೋಗಿದ್ದೇನೆ. ನನಗೆ ಎಲ್ಲ ದೇವಸ್ಥಾನಗಳೂ ಒಂದೇ” ಎಂದಿದ್ದಾರೆ.

“ನಾನು ಈ ಜಿಲ್ಲೆಗೆ ಬಂದಿರೋದು ನನ್ನ ಮೊಮ್ಮಗನನ್ನು ಗೆಲ್ಲಿಸೋದಕ್ಕಲ್ಲ, ಈ ಜಿಲ್ಲೆಯ ಅಭಿವೃದ್ಧಿಗಾಗಿ. ನಾವು ಏನು ಮೋಸ ಮಾಡಿದ್ದೇವೆ ಹೇಳಲಿ. ನಮ್ಮ ಸಮಾಜದವರನ್ನ ದೊಡ್ಡ ದೊಡ್ಡ ಸ್ಥಾನಕ್ಕೆ ಕಳಿಸಿದ್ದೇನೆ. ಅವರೆಲ್ಲ ಸೇರಿ ನಮ್ಮನ್ನ ಸೋಲಿಸಿದರು. ನಾನು ಕಾಂಗ್ರೆಸ್‌ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ. ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ” ಎಂದಿದ್ದಾರೆ.

“ಗುಂಡೂರಾವ್‌ ಸರ್ಕಾರದಲ್ಲಿ ಅಂಬೇಡ್ಕರ್ ಅವರು ನೀಡಿದ್ದ 18% ಮೀಸಲಾತಿಯಲ್ಲಿ ಎಸ್ಸಿಗೆ 15%, ಎಸ್ಟಿಗೆ 3% ನೀಡಿದ್ದರು. ಆದರೆ, ಆ ಕೋಟಾ ಭರ್ತಿ ಮಾಡಲಿಲ್ಲ. ನಂತರ ನಾನು 1983ರಲ್ಲಿ ಲೋಕೋಪಯೋಗಿ ಸಚಿವನಾದಾಗ ಅಂಬೇಡ್ಕರ್ ಕೊಟ್ಟಂತಹ ಕೋಟಾ ಭರ್ತಿಯಾಗಲು 15% ಮೀಸಲಾತಿಯನ್ನು 18%ಗೆ ಹೆಚ್ಚಿಸಿದೆ. 3% ಇದ್ದ ಎಸ್ಟಿ ಮೀಸಲಾತಿಯನ್ನು 5%ಗೆ ಹೆಚ್ಚಿಸಿದೆ. ಅಂಬೇಡ್ಕರ್ ಅವರ ಆಶಯದಂತೆ ಆ ಕೋಟಾ ಗುರಿ ಮುಟ್ಟುವವರೆಗೂ ಕೆಲಸ ಮಾಡಿದ್ದೇನೆ. ಅದು ಖಾಯಂ ಆಗಿರಬೇಕು ಅಂತ ಮಾಡಿದ್ದೆ. ಇದು ಎಲ್ಲ ಇಲಾಖೆಗಳ ಮೇಲೆ ಪರಿಣಾಮ ಬೀರುತ್ತೆ ಎಂದು ಅವತ್ತು ಎಲ್ಲರೂ ಹೇಳಿದ್ದರು. ಆದರೂ ನಾನು ಮೀಸಲಾತಿ ಹೆಚ್ಚಿಸುವ ಧೈರ್ಯ ಮಾಡಿದ್ದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗೋಧ್ರಾ ಹೇಳಿಕೆ ಸಿಸಿಬಿ ವಿಚಾರಣೆ | ಸರ್ಕಾರ ಕಾಂಗ್ರೆಸ್ಸಿನದೋ, ಆರ್‌ಎಸ್‌ಎಸ್‌ನದೋ?: ಹರಿಪ್ರಸಾದ್ ಆಕ್ರೋಶ

“ಅಯೋಧ್ಯೆಗೆ ಜ.21ರಂದು ಸಂಜೆಯೇ ವಿಶೇಷ ವಿಮಾನದಲ್ಲಿ ತೆರಳಿ ಜ.22ರಂದು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ. ನನ್ನ ಪತ್ನಿ ಚನ್ನಮ್ಮ, ಎಚ್‌.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರೂ ಅಯೋಧ್ಯೆಗೆ ಬರಲಿದ್ದಾರೆ” ಎಂದು ಇದೇ ವೇಳೆ ದೇವೇಗೌಡರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...