ನಮ್ಮ ಬಗ್ಗೆಯೂ ತನಿಖೆ ಮಾಡಿ, ಆದರೆ ಮೊದಲು ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ ವೈ ವಿಜಯೇಂದ್ರ

Date:

ಮುಖ್ಯಮಂತ್ರಿಗಳೇ ನೀವು ಅಹಿಂದ ಹೆಸರು ಹೇಳಿ ಅಧಿಕಾರಕ್ಕೆ ಬಂದವರು. ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆದುದನ್ನು ಒಪ್ಪಿಕೊಂಡಿದ್ದೀರಿ. ತಮ್ಮ ಸಂಪುಟದ ಸಚಿವರಾಗಿದ್ದವರು ಇವತ್ತು ಇ.ಡಿ. ಕಸ್ಟಡಿಯಲ್ಲಿದ್ದಾರೆ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ಇಂತಹ ಹಗರಣ ನಡೆಯಲು ಅಸಾಧ್ಯ. ತಾವು ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ವಿನಂತಿ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬಳ್ಳಾರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ವಾಲ್ಮೀಕಿ ನಿಗಮದ ಹಣ ದೋಚಿ ಆ ಹಣದಿಂದ ಹೆಂಡ ಖರೀದಿಸಿ, ಬಳ್ಳಾರಿ ಮತ್ತಿತರ ಕಡೆ ಚುನಾವಣೆ ವೇಳೆ ಬಳಸಿದ್ದಾರೆ. ಅಲ್ಲದೆ, ಹೊರರಾಜ್ಯಗಳಲ್ಲೂ ಬಳಸಿದ್ದಾರೆ ಎಂದು ಇ.ಡಿ. ಹೇಳಿದೆ. ಹಾಗಿದ್ದರೆ ಇದೆಲ್ಲದಕ್ಕೂ ಕೇವಲ ಅಧಿಕಾರಿಗಳು ಹೊಣೆಗಾರರೇ” ಎಂದು ಕೇಳಿದರು.

“ಅಸಮರ್ಥ ಸಿಎಂ ಇದ್ದರೆ ಅಥವಾ ಸಚಿವರ, ಸಿಎಂ ಮೌಖಿಕ ಒಪ್ಪಿಗೆ ಇದ್ದರೆ ಮಾತ್ರ ವಾಲ್ಮೀಕಿ ನಿಗಮದ ಹಣ ದುರುಪಯೋಗದಂತಹ ಭ್ರಷ್ಟಾಚಾರದ ಹಗರಣ ನಡೆಯಲು ಸಾಧ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಸ್ತಿತ್ವವೇ ಇಲ್ಲದ ಕಂಪೆನಿ ಹೆಸರಿಗೆ ಹಣ ವರ್ಗಾವಣೆ ಮಾಡಿ, ಅದನ್ನು ವಿತ್‍ಡ್ರಾ ಮಾಡಿ ಹಗರಣ ಮಾಡಿದ್ದಾರೆ. ಬಿಜೆಪಿ ಸರಕಾರದ ಹಗರಣಗಳ ತನಿಖೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಯಾರು ನಿಮ್ಮನ್ನು ತಡೆಯುತ್ತಿದ್ದಾರೆ? ಯಾವುದೇ ಹಗರಣ ಇದ್ದರೂ ತನಿಖೆ ಮಾಡಿ. ಆದರೆ, ನಮ್ಮ ಪ್ರಶ್ನೆಗೆ ಮೊದಲು ಸಿಎಂ ಉತ್ತರಿಸಬೇಕು. ತಾವೇ ಹಣಕಾಸಿನ ಸಚಿವರಾದ ಕಾರಣ ಈ ಹಗರಣಕ್ಕೆ ಸಂಬಂಧಿಸಿ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

ಹಗರಣದಲ್ಲಿ ದೊಡ್ಡ ದೊಡ್ಡ ಹೆಸರುಗಳು

“ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಸುಮಾರು 2 ತಿಂಗಳ ಬಳಿಕ ನಿನ್ನೆ 25 ಲಕ್ಷ ಪರಿಹಾರ ಘೋಷಿಸಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ನಿರಂತರವಾಗಿ ಆಗ್ರಹಿಸುತ್ತ ಬಂದಿತ್ತು ಎಂದರು. ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡ ದೊಡ್ಡ ಹೆಸರುಗಳು ಕೇಳಿಬರುತ್ತಿದೆ. ಕೇವಲ ನಾಗೇಂದ್ರ ರಾಜೀನಾಮೆ, ಅವರ ಕಸ್ಟಡಿಗೆ ಈ ಹಗರಣ ಮುಗಿಯುವುದಿಲ್ಲ” ಎಂದು ವಿಜಯೇಂದ್ರ ತಿಳಿಸಿದರು.

“ಲ್ಯಾಂಬೊರ್ಗಿನಿ, ಬೆಂಝ್ ಕಾರನ್ನು ವಾಪಸ್ ಕೊಟ್ಟು ಹಣ ತರುವುದಾಗಿ ಹೇಳಿದ್ದಾರೆ. ಅದನ್ನು ನಿಮ್ಮಲ್ಲಿರುವ ಯಾರಿಗೋ ಗಿಫ್ಟ್ ಕೊಡಲು ಖರೀದಿ ಮಾಡಿರಬಹುದಲ್ಲವೇ? ಕದ್ದ ಮಾಲು ವಾಪಸ್ ಬಂದಿದೆ ಎಂದ ಮಾತ್ರಕ್ಕೆ ಬಚಾವಾಗಲು ಸಾಧ್ಯವಿಲ್ಲ. ದುಡ್ಡನ್ನು ಚುನಾವಣೆಗೆ ಬಳಸಿದ್ದಾರೆ. ಸತ್ಯನಾರಾಯಣ ವರ್ಮ ಮನೆಯಲ್ಲಿ 12 ಕೋಟಿ ಸಿಕ್ಕಿದೆ. ಆ ಕುರಿತು ನನಗೇನೋ ಇವತ್ತಿಗೂ ಅನುಮಾನವಿದೆ” ಎಂದರು.

“ಇ.ಡಿ., ಸಿಬಿಐ ಮೂಲಕ ಸರಕಾರ ಅಭದ್ರಗೊಳಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಸಿಎಂ ಹೇಳುತ್ತಾರೆ. ಹಿಂದುಳಿದ ವರ್ಗಗಳ ಮುಖ್ಯಮಂತ್ರಿಯ ಸ್ಥಾನ ಅಭದ್ರಗೊಳಿಸುವುದೆಂದು ಯಾಕೆ ಭಾವಿಸುತ್ತೀರಿ? ಭ್ರಷ್ಟಾಚಾರ ಎಂದರೆ ಅದು ಭ್ರಷ್ಟಾಚಾರ ತಾನೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...