ಮನಮೋಹನ್ ಸಿಂಗ್ ದುರ್ಬಲ ಪ್ರಧಾನಿಯೇ?

Date:

ಯುಪಿಎ 1 ಮತ್ತು 2 ಅವಧಿಯಲ್ಲಿನ ಕಲ್ಯಾಣ ಯೋಜನೆಗಳ ಕಾಯ್ದೆಗಳು ಮತ್ತು ಕರಾಳ ಶಾಸನಗಳು ಎರಡಕ್ಕೂ ಮನಮೋಹನ್ ಸಿಂಗ್‌ ಅವರು ಹೊಣೆಗಾರರಾಗಿರಲಿಲ್ಲ ಎನ್ನುವ ವಾಸ್ತವ ದುರ್ಬಲ ಪ್ರಧಾನಿಯನ್ನು ಸಂಕೇತಿಸುತ್ತದೆಯೇ?

2004-2014ರ ಹತ್ತು ವರ್ಷಗಳ ಪ್ರಧಾನಮಂತ್ರಿಗಳ ಅವಧಿಯಲ್ಲಿ ಮನಮೋಹನ್ ಸಿಂಗ್ ತಮ್ಮ ಎಲ್‌ಪಿಜಿ ಎನ್ನುವ ಕರಾಳ ನೀತಿಯಿಂದ ಉಂಟಾದ ಗುಣಪಡಿಸಲಾಗದ ಗಾಯಗಳಿಗೆ ಮುಲಾಮು ಎನ್ನುವಂತೆ ಕಲ್ಯಾಣ ಯೋಜನೆಗಳ ಕಾಯ್ದೆಗಳನ್ನು ಜಾರಿಗೊಳಿಸಿದ್ದು ಸಹ ಚರ್ಚೆಗೆ ಯೋಗ್ಯವಾಗಿದೆ.

ಆದರೆ ಅರುಣಾ ರಾಯ್‌, ಜೀನ್‌ ಡ್ರೀಜೆಯಂತಹ ಅಭಿವೃದ್ಧಿ ಆರ್ಥಿಕ ತಜ್ಞರು, ಹರ್ಷ ಮಂದರ್‌ರಂತಹ ಚಿಂತಕರು, ಸೋನಿಯಾ ಗಾಂಧಿಯವರಂತಹ ಪ್ರಬುದ್ಧ ರಾಜಕಾರಣಿಗಳನ್ನು ಒಳಗೊಂಡ ‘ರಾಷ್ಟ್ರೀಯ ಸಲಹಾ ಮಂಡಳಿ’ಯ(ಎನ್‌ಎಸಿ) ಸಾಮಾಜಿಕ ಚಿಂತನೆ ಮತ್ತು ಅರೆ ಸಮಾಜವಾದಿ ಒಳನೋಟಗಳ ಕಾರಣದಿಂದ ಈ ಕಲ್ಯಾಣ ಯೋಜನೆಗಳ ಕಾಯ್ದೆಗಳು ಅನುಷ್ಠಾನಗೊಂಡವು ಎನ್ನುವುದು ವಾಸ್ತವ.

ಇಲ್ಲಿ ಸಿಂಗ್‌ ಅವರು ಅನೇಕ ‘ರೆ’ಗಳ ಋಣದಲ್ಲಿದ್ದಾರೆ. ಎನ್‌ಎಸಿ ಇಲ್ಲದೇ ಹೋಗಿದ್ದರೆ, ಡಿ ಫ್ಯಾಕ್ಟೋ ಪಿಎಂ ಎಂದು ಅಪಪ್ರಚಾರಕ್ಕೆ ಒಳಗಾಗಿದ್ದ ಸೋನಿಯಾ ಗಾಂಧಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸದಿದ್ದರೆ ಮತ್ತು ಯುಪಿಎ 1 ಅವಧಿಯಲ್ಲಿ ಮೈತ್ರಿಕೂಟದ ಭಾಗವಾಗಿದ್ದ ಎಡ ಪಕ್ಷಗಳು ಜನಪರ ಕಾಳಜಿಯುಳ್ಳ ನೀತಿಗಳನ್ನು ರೂಪಿಸದಿದ್ದರೆ ಸಿಂಗ್‌ ಅವರ ಪ್ರಧಾನಮಂತ್ರಿಗಳ ಹತ್ತು ವರ್ಷಗಳ ಅವಧಿ ಮತ್ತಷ್ಟು ವೈಫಲ್ಯಗಳಿಂದ ಕೂಡಿರುತ್ತಿತ್ತು. ಈ ಸತ್ಯವೂ ಅವರ ಸಮಾಜೋ-ಆರ್ಥಿಕ-ರಾಜಕೀಯ ಚಿಂತನೆಯ ಮಿತಿಯನ್ನು ತೋರಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಟಿಇ(2009), ನರೇಗಾ(2005), ಆರ್‌ಟಿಐ(2005), ಆಹಾರ ಭದ್ರತೆ(2013)ಗಳಂತಹ ಜನಪರ ಕಲ್ಯಾಣ ಕಾಯ್ದೆಗಳು ಯುಪಿಎ 1 ಮತ್ತು 2 ಅವಧಿಯಲ್ಲಿ ಜಾರಿಗೊಂಡಿದ್ದು ಈ ಸರ್ಕಾರದ ಹಿರಿಮೆಯನ್ನು ತೋರಿಸುತ್ತದೆ. ಆದರೆ ತಮ್ಮ ಎಲ್‌ಪಿಜಿ ಪರವಾದ ನೀತಿಗಳಿಗೆ ವಿರುದ್ಧವಾಗಿದ್ದ ಈ ಕಾಯ್ದೆಗಳನ್ನು ಎನ್‌ಎಸಿ ಇಲ್ಲದೇ ಹೋಗಿದ್ದರೆ ಸಿಂಗ್‌ ಅವರು ಸ್ವಯಂಪೂರ್ವಕವಾಗಿ ಜಾರಿಗೊಳಿಸುತ್ತಿದ್ದರೆ ಎನ್ನುವ ಪ್ರಶ್ನೆಗೆ, ಇಲ್ಲ ಎನ್ನುವ ಉತ್ತರ ದೊರಕುತ್ತದೆ. ಯಾಕೆಂದರೆ ಅವರ ಆರ್ಥಿಕ ಚಿಂತನೆಗಳು ಸಂಪೂರ್ಣವಾಗಿ ಬಂಡವಾಳಶಾಹಿ ಪರವಾದ ಅಭಿವೃದ್ಧಿಯನ್ನು ದೃಢವಾಗಿ ನಂಬಿಕೊಂಡಿದ್ದರೆ, ಅವರ ಸಚಿವ ಸಂಪುಟದಲ್ಲಿಯೂ ಇಂತಹ ಕಲ್ಯಾಣ ಯೋಜನೆಗಳ ಪರವಾಗಿ ಯೋಚಿಸಬಲ್ಲಂತಹ ಸಚಿವರ ಕೊರತೆಯಿತ್ತು. ಆದರೆ ಪ್ರಜಾಪ್ರಭುತ್ವವಾದಿಯಾಗಿದ್ದ ಸಿಂಗ್‌ ಅವರು ಮೇಲಿನ ಕಲ್ಯಾಣ ಯೋಜನೆಗಳಿಗೆ ಪ್ರಧಾನಿಯಾಗಿ ಸಂಪೂರ್ಣವಾಗಿ ಬೆಂಬಲಿಸಿದರು. ಇಂದಿನ ಮೋದಿ ನೇತೃತ್ವದ ದಮನಕಾರಿ ಆಡಳಿತವನ್ನು ಗಮನಿಸಿದಾಗ ಸಿಂಗ್‌ ಅವರ ಪ್ರಜಾಪ್ರಭುತ್ವವಾದಿ ಗುಣಗಳ ಮಹತ್ವ ಅರಿವಾಗುತ್ತದೆ.

ಇದನ್ನು ಓದಿದ್ದೀರಾ?: ಮೋದಿಯ ಹಾದಿ ಸುಗಮ ಮಾಡಿಕೊಟ್ಟ ಮನಮೋಹನ ಸಿಂಗ್

ಇದೇ ಅವಧಿಯಲ್ಲಿ ಯುಎಪಿಎ (ನಿಯಂತ್ರಣ) ಕಾಯ್ದೆ 2004 ಹಾಗೂ ಯುಎಪಿಎ(ತಿದ್ದುಪಡಿ) 2008ಯಂತಹ ಪ್ರಜಾಪ್ರಭುತ್ವ ವಿರೋಧಿ ಕರಾಳ ಕಾನೂನು, ಎನ್‌ಇಎ(ರಾಷ್ಟ್ರೀಯ ತನಿಖಾ ಏಜೆನ್ಸಿ) ಕಾಯ್ದೆಯಂತಹ ದಮನಕಾರಿ ಏಜೆನ್ಸಿಗೆ ಚಾಲನೆ ನೀಡಿದರು. ಖಾಸಗಿತನವನ್ನು ಕಸಿದುಕೊಳ್ಳುವ ಆಧಾರ್‌ನಂತಹ ಯೋಜನೆಯನ್ನು ಜಾರಿಗೊಳಿಸಿದರು. 2008-2012ರ ಅವಧಿಯಲ್ಲಿ ಗೃಹಮಂತ್ರಿಯಾಗಿದ್ದ ಪಿ.ಚಿದಂಬರಂ ಯುಎಪಿಎಯಂತಹ ಕರಾಳ ಕಾನೂನು ಜಾರಿಗೊಳಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದರೆ ಚತ್ತೀಸ್‌ಗಢ, ಒಡಿಸ್ಸಾದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆಗೆ ಸಲ್ವಾ ಜುಡಂನಂತಹ ಖಾಸಗಿ ಹತ್ಯೆಕೋರರ ಬರ್ಬರ ಪಡೆಯನ್ನು ಸ್ಥಾಪಿಸಿದರು.

ಇವೆರಡೂ ಯುಪಿಎ ಸರ್ಕಾರದ ಜನ ವಿರೋಧಿ ಆಡಳಿತಕ್ಕೆ ಉದಾಹರಣೆಗಳಾಗಿವೆ. ಸಿಂಗ್‌ ಅವರ ವೈಯಕ್ತಿಕ ಸೌಮ್ಯತೆ, ಸಜ್ಜನಿಕೆಯನ್ನು ಪರಿಗಣಿಸಿದಾಗ ಇಂತಹ ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳನ್ನು ಅವರು ಬೆಂಬಲಿಸಿರಲಿಕ್ಕಿಲ್ಲ ಎನ್ನುವುದು ನಿಜವಾದರೂ ಸಹ ಅವರ ಕೈ ಮೀರಿ ಜಾರಿಗೊಂಡಿರುವುದು ನಾಯಕತ್ವದಲ್ಲಿನ ದೌರ್ಬಲ್ಯವನ್ನು ಸೂಚಿಸುತ್ತದೆ. ಯುಪಿಎ 1 ಮತ್ತು 2 ಅವಧಿಯಲ್ಲಿನ ಕಲ್ಯಾಣ ಯೋಜನೆಗಳ ಕಾಯ್ದೆಗಳು ಮತ್ತು ಕರಾಳ ಶಾಸನಗಳು ಎರಡಕ್ಕೂ ಸಿಂಗ್‌ ಅವರು ಹೊಣೆಗಾರರಾಗಿರಲಿಲ್ಲ ಎನ್ನುವ ವಾಸ್ತವ ದುರ್ಬಲ ಪ್ರಧಾನಿಯನ್ನು ಸಂಕೇತಿಸುತ್ತದೆಯೇ?

bhut sir
ಬಿ. ಶ್ರೀಪಾದ ಭಟ್
+ posts

ಶಿಕ್ಷಣ ತಜ್ಞರಾದ ಶ್ರೀಪಾದ ಭಟ್ ಅವರು, ಮೂಲತಃ  ವಿಜಯನಗರ ಜಿಲ್ಲೆಯವರು. ದಲಿತ ಮತ್ತು ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯರಾಗಿರುವ ಇವರು, 'ಹಿಂದುತ್ವ ರಾಜಕಾರಣ - ಅಂದು ಇಂದು ಮುಂದು', 'ಬಿಸಿಲು, ಬಯಲು, ನೆಳಲು - ಹೊಸ ಅಲೆ ಸಿನಿಮಾ ಕುರಿತಾದ ಕಥನ', 'ಕಣ್ಕಟ್ಟು', 'ಸಾವಿತ್ರಿಬಾಯಿ ಫುಲೆ ಬದುಕು ಬರಹ' ಮೊದಲಾದ ಕೃತಿಗಳನ್ನು ಬರೆದಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಬಿ. ಶ್ರೀಪಾದ ಭಟ್
ಬಿ. ಶ್ರೀಪಾದ ಭಟ್
ಶಿಕ್ಷಣ ತಜ್ಞರಾದ ಶ್ರೀಪಾದ ಭಟ್ ಅವರು, ಮೂಲತಃ  ವಿಜಯನಗರ ಜಿಲ್ಲೆಯವರು. ದಲಿತ ಮತ್ತು ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯರಾಗಿರುವ ಇವರು, 'ಹಿಂದುತ್ವ ರಾಜಕಾರಣ - ಅಂದು ಇಂದು ಮುಂದು', 'ಬಿಸಿಲು, ಬಯಲು, ನೆಳಲು - ಹೊಸ ಅಲೆ ಸಿನಿಮಾ ಕುರಿತಾದ ಕಥನ', 'ಕಣ್ಕಟ್ಟು', 'ಸಾವಿತ್ರಿಬಾಯಿ ಫುಲೆ ಬದುಕು ಬರಹ' ಮೊದಲಾದ ಕೃತಿಗಳನ್ನು ಬರೆದಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...