ಸಿದ್ದರಾಮಯ್ಯರನ್ನು ಇಳಿಸಿದರೆ ಪಕ್ಷ ಮುಳುಗುತ್ತದೆ ಎಂಬ ಭಯವೇ: ಡಿಕೆಶಿಗೆ ಅಶೋಕ್‌ ಪ್ರಶ್ನೆ

Date:

‘ಮನೇಲಿ ಇಲಿ ಬೀದೀಲಿ ಹುಲಿ’ ಎಂಬಂತೆ ನಿಮ್ಮ ಪೌರುಷ, ಅಬ್ಬರ ಮಾಧ್ಯಮಗಳ ಮುಂದೆ ಮಾತ್ರಾನಾ? ಅಥವಾ ಸಿದ್ದರಾಮಯ್ಯರನ್ನು ಇಳಿಸಿದರೆ ಅವರು ಕಾಂಗ್ರೆಸ್ ಪಕ್ಷವನ್ನೇ ಮುಳುಗಿಸಿ ಬಿಡುತ್ತಾರೆ ಎಂಬ ಭಯವೋ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಪ್ರಶ್ನಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಡೋಂಗಿರಾಮಯ್ಯನ ಇಡೀ ಜೀವನವೇ ಒಂದು ದೊಡ್ಡ ಡೋಂಗಿ. ಬುರುಡೆ ರಾಮಯ್ಯನ ಬದುಕೆಲ್ಲ ಬರೀ ಬುರುಡೆಯೇ. ಕಾಲಕ್ಕೆ ತಕ್ಕಂತೆ ತಮ್ಮ ಮೂಗಿನ ನೇರಕ್ಕೆ ಬಣ್ಣ ಬದಲಾಯಿಸುವ ಊಸರವಳ್ಳಿ ರಾಮಯ್ಯನ ಬೂಟಾಟಿಕೆ ಬಗ್ಗೆ ದೊಡ್ಡ ಪುಸ್ತಕವೇ ಬರೆಯಬಹುದು” ಎಂದು ಲೇವಡಿ ಮಾಡಿದ್ದಾರೆ.

“2011ರಲ್ಲಿ ರಾಜ್ಯಪಾಲರ ಅಧಿಕಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ನುಡಿದಿರುವ ನುಡಿಮುತ್ತುಗಳನ್ನು ಒಮ್ಮೆ ಕೇಳಿಸಿಕೊಳ್ಳಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ” ಎಂದು ವಿಡಿಯೋ ಒಂದನ್ನು ಟ್ಯಾಗ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡೆರಡು ನ್ಯಾಯಾಲಯಗಳು ಛೀಮಾರಿ ಹಾಕಿ, ಲೋಕಾಯುಕ್ತ ಪೊಲೀಸರು ಎಫ್ಐಆರ್ ಹಾಕಿದ್ದರೂ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಾಗದಂತಹ ನಿಮ್ಮಂತಹ ದುರ್ಬಲ ಕೆಪಿಸಿಸಿ ಅಧ್ಯಕ್ಷರು ಬಹುಶಃ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಇರಲಿಲ್ಲ. ಇಂತಹ ನಾಮಕಾವಸ್ತೆ ಅಧ್ಯಕ್ಷಗಿರಿ ಇಟ್ಟುಕೊಂಡು ಏನು ಮಾಡುತ್ತೀರಿ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...