ಇಸ್ರೇಲ್ ಕೆಂಗಣ್ಣಿಗೆ ಗುರಿಯಾದ ‘ಅಲ್‌-ಜಝೀರಾ’ ಸುದ್ದಿ ವಾಹಿನಿ: ಪ್ರಸಾರ ತಡೆಗೆ ಚಿಂತನೆ

Date:

ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷವನ್ನು ನಿರಂತರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುತ್ತಿರುವ ‘ಅಲ್‌-ಜಝೀರಾ’ ಸುದ್ದಿ ವಾಹಿನಿಯ ಪ್ರಸಾರಕ್ಕೆ ತಡೆ ನೀಡಲು ಇಸ್ರೇಲ್ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಆದರೆ ಈ ತೀರ್ಮಾನದ ಬಗ್ಗೆ ಇಸ್ರೇಲ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಅಲ್-ಜಝೀರಾ ಸಹಿತ ಗಾಝಾದ ಅಮಾಯಕ ಜನರ ಮೇಲೆ ಇಸ್ರೇಲ್ ಸುರಿಸುತ್ತಿರುವ ಬಾಂಬ್‌ಗಳ ವಿರುದ್ಧವಾಗಿ ಮಾತನಾಡುತ್ತಿರುವ ಸ್ಥಳೀಯ ಕೆಲವು ಚಾನೆಲ್‌ಗಳ ಪ್ರಸಾರಕ್ಕೂ ತಡೆ ನೀಡಲು ಇಸ್ರೇಲಿನ ಮಾಧ್ಯಮ ಮತ್ತು ಪ್ರಸಾರ ಸಚಿವ ಶ್ಲೋಮೋ ಕರ್ಹಿ ಚಿಂತನೆ ನಡೆಸಿರುವುದಾಗಿ ಇಸ್ರೇಲ್‌ನ ಸ್ಥಳೀಯ ಸುದ್ದಿ ಮೂಲಗಳನ್ನು ಮಾಹಿತಿಗಳನ್ನು ಉಲ್ಲೇಖಿಸಿ ‘ ಮಿಡ್ಲ್ ಈಸ್ಟ್‌ ಐ’ ವರದಿ ಮಾಡಿದೆ.

ಈ ಬಗ್ಗೆ ಚರ್ಚೆ ನಡೆಸಲು ಬುಧವಾರ ಸಂಜೆ ಮಾಧ್ಯಮ ಮತ್ತು ಪ್ರಸಾರ ಸಚಿವ ಶ್ಲೋಮೋ ಕರ್ಹಿ ತುರ್ತು ಕ್ಯಾಬಿನೆಟ್ ಸಭೆಯನ್ನು ಕರೆದಿದ್ದಾರೆ. ಅಲ್ಲದೇ, ಯುದ್ಧ ಮುಗಿಯುವವರೆಗೆ ಅಲ್ ಜಝೀರಾ ಪ್ರಸಾರವನ್ನು ನಿಷೇಧಿಸುವ ತುರ್ತು ಕಾನೂನನ್ನು ಸಿದ್ಧಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕತಾರ್ ಮೂಲದ ಅಂತಾರಾಷ್ಟ್ರೀಯ ಸುದ್ದಿ ವಾಹಿನಿ ಅಲ್ ಜಝೀರಾ ವಿಶ್ವದ ಹಲವು ದೇಶಗಳಲ್ಲಿ ಕಾರ್ಯಾಚರಿಸುತ್ತಿದೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ಶ್ರೀಮಂತ ರಾಷ್ಟ್ರವಾದ ಕತಾರ್ ಸರ್ಕಾರವೇ ಹೊತ್ತುಕೊಂಡಿದೆ. ಪ್ಯಾಲೆಸ್ತೀನ್ ಜನರ ಪರ ಧ್ವನಿ ಎತ್ತುತ್ತಿರುವ ಮಾಧ್ಯಮವಾಗಿ ಗುರುತಿಸಿಕೊಂಡಿರುವುದರಿಂದ ‘ಅಲ್-ಜಝೀರಾ’ ಇಸ್ರೇಲ್‌ನ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಕೆಲವೊಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

al jazeera

ಗಾಝಾಕ್ಕೆ ಸಂಪೂರ್ಣ ಮುತ್ತಿಗೆ ಹಾಕುವುದಾಗಿ ಘೋಷಿಸಿದ ಬಳಿಕ ಗಾಝಾದಲ್ಲಿ ಭೂ ಕಾರ್ಯಾಚರಣೆ ನಡೆಸುವ ಸುಳಿವು ನೀಡಿರುವ ಇಸ್ರೇಲ್, ಅಮಾಯಕ ಜನರ ಮಾರಣ ಹೋಮಕ್ಕೆ ಮುಂದಾಗಿದೆ. ಅದು ವಿಶ್ವಕ್ಕೆ ತಿಳಿಯಬಾರದು ಎಂಬ ಕಾರಣಕ್ಕಾಗಿ ಅದು ಅಲ್-ಜಝೀರಾ ಪ್ರಸಾರ ತಡೆಗೆ ಮುಂದಾಗಿದೆ ಎಂದು ಹಲವು ನೆಟ್ಟಿಗರು ಆರೋಪಿಸಿದ್ದಾರೆ.

2022ರ ಮೇನಲ್ಲಿ ಅಲ್-ಜಝೀರಾ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಹತ್ಯೆಯಲ್ಲಿ ಇಸ್ರೇಲ್ ಕೈವಾಡವಿರುವ ಆರೋಪ ಕೇಳಿಬಂದಿತ್ತು. ಆದರೆ ಈ ಆರೋಪವನ್ನು ಇಸ್ರೇಲ್ ಸೇನೆ ತಳ್ಳಿ ಹಾಕಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಕೆಲವೊಂದು ಸ್ವತಂತ್ರ ಸಂಸ್ಥೆಗಳು, ‘ಇಸ್ರೇಲ್‌ ಸುಳ್ಳು ಹೇಳಿವೆ, ಪತ್ರಕರ್ತೆಯ ಹತ್ಯೆಯಲ್ಲಿ ಪಾತ್ರವಿತ್ತು’ ಎಂದು ಸಾಬೀತುಪಡಿಸಿದ್ದವು.

lal jazeera

ಅಲ್-ಜಝೀರಾ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್

ಕಳೆದ ಶನಿವಾರ ಬೆಳಗ್ಗೆ ಹಮಾಸ್, ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ ಬಳಿಕ ಇಸ್ರೇಲ್ ಯುದ್ಧ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಗಾಝಾಪಟ್ಟಿಗೆ ಪ್ರವೇಶಿಸುವುದಕ್ಕೆ ಹಾಗೂ ತೊರೆಯುವುದಕ್ಕೆ ನಿರ್ಬಂಧ ವಿಧಿಸಿದೆ. ಗಾಝಾಕ್ಕೆ ಸಂಪೂರ್ಣ ಮುತ್ತಿಗೆ ಹಾಕುವುದಾಗಿ ಘೋಷಿಸಿದ ಬಳಿಕ, ನೀರು, ವಿದ್ಯುತ್ ಮತ್ತು ಆಹಾರವನ್ನು ಕಡಿತಗೊಳಿಸಿ, ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...