ಜನರ ಕೈಗೆಟಕುವಂತಹ ವಿಮಾನ ದರಕ್ಕೆ ಆದ್ಯತೆ: ನೂತನ ವಿಮಾನಯಾನ ಸಚಿವ ರಾಮ್‌ ಮೋಹನ್ ನಾಯ್ಡು

Date:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ನೂತನ ನಾಗರಿಕ ವಿಮಾನ ಯಾನ ಸಚಿವರಾಗಿ ಆಯ್ಕೆಯಾಗಿರುವ ಕಿಂಜರಾಪು ರಾಮ್‌ ಮೋಹನ್ ನಾಯ್ಡು ಇಂದು ಸಚಿವಾಲಯದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಆ ಬಳಿಕ ಪಿಟಿಐ ಸುದ್ದಿ ಸಂಸ್ಥೆಯ ಪ್ರತಿನಿಧಿಯು, “ಕಳೆದ ಕೆಲವು ವರ್ಷಗಳಿಂದ ದರ ಏರಿಕೆಯಾಗಿರುವುದರಿಂದ ಜನಸಾಮಾನ್ಯರು ವಿಮಾನ ಪ್ರಯಾಣದಿಂದ ದೂರ ಸರಿಯುತ್ತಿದ್ದಾರೆ. ಈ ಬಗ್ಗೆ ಏನಾದರೂ ನಿಮ್ಮ ಅವಧಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೀರಾ?” ಎಂದು ಕೇಳಿದ್ದಕ್ಕೆ ಉತ್ತರಿಸಿದ ರಾಮ್‌ ಮೋಹನ್ ನಾಯ್ಡು, “ಹೌದು. ಕಳೆದ ಕೆಲವು ವರ್ಷಗಳಿಂದ ಇದನ್ನು ಗಮನಿಸುತ್ತಿದ್ದೇನೆ. ಇದು ನನಗೆ ಒಂದು ಪ್ರಮುಖ ವಿಷಯವಾಗಿದೆ. ಹಾಗಾಗಿ, ಜನಸಾಮಾನ್ಯರಿಗೆ ಕೈಗಟಕುವ ದರದಲ್ಲಿ ವಿಮಾನ ಪ್ರಯಾಣಕ್ಕೆ ಆದ್ಯತೆ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ನಾಗರಿಕ ವಿಮಾನಯಾನ ಸಚಿವ ಸ್ಥಾನ ಎಂದು ಘೋಷಿಸಿದ ಸಮಯದಿಂದಲೂ ಇದು ನನಗೆ ಒಂದು ಪ್ರಮುಖ ವಿಷಯವಾಗಿದೆ. ನಾನು ಎಲ್ಲಿಗೆ ಹೋದರೂ ದರ ಏರಿಕೆಯ ಬಗ್ಗೆ ಕೇಳುತ್ತಲೇ ಇದ್ದೇನೆ. ಕಳೆದ ಕೆಲವು ವರ್ಷಗಳಿಂದ ಅದರಲ್ಲೂ ವಿಶೇಷವಾಗಿ ಕೋವಿಡ್ ನಂತರ ಬೆಲೆಗಳು ಹಲವು ಕಾರಣದಿಂದಾಗಿ ಏರಿಕೆಯಾಗಿದೆ ಎಂದು ಜನರು ಉಲ್ಲೇಖಿಸುತ್ತಿದ್ದಾರೆ. ಹಾಗಾಗಿ, ಬೆಲೆ ಏರಿಕೆಯ ಬಗ್ಗೆ ನನಗೆ ಸಂಪೂರ್ಣ ತಿಳುವಳಿಕೆ ಬೇಕಿದೆ” ಎಂದು ಹೇಳಿದರು.

“ವಿಮಾನ ಪ್ರಯಾಣದ ದರ ಏರಿಕೆಯ ಬಗ್ಗೆ ನಾನು ಖಂಡಿತವಾಗಿಯೂ ಷೇರುದಾರರದೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಲಿದ್ದೇನೆ. ಏಕೆಂದರೆ ದರ ಏರಿಕೆಯು ಸಾಮಾನ್ಯ ಜನರಿಗೆ ಸವಾಲಾಗಿದೆ. ಸಾಮಾನ್ಯ ಜನರಿಗೆ ವಿಮಾನ ಪ್ರಯಾಣದ ದರವನ್ನು ನಾವು ಕೈಗೆಟುಕುವವರೆಗೆ ಮಾಡದಿದ್ದರೆ ಪ್ರಯಾಣಕ್ಕೆ ಆದ್ಯತೆ ನೀಡಲು ಸಾಧ್ಯವಿಲ್ಲ. ಜನರಿಗೆ ಕೈಗಟಕುವ ದರದಲ್ಲಿ ವಿಮಾನ ಪ್ರಯಾಣಕ್ಕೆ ಆದ್ಯತೆ ನೀಡಲು ಶ್ರಮಿಸುತ್ತೇನೆ” ಎಂದು ಎನ್‌ಡಿಎಯ ಮೈತ್ರಿಕೂಟದ ಭಾಗವಾಗಿರುವ ಟಿಡಿಪಿ ಪಕ್ಷದ ಸಂಸದರೂ ಆಗಿರುವ ನೂತನ ನಾಗರಿಕ ವಿಮಾನ ಯಾನ ಸಚಿವ ರಾಮಮೋಹನ್ ನಾಯ್ಡು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...