ಸಂತೋಷ ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ : ಕಾಂಗ್ರೆಸ್ ಪ್ರಶ್ನೆ

Date:

  • ಲಿಂಗಾಯತರು ಬಿಜೆಪಿಗೆ ಪಾಠ ಕಲಿಸುವುದು ನಿಶ್ಚಿತ
  • ಮೋದಿ ಲಿಂಗಾಯತ ನಾಯಕರ ಸಾವು ಬಯಸುತ್ತಿದ್ದೀರಾ?

ಬಿ ಎಸ್‌ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ರಾಜ್ಯ ಬಿಜೆಪಿ, “ಲಿಂಗಾಯತ ಸಮುದಾಯವನ್ನು ಬಿಜೆಪಿ ಅವಹೇಳನ ಮಾಡಿದೆ ಎಂದ ಪ್ರಧಾನಿ ಮೋದಿ” ಎಂದು ಹೇಳುವ ಮೂಲಕ ಯಡವಟ್ಟು ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, “ಬಿಜೆಪಿ ಸತ್ಯವನ್ನೇ ಹೇಳಿದೆ” ಎಂದು ವ್ಯಂಗ್ಯವಾಡಿದೆ.

“ಹಿಂದೆ ಬಿ ಎಸ್ ಯಡಿಯೂರಪ್ಪ ಅವರ ರಾಜೀನಾಮೆ ಪಡೆದು, ಜೈಲಿಗೆ ಕಳಿಸಿದ್ದು ಬಿಜೆಪಿಯೇ. ನಂತರವೂ ಯಡಿಯೂರಪ್ಪರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದೂ ಬಿಜೆಪಿಯೇ. ಸಂತೋಷ ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಿಂಗಾಯತರ ಮತ ಬೇಡ ಎಂಬ ಸಂದೇಶವಲ್ಲವೇ ಇದು. ಯಡಿಯೂರಪ್ಪ ಅವರ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು” ಎಂದಿದೆ.

“ಬಿಜೆಪಿಯ ಲಿಂಗಾಯತ ದ್ವೇಷ ಲಿಂಗಾಯತ ನಾಯಕರ ಮೇಲಷ್ಟೇ ಅಲ್ಲ, ಐತಿಹಾಸಿಕ ವ್ಯಕ್ತಿಗಳ ಮೇಲೂ ಇದೆ. ಈ ಹಿಂದೆ ಸ್ವತಂತ್ರ ದಿನಾಚರಣೆಯ ಸಮಯದಲ್ಲಿ ಮಣೆಕ್ ಶಾ ಪರೇಡ್ ಮೈದಾನದ ದ್ವಾರಕ್ಕೆ ಇದ್ದ ಕಿತ್ತೂರು ರಾಣಿ ಚೆನ್ನಮ್ಮ ಹೆಸರನ್ನು ತೆಗೆದುಹಾಕಿತ್ತು ಬಿಜೆಪಿ. ಪಠ್ಯದಲ್ಲಿ ಶರಣರ ವಚನಗಳನ್ನು ತೆಗೆದುಹಾಕಿದಂತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಬಸವಣ್ಣನ ತತ್ವಗಳಿಗೂ ಬಿಜೆಪಿ ನಂಬಿರುವ ಮನುವಾದಕ್ಕೂ ವೈರುಧ್ಯಗಳಿವೆ. ಹೀಗಾಗಿಯೇ ಪಠ್ಯದಲ್ಲಿ ಬಸವಣ್ಣನವರನ್ನು ಅವಮಾನಿಸಿದ ಬಿಜೆಪಿ ಈಗ ಲಿಂಗಾಯತ ನಾಯಕರನ್ನೇ ಮುಗಿಸಲು ಹೊರಟಿದೆ” ಎಂದು ಕಾಂಗ್ರೆಸ್ ಹೇಳಿದೆ.

“ಬಿ ಎಸ್‌ ವೈ, ಶೆಟ್ಟರ್, ಸವದಿಯಂತಹ ನಾಯಕರನ್ನು ರಾಜಕಾರಣದಿಂದಲೇ ಹೊರದಬ್ಬುವ ಬಿಜೆಪಿ ಪ್ರಯತ್ನಕ್ಕೆ ಲಿಂಗಾಯತರು ಪಾಠ ಕಲಿಸುವುದು ನಿಶ್ಚಿತ” ಎಂದು ವ್ಯಂಗ್ಯವಾಡಿದೆ.

“ಹೌದು ಮೋದಿ ಹೇಳಿದ್ದು ನಿಜವೇ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತರಿಗೆ ಅಪಮಾನಿಸಿದೆ. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿತು. ಶೆಟ್ಟರ್ – ಸವದಿಯವರನ್ನು ಕಿಕ್ ಔಟ್ ಮಾಡಿತು. ಸೋಮಣ್ಣರನ್ನು ಬಲಿಪಶು ಮಾಡುತ್ತಿದೆ. ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದು ಕುಹಕವಾಡಿದೆ.

“ಜಗದೀಶ್ ಶೆಟ್ಟರ್ ಸಾಯಲಿ ಎಂದು ಈಶ್ವರಪ್ಪನವರ ಬಾಯಲ್ಲಿ ಹೇಳಿಸಿರುವ ಬಿಜೆಪಿ ಲಿಂಗಾಯತರ ನಾಯಕತ್ವದ ನಾಶವನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವು ಬದುಕಿಯೇ ಇರಬಾರದು ಎನ್ನುವ ಧೋರಣೆ ಹೊಂದಿದೆಯೇ?” ಎಂದು ಕೇಳಿದೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಭರ್ಜರಿ ಮತ ಬೇಟೆಗಿಳಿದ ರಾಜ್ಯ, ರಾಷ್ಟ್ರ ನಾಯಕರು

“ಪ್ರಧಾನಿ ಮೋದಿ ಅವರೇ, ತಾವು ಲಿಂಗಾಯತ ನಾಯಕರ ಸಾವನ್ನು ಬಯಸುತ್ತಿದ್ದೀರಾ? ತಮ್ಮ ಪಕ್ಷ ಲಿಂಗಾಯತರನ್ನು ಮುಗಿಸಲು ಹೊಂಚು ಹಾಕಿದೆಯೇ” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...