ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

Date:

  • ನಮ್ಮ‌ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೂ ಅದು ತಪ್ಪು
  • ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಪ್ರತಿ ಅಭ್ಯರ್ಥಿಗೂ ಪ್ರಚಾರಕ್ಕೆ ಅವಕಾಶವಿದೆ

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಅಲ್ಲಿನ ಮತದಾರರು ಅಡ್ಡಿಪಡಿಸಿದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈ ರೀತಿ ಮಾಡುವುದು ಸರಿಯಲ್ಲ. ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, “ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಇದನ್ನು ನಮ್ಮ‌ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ಹೇಳಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಚಿವ ಸೋಮಣ್ಣಗೆ ವರುಣಾದಲ್ಲಿ ಮತ್ತೆ ಮುಖಭಂಗ

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಪ್ರಚಾರಕ್ಕೆ ತೆರಳಿದ್ದ ವೇಳೆ ಭುಗತಗಳ್ಳಿ ಗ್ರಾಮದ ಮತದಾರರು ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿ, ಸೋಮಣ್ಣ ಅವರಿಗೆ ಘೇರಾವ್‌ ಹಾಕಿದ್ದರು. ಈ ವೇಳೆ ಪೊಲೀಸರ ಮಧ್ಯೆ ಪ್ರವೇಶದೊಂದಿಗೆ ಸೋಮಣ್ಣ ಅವರನ್ನು ಅಲ್ಲಿಂದ ಮತ್ತೊಂದು ಗ್ರಾಮಕ್ಕೆ ಕರೆದೊಯ್ಯಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...