ನಮ್ಮಿಂದಲೇ ಓಟು ಬರುತ್ತವೆ ಎಂಬುದು ಅಪ್ಪ-ಮಕ್ಕಳ ಬರೀ ಕಲ್ಪನೆ: ಯತ್ನಾಳ್‌ ವ್ಯಂಗ್ಯ

Date:

ಲೋಕಸಭೆ ಚುನಾವಣೆಯಲ್ಲಿ ಹೊತ್ತಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ ಮತ್ತು ವಿಜಯೇಂದ್ರ ಮುಖ ನೋಡಿ ಜನರು ಓಟು ಹಾಕುವುದಿಲ್ಲ”ಎಂದಿದ್ದಾರೆ.

“ನಮ್ಮಿಂದೇ ಓಟು ಬರುತ್ತವೆ ಎಂಬುದು ಅಪ್ಪ-ಮಕ್ಕಳದ್ದು ಬರೀ ಕಲ್ಪನೆ. ನರೇಂದ್ರ ಮೋದಿ ಅವರ ಮುಖ ನೋಡಿ ಓಟು ಹಾಕುತ್ತಾರೆ. ನರೇಂದ್ರ ಮೋದಿ, ಭಾರತ, ಹಿಂದೂತ್ವ, ಅಯೋಧ್ಯೆ ರಾಮ ಮಂದಿರ ಮೇಲೆಯೇ ಚುನಾವಣೆ ನಡೆಯಲಿದೆ” ಎಂದರು.

“ಕುತಂತ್ರಿಗಳು ಮಾಡಿಸುತ್ತಿರುವ ಗೋಬ್ಯಾಕ್‌ ಹಾಗೂ ಕಮ್‌ ಇನ್‌ ನಡೆಯಲ್ಲ. ತಮ್ಮ ಕುಟುಂಬದವರೇ ಕೇಂದ್ರದಲ್ಲಿ ಮಂತ್ರಿಯಾಗಬೇಕು. ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಬೇಕೆಂದು ಕಲ್ಪನೆಯಿಟ್ಟುಕೊಂಡು ಹೋಗುತ್ತಾರಲ್ಲ. ಇದು ಸಾಧ್ಯವಿಲ್ಲ. 2024ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ವಂಶವಾದ, ಭ್ರಷ್ಟಾಚಾರ, ಅಡ್ಜೆಸ್ಟ್‌ಮೆಂಟ್‌ ಮೂರನ್ನೂ ಕಿತ್ತಿಹಾಕಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರಿಗೆ ಒಮ್ಮೆಯಾದರೂ 120 ಬಂದಿವೆಯೇ, ಅಪ್ಪ-ಮಕ್ಕಳು ಎಲ್ಲರನ್ನೂ ಮುಗಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ. ನನಗೂ ಲೋಕಸಭೆ ಚುನಾವಣೆಗೆ ನಿಲ್ಲಿ ಎಂದರು. ಬಾಗಲಕೋಟೆ, ಬೆಳಗಾವಿ, ಕೊಪ್ಪಳ ಎಲ್ಲಿಯಾದರೂ ನಿಲ್ಲಿ ಎಂದು ಚಾಯಸ್‌ ಕೊಟ್ಟರು. ನಾನು ಕೇಂದ್ರದಲ್ಲಿ ಮಂತ್ರಿ ಮಾಡ್ತೀವಿ ಅಂದರೂ ನಿಲ್ಲೋದಿಲ್ಲ ಎಂದು ಹೇಳಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

“ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ವಿಧಾನಸಭೆಯಲ್ಲೇ ಹೇಳಿದ್ದೇನೆ. ಕದ್ದು ಮುಚ್ಚಿ ಹೇಳಿಲ್ಲ. ಅವರೆಲ್ಲರ ಅಂತ್ಯ ಲೋಕಸಭೆ ಚುನಾವಣೆ ನಂತರ ಆಗಲಿದೆ. ಅಂತಹವರಿಗೆ ಗೇಟ್‌ ಪಾಸ್‌ ನೀಡಲಾಗುತ್ತದೆ” ಎಂದು ಹೇಳಿದರು.

ಸಿಎಎ ಬಿಜೆಪಿಯ ಸಂಕಲ್ಪ

“ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಲ್ಲಿ ಹಿಂದೂಗಳು ಅಸುರಕ್ಷಿತವಾಗಿದ್ದಾರೆ. ಆದ್ದರಿಂದ, ಜಗತ್ತಿನೆಲ್ಲೆಡೆ ಅಸುರಕ್ಷಿತವಾಗಿರುವ ಹಿಂದೂಗಳಿಗೆ ನಾಗರಿಕತ್ವ ಕೊಡಬೇಕೆಂಬುದು ಮೊದಲಿನಿಂದಲೂ ಬಿಜೆಪಿಯ ಸಂಕಲ್ಪ ಇತ್ತು. ಸಿಎಎ ಜಾರಿಯಿಂದ ಜಗತ್ತಿನ ವಿವಿಧ ದೇಶದಲ್ಲಿ ಅಸುರಕ್ಷಿತವಾಗಿರುವ ಹಿಂದೂಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಭಾರತೀಯ ನಾಗರಿಕತ್ವ ಕೊಡುವ ಒಳ್ಳೆಯ ಅವಕಾಶವನ್ನು ಕೊಟ್ಟಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...