ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ ‘ಹೋರಾಟಕ್ಕೆ ಸಾವಿಲ್ಲ’ ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು” ಎಂದರು.

“ಚಿಕ್ಕಬಳ್ಳಾಪುರ ಶ್ರೀ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯತೀತವಾದ ಮಾನವ ಧರ್ಮ ಪೀಠ ಎನಿಸಿದೆ. ಸ್ವಾಮೀಜಿಗಳು ನಿರ್ಭಿತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ” ಎಂದು ಮುಖ್ಯಮಂತ್ರಿ ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...