ಬಿಜೆಪಿಯಲ್ಲಿ ಟಿಕೆಟ್‌ಗಾಗಿ ತೀವ್ರ ಒತ್ತಡ ಇರೋದು ನಿಜ: ಬಿ ಎಸ್ ಯಡಿಯೂರಪ್ಪ

Date:

  • ಬಿಎಸ್‌ವೈ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ ಬೊಮ್ಮಾಯಿ
  • ಶುಕ್ರವಾರ ಸಂಜೆ ದೆಹಲಿಗೆ ತೆರಳಲಿರುವ ರಾಜ್ಯ ನಾಯಕರು

ಬಿಜೆಪಿ ಟಿಕೆಟ್‌ ತೀವ್ರ ಒತ್ತಡ ಇರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆ, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಯಾರಿಸಲು ತಿಣುಕಾಡುತ್ತಿದೆ. ಈ ಕುರಿತು ಬಿಜೆಪಿ ನಾಯಕರು ಸದಾ ಜಾರಿಕೊಳ್ಳುತ್ತಾ ಬಂದಿದ್ದಾರೆ. ಆದರೆ, ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಅವರು ಒತ್ತಡ ಇರುವುದಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಯಡಿಯೂರಪ್ಪ, “ಟಿಕೆಟ್ ಅಂತಿಮಗೊಳಿಸುವ ಹಿನ್ನೆಲೆಯಲ್ಲಿ ಸಂಜೆ ದೆಹಲಿಗೆ ಹೋಗುತ್ತಿದ್ದೇವೆ. ಪಟ್ಟಿ ಸಿದ್ಧ ಮಾಡಬೇಕಿರುವ ಕಾರಣಕ್ಕೆ ಪ್ರಮುಖರ ಜೊತೆಗೆ ಚರ್ಚೆ ಮಾಡಬೇಕಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲರೊಂದಿಗೆ ಚರ್ಚೆ ಮಾಡಿ ಪಟ್ಟಿ ಅಂತಿಮಗೊಳಿಸಲಾಗುವುದು. ಟಿಕೆಟ್‌ಗಾಗಿ ಬಹಳ ಒತ್ತಡ ಇರೋದು ನಿಜ. ಈಗಾಗಲೇ ಇಬ್ಬರು ಮೂವರು ಹೆಸರನ್ನು ಅಂತಿಮ ಮಾಡಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ” ಎಂದು ಹೇಳಿದ್ದಾರೆ.

“ನಾನು, ಮುಖ್ಯಮಂತ್ರಿಗಳು ಮತ್ತು ಪ್ರಮುಖರು ದೆಹಲಿಗೆ ಹೋಗುತ್ತಿದ್ದೇವೆ. ಯಾರು ಗೆಲ್ತಾರೆ ಅನ್ನೋ ಬಗ್ಗೆ ಚರ್ಚಿಸಿ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

ಆದರೆ, ಯಡಿಯೂರಪ್ಪ ಅವರ ಹೇಳಿಕೆಗೆ ತದ್ವಿರುದ್ಧ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಯಾವುದೇ ಆತಂಕ ಇಲ್ಲ” ಎಂದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಹೆಚ್ಚಿನ ಆಕಾಂಕ್ಷಿಗಳಿದ್ದಾಗ ಪೈಪೋಟಿ ಸಹಜವಾಗಿ ಇರಲಿದೆ. 8 ಮತ್ತು 9 ರಂದು ಚುನಾವಣಾ ಆಯ್ಕೆ ಸಮಿತಿ ಸಭೆ ಸೇರಿ, ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಮಹೇಶ್ ಕುಮಟಳ್ಳಿ ಸೋಲನ್ನು ನನ್ನ ತಲೆಗೆ ಕಟ್ಟಲು ನೋಡುತ್ತಿದ್ದಾರೆ ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಲಕ್ಷ್ಮಣ್ ಸವದಿ ಅವರ ಬಳಿ ಮಾತನಾಡಿದ್ದು ಆ ರೀತಿ ಏನೂ ಇಲ್ಲ. ಅವರ ಜವಾಬ್ದಾರಿಯ ಬಗ್ಗೆ ಅವರಿಗೆ ಅರಿವಿದೆ ಎಂದು ತಿಳಿದಿದ್ದೇನೆ. ಅವರ ಬಳಿ ಮಾತನಾಡಿದ್ದು ಎಲ್ಲವೂ ಸರಿ ಹೋಗುತ್ತದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...