ತುಮಕೂರು ಲೋಕಸಭೆಗೆ ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ವಿ ಸೋಮಣ್ಣ

Date:

“ತುಮಕೂರು ಸಂಸದ ಜಿ ಎಸ್ ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕು ಎಂಬುದು ಅವರ ಅಪೇಕ್ಷೆ. ನಾನು ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ತಿಳಿಸಿದರು.

ನವದೆಹಲಿಯಲ್ಲಿ ಸೋಮವಾರ ಮಾತನಾಡಿದ ಅವರು, “ಖಾಸಗಿ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಭೇಟಿಗೂ ಯತ್ನಿಸುತ್ತೇನೆ. ಸಾಧ್ಯವಾದರೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುತ್ತೆನೆ” ಎಂದರು.

“ರಾಜ್ಯಸಭೆಗೆ ಆಯ್ಕೆ ವಿಚಾರ ಪಕ್ಷ ಏನು ಮಾಡುತ್ತೋ ನೋಡಬೇಕು. ನಾನು ಕಳೆದ ಬಾರಿ ದೆಹಲಿಗೆ ಬಂದಾಗಲೇ ಅಭಿಪ್ರಾಯ ತಿಳಿಸಿದ್ದೇನೆ. ಲೋಕಸಭೆಗೆ ಅವಕಾಶ ಸಿಗದಿದ್ದರೂ ಪಕ್ಷದ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಕೆ.ಸುಧಾಕರ್ ಸ್ಪರ್ಧೆ ಮಾಡುವ ಬಗ್ಗೆ ಮಾಹಿತಿ ಇಲ್ಲ. ಸುಧಾಕರ್ ಏನು ಹೇಳಿದ್ದಾರೆ ಅಂತಲೂ ನನಗೆ ಗೊತ್ತಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 1.37 ಲಕ್ಷ ಕಡತಗಳು ಕುಂತಲ್ಲೇ ಕೂತು ದೂಳು ತಿನ್ನುತ್ತಿವೆ: ಬಿ ವೈ ವಿಜಯೇಂದ್ರ ಆಕ್ರೋಶ

ಕುಮಾರಸ್ವಾಮಿ ಭೇಟಿ ವಿಚಾರವಾಗಿ ಮಾತನಾಡಿ, “ಪಕ್ಷ ಬೇರೆ ಇರಬಹುದು, ಆದರೆ ನಾವು ಮೊದಲಿನಿಂದಲೂ ಪರಿಚಯ. ಮೊನ್ನೆ ಅವರ ತೋಟದ ಮನೆಯಲ್ಲಿ ಭೇಟಿ ಆಗಿದ್ದೇನೆ. ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಹೀಗಾಗಿ ಸಹಜವಾಗಿ ಮಾತಾಡಿದ್ದೇವೆ. ನಾವು ಇವತ್ತು ಈ ರೀತಿ ಮಾತನಾಡಲು ದೇವೇಗೌಡರು ಕಾರಣ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...