ಬೆಂಗಳೂರನ್ನು ಅವಹೇಳನ‌ ಮಾಡುತ್ತಿರುವುದು ನಮ್ಮವರೇ: ಬಿಜೆಪಿ ವಿರುದ್ಧ ಸಚಿವ ಪರಮೇಶ್ವರ್‌ ವಾಗ್ದಾಳಿ

Date:

ನಮ್ಮವರೇ ಬೆಂಗಳೂರನ್ನು ಅವಹೇಳನ‌ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ‌ತರಾಟೆಗೆ ತೆಗೆದುಕೊಂಡರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅನೇಕ‌ಸಲ ಹೇಳಿದ್ದಾರೆ. ಇದಕ್ಕೆ ನಿಗದಿತವಾದ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ. ಎಲ್ಲರ ಆಡಳಿತಾವಧಿಯಲ್ಲಿಯೂ ಮಳೆಗಾಲದಲ್ಲಿ ರಸ್ತೆ ಗುಂಡಿ ಬೀಳುವುದು, ಚರಂಡಿಯಲ್ಲಿ ಕಸ ತುಂಬಿಕೊಂಡು ಫ್ಲಡ್ ಆಗಿದೆ. ಇದನ್ನು ಆಧರಿಸಿ ಬೆಂಗಳೂರಿನ ಬಗ್ಗೆ ಕೆಟ್ಟದಾಗಿ ಬಿಂಬಿಸುವುದು ಸರಿಯಲ್ಲ‌” ಎಂದರು.

“ಉಡ್ತಾ ಬೆಂಗಳೂರು, ಬ್ರ್ಯಾಂಡ್ ಬೆಂಗಳೂರು ಅಲ್ಲ ಗುಂಡಿ ಬೆಂಗಳೂರು ಅನ್ನುವುದು. ಹೊರ ದೇಶದವರಿಗೆ ಏನು ಚಿತ್ರಣ ಬಿಂಬಿಸಲು ಹೊರಟಿದ್ದೀರಿ? ನಮ್ಮ‌ ಮೇಲೆ, ನಮ್ಮ ಸರ್ಕಾರದ ಮೇಲೆ‌ ಆರೋಪಿಸಲಿ.‌ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳುತ್ತೇವೆ. ಜವಾಬ್ದಾರಿಯುತವಾಗಿ ನಡೆದುಕೊಳ್ಳದಿದ್ದರೆ, ನೀವೇ ಬೆಂಗಳೂರಿಗೆ ಕೆಟ್ಟ ಹೆಸರು ತರುತ್ತಿದ್ದೀರಿ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನೇಕ ವಿಚಾರಗಳ ಬಗ್ಗೆ ಬಿಜೆಪಿಯವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರಿಯಾದ ಸಂದರ್ಭದಲ್ಲಿ ಉತ್ತರಿಸಲಾಗುವುದು. ಏನಾದರೂ ನಿರ್ಧಿಷ್ಟವಾಗಿ ಹೇಳುವುದಿದ್ದರೆ ಹೇಳಲಿ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ನೋಡಿಕೊಳ್ಳಲು ಪೊಲೀಸ್ ಕಮಿಷನರ್ ಇದ್ದಾರೆ. ಪೊಲೀಸ್ ಇಲಾಖೆ ಇದೆ. ಅವರಿಗೆ ತಿಳಿಸಿದರೆ ಕ್ರಮ ತೆಗೆದುಕೊಳ್ಳುತ್ತಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ. ಹೇಳಿಕೆಗಳಿಂದ ಪರಿಹಾರ ಕಂಡುಕೊಳ್ಳಲಾಗುವುದಿಲ್ಲ” ಎಂದರು

ಪತ್ರಕ್ಕೆ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಬೆಲೆ ಸಿಗಲಿಲ್ಲವೇ?

“ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಿಗೆ ಬರೆದ ಪತ್ರ ಮೇ 21ರಂದು ತಲುಪಿದೆ ಎಂಬುದಾಗಿ ವಿದೇಶಾಂಗ ಸಚಿವರು ಹೇಳಿದ್ದಾರೆ. ಮುಖ್ಯಮಂತ್ರಿಯವರು ಬರೆದಿದ್ದ ಪತ್ರ ವಿಚಾರವನ್ನು ಪ್ರಧಾನಮಂತ್ರಿ ಕಚೇರಿಯವರು ವಿದೇಶಾಂಗ ಇಲಾಖೆಯ ಕಚೇರಿಗೆ ತಿಳಿಸಿಲ್ಲ ಎಂಬುದು ಗೊತ್ತಾಗುತ್ತದೆ. ಪತ್ರಕ್ಕೆ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಬೆಲೆ ಸಿಗಲಿಲ್ಲವೇ? ವಿದೇಶಾಂಗ ಇಲಾಖೆಯ ಕಚೇರಿಗೆ ತಿಳಿಸಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಯಾವ ರೀತಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಅನ್ನುವುದನ್ನು ಇದರಿಂದ ಅರ್ಥೈಸಿಕೊಳ್ಳಬೇಕು” ಎಂದು ಹೇಳಿದರು.

“ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾದ ಬಳಿಕ ದೇಶಕ್ಕೆ ವಾಪಸ್ ಆಗಬೇಕಾಗುತ್ತದೆ. ಆ ದೇಶದವರು ಇಟ್ಟುಕೊಳ್ಳಲು ಆಗುವುದಿಲ್ಲ” ಎಂದರು.

ರೌಡಿಸಂ ಮಾಡುವರನ್ನು ಸುಮ್ಮನೆ ಬಿಡುವುದಿಲ್ಲ

ದಾವಣಗೆರೆ ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, “ದೂರು ಇದ್ದ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಆತನಿಗೆ 7 ನಿಮಿಷದೊಳಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೆ ಅವರು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ, ಠಾಣೆಗೆ ನುಗ್ಗಲು ಯತ್ನಿಸಿದ್ದಾರೆ” ಎಂದರು.

“ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಘಟನೆಯಲ್ಲಿ ಪೇದೆಯೊಬ್ಬರು ಗಾಯಗೊಂಡಿದ್ದಾರೆ. ರೌಡಿಸಂ ಮಾಡುವರನ್ನು ಸುಮ್ಮನೆ ಬಿಡುವುದಿಲ್ಲ. ಪೊಲೀಸ್ ಠಾಣೆಗೆ ಬಂದು ಧಮ್ಕಿ ಹಾಕುವವರ ಬಗ್ಗೆ ಮೃಧುದೋರಣೆ ತೋರಿಸಲು ಆಗುತ್ತಾ? ಪೊಲೀಸರ ತಲೆ ಕತ್ತರಿಸುತ್ತೀನಿ ಅನ್ನುವರನ್ನ ಬಿಡುವುದಕ್ಕಾಗುತ್ತದೆಯೇ? ಅಂತವರ ಮೇಲೆ ಕಾನೂನಿನಲ್ಲಿ ಇರುವ ಅವಕಾಶದಂತೆ‌ ಕ್ರಮ ಜರುಗಿಸಲಾಗುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಮಾದರಿ ಮಾಡುತ್ತೀವಿ ಅಂದಿರುವುದು ಗಮನಕ್ಕೆ ಬಂದಿದೆ. ಮುಲಾಜಿಲ್ಲದೇ ಕಾನೂನು‌ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಎಚ್ಚರಿಸಿದರು.

ಹರೀಶ್ ಪೂಂಜಾ ಜಾಮೀನಿನ ಮೇಲೆ ಬಿಡುಗಡೆ

“ಶಾಸಕ ಹರೀಶ್ ಪೂಂಜಾನನ್ನು ಬಂಧಿಸಿ‌ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪೊಲೀಸರು ದೋಷಾರೋಪಣಾ ಪಟ್ಟಿ ಸಲ್ಲಿಸುತ್ತಾರೆ. ಪ್ರಕರಣ ಜನ ಪ್ರತಿನಿಧಿಗಳ ವಿಶೇಷ ನ್ಯಾಯಲಯದ ಮುಂದೆ ಬರುತ್ತದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...