ಮಣಿಪುರ ಘಟನೆ | ದೇಶಾದ್ಯಂತ ಟ್ರೋಲ್ ಆದ ಪ್ರಧಾನಿಯ ‘ಮೊಸಳೆ ಕಣ್ಣೀರು’

Date:

  • ದೇಶದ ಗಮನ ಸೆಳೆದ ‘ದಿ ಟೆಲಿಗ್ರಾಫ್’ ದಿನಪತ್ರಿಕೆಯ ಮುಖಪುಟ
  • ಪ್ರಧಾನಿ ಹೇಳಿಕೆಯನ್ನು ‘ಮೊಸಳೆ ಕಣ್ಣೀರು’ ಎಂದು ಪರೋಕ್ಷ ಟಾಂಗ್

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ನಿನ್ನೆ(ಜು.20) ಮೌನ ಮುರಿದಿದ್ದರು.

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದ 79 ದಿನಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿರುವುದಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಸದನದ ಹೊರಗೆ ಮಾತನಾಡಿದ್ದ ಪ್ರಧಾನಿ ಮೋದಿ, ‘ಘಟನೆಯು ಹೇಯ ಮತ್ತು ನಾಚಿಕೆಗೇಡಿನ ಸಂಗತಿ. ಮಣಿಪುರದ ಹೆಣ್ಣು ಮಕ್ಕಳಿಗೆ ಏನಾಗಿದೆಯೋ ಅದನ್ನು ಕ್ಷಮಿಸಲು ಸಾಧ್ಯವಿಲ್ಲ. ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ದೇಶದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿಯ ಹೇಳಿಕೆಗೆ ರಾಷ್ಟ್ರೀಯ ದೈನಿಕ ‘ದಿ ಟೆಲಿಗ್ರಾಫ್’ ಇಂದು(ಜು.21) ಮುಖಪುಟದಲ್ಲೇ ಪರೋಕ್ಷ ಟಾಂಗ್ ಕೊಟ್ಟಿದ್ದು, 79 ದಿನಗಳ ನಂತರ ‘ಮೊಸಳೆ ಕಣ್ಣೀರು’ ಎಂದು ಜಾಡಿಸಿದೆ. ಇದು ದೇಶದ ಜನತೆಯ ಗಮನ ಸೆಳೆದಿದ್ದು, ಪ್ರಧಾನಿಯವರ ಬೇಜವಾಬ್ದಾರಿತನ ಟ್ವಿಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಒಳಗಾಗಿದೆ.

’56 ಇಂಚಿನ ಚರ್ಮಕ್ಕೆ ನೋವು ಮತ್ತು ಅವಮಾನ ತಿಳಿಯಲು 79 ದಿನ ಬೇಕಾಯಿತು’ ಎಂಬ ಶೀರ್ಷಿಕೆಯೊಂದಿಗೆ ಮೊಸಳೆಯೊಂದು ಕಣ್ಣೀರು ಹಾಕುತ್ತಿರುವ ಗ್ರಾಫಿಕ್ಸ್‌ ಅನ್ನು ಬಳಸಿ, ‘ದಿ ಟೆಲಿಗ್ರಾಫ್’ ಪತ್ರಿಕೆಯು ಮುಖಪುಟದಲ್ಲಿ ಪ್ರಕಟಿಸಿದೆ.

ಪತ್ರಿಕೆಯ ಮುಖಪುಟವನ್ನು ಸಾವಿರಾರು ಮಂದಿ ಲೈಕ್‌, ಶೇರ್‌ ಹಾಗೂ ರೀಟ್ವೀಟ್‌ ಮಾಡುವ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಸತ್ಯವನ್ನು ಈ ರೀತಿ ಬರೆಯುತ್ತಿರುವುದನ್ನು ನೋಡಲು ನಿಜಕ್ಕೂ ಖುಷಿಯಾಗುತ್ತಿದೆ. ನಮ್ಮದೊಂದು ಸೆಲ್ಯೂಟ್ ಇರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ದಿ ಟೆಲಿಗ್ರಾಫ್’ ಪತ್ರಿಕೆಯು ಇಂಗ್ಲಿಷ್ ದಿನಪತ್ರಿಕೆಯಾಗಿದ್ದು, 7 ಜುಲೈ 1982ರಿಂದ ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಪ್ರಕಟಗೊಳ್ಳುತ್ತಿದೆ. 2019ರಲ್ಲಿ ನಡೆಸಿದ ಅಧ್ಯಯನವೊಂದರ ಪ್ರಕಾರ, ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಓದುವ ಎಂಟನೇ ಇಂಗ್ಲಿಷ್ ಪತ್ರಿಕೆಯಾಗಿದೆ. ಈ ಪತ್ರಿಕೆಯು ಇಂತದ್ದೇ ಮುಖಪುಟ ಶೀರ್ಷಿಕೆಗಳಿಗೆ ಹೆಸರು ಗಳಿಸಿಕೊಂಡಿದೆ.

ಟೆಲಿಗ್ರಾಪ್‌ ಪತ್ರಿಕೆ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಹಾಗೂ ಬಿಜೆಪಿ ನಾಯಕರ ಅವ್ಯವಹಾರವನ್ನು ಸದಾ ಬಯಲಿಗೆಳೆಯುತ್ತಲೇ ಬರುತ್ತಿದೆ. ದೇಶದಲ್ಲಿ ಕೇಂದ್ರದ ವಿರುದ್ಧ ಗಟ್ಟಿತನ ತೋರುತ್ತಿರುವುದು ಇದೊಂದೇ ಮಾಧ್ಯಮ ಸಂಸ್ಥೆ. ಉಳಿದವುಗಳು ಕೇವಲ ‘ಗೋದಿ ಮಾಧ್ಯಮ’ಗಳಾಗಿವೆ ಎಂದು ಜನರು ಟೀಕಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...