ದೇವೇಗೌಡರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿದ್ದು ಇದೇ ಕಾಂಗ್ರೆಸ್: ಎಚ್‌ ಡಿ ಕುಮಾರಸ್ವಾಮಿ

Date:

ದೇವೇಗೌಡರ ರಾಜಕೀಯ ಭವಿಷ್ಯ ನಿರ್ನಾಮ ಮಾಡಿದ್ದು ಇದೇ ಕಾಂಗ್ರೆಸ್, ಇವರಿಂದ ನಾನು ಪಾಠ ಕಲಿಬೇಕಾ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಅಧಿಕಾರಕ್ಕಾಗಿ ಜೆಡಿಎಸ್ ಕೇಸರಿಕರಣವಾಗಿದೆ’ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ಕೊಟ್ಟರು.

“ಚರಣ್ ಸಿಂಗ್ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಬಿಡಲಿಲ್ಲ. ಚಂದ್ರಶೇಖರ್ ಸೇರಿ ಎಷ್ಟು ಜನರನ್ನ ಬಲಿ ತೆಗೆದುಕೊಂಡರು. ಅವರ ರಾಜಕೀಯ ಭವಿಷ್ಯ ನಿರ್ನಾಮ ‌ಮಾಡಿಬಿಟ್ಟರು. ‌ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಕ್ಕಾಗಿ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್. ಅವತ್ತು ಏನೇನು ನಡೆಯಿತು ಎನ್ನುವುದನ್ನು ಅವರು ತಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಲಿ. ಬೆಂಗಳೂರಿನಲ್ಲಿ ರಾಜಕೀಯ ಮಾಡುವ ಬದಲು ತಮ್ಮ ಜಿಲ್ಲೆಯಲ್ಲಿ ಏನಾಗಿದೆ ಎಂಬ ಬಗ್ಗೆ ಗಮನ ಹರಿಸಲಿ. ಕಾಂಗ್ರೆಸ್ ನವರು ಮಾತೆತ್ತಿದರೆ ತಾಜ್ ಹೋಟೆಲ್‌ನಲ್ಲಿ ಇದ್ದೆ ಅಂತಾರೆ. ನಾನು ತಾಜ್ ಹೊಟೇಲಿನಲ್ಲಿ ಮಲಗಿದ್ದರೆ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡೋಕೆ ಆಗುತ್ತಿತ್ತಾ”ಎಂದು ಸಚಿವರು ಪ್ರಶ್ನಿಸಿದರು.

“ಕಾಂಗ್ರೆಸ್ ಶಾಸಕರಿಗೆ ‌ನಾನು ಸಿಎಂ ಅಗಿದ್ದಾಗ ಅಭಿವೃದ್ದಿಗಾಗಿ 19 ಸಾವಿರ ಕೋಟಿ ಅನುದಾನವನ್ನು ಒಂದೇ ವರ್ಷದಲ್ಲಿ ಕೊಟ್ಟಿದ್ದೆ. ಇವತ್ತು ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಇದ್ದಾಗ ಏನ್ ಕೊಟ್ರು ಅಂತ ಚರ್ಚೆ ಮಾಡ್ತಾರೆ. ದಾಖಲೆ, ಅಂಕಿ ಅಂಶಗಳು ಅವರ ಬಳಿಯೇ ಇವೆ. ಮೊದಲು ನೋಡಲಿ” ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಆರ್ ಎಸ್ ಎಸ್ ಬ್ಯಾನ್ ವಿಚಾರ

“ಹಿಂದೆ ನಾನು ಆರ್ ಎಸ್ ಎಸ್ ಅನ್ನು ಟೀಕೆ ಮಾಡಿದ್ದೇನೆ. ಇಲ್ಲ ಅಂತ ಹೇಳಲ್ಲ. ಕಾಂಗ್ರೆಸ್‌ನವರು ನೀವೇನು ಮಾಡಿದ್ದೀರಾ? ರಾಜ್ಯದಲ್ಲಿ 136 ಸೀಟು ಕೊಟ್ಟಿದ್ದಾರೆ. ಜನರ ಸಮಸ್ಯೆ ಕೇಳ್ತಿಲ್ಲ. ಕಲಬುರ್ಗಿಯಲ್ಲಿ ಜನ ಬೀದಿಯಲ್ಲಿ ಇದ್ದಾರೆ. ರೈತರು ಸಂಕಷ್ಟದಲ್ಲಿ ಇದ್ದಾರೆ ಏನು ಮಾಡಿದ್ದೀರಪ್ಪ?” ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

“ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಅಪ್ಪ ಏನು ಹೇಳಿದ್ದರು? ನಮ್ಮ ಹೊಲದಲ್ಲಿ 40 ಎಕರೆ ಬೆಳೆ ನಷ್ಟ ಆಗಿದೆ ಅಂತ ರೈತರು ಹೋಗಿ ಕೇಳಿದರೆ ನಾನು ಎಲ್ಲಿ ಹೋಗಲಿ ಅಂತ ಹೇಳಿದ್ದರು. ನಿಮ್ಮಿಂದ ನಾನು ಯಾವ ರೀತಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು ಅಂತ ಕಲಿಯಬೇಕಾ? ಪ್ರಿಯಾಂಕ್ ಖರ್ಗೆ ಮಾತಾಡಬೇಕಾದ್ರೆ ಹದ್ದುಬಸ್ತಿನಲ್ಲಿ ಮಾತಾಡಿ. ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ ನೀವು” ಎಂದು ಪ್ರಿಯಾಂಕ ಖರ್ಗೆಗೆ ಸಚಿವರು ಎಚ್ಚರಿಕೆ ನೀಡಿದರು.

“ಅಧಿಕಾರಕ್ಕಾಗಿ ನಾವು ಯಾರ ಬಳಿಗೂ ಹೋಗೊಲ್ಲ. ಕಾಂಗ್ರೆಸ್ ಅವರು ಅಧಿಕಾರ ಹಿಡಿಯಲು ಬೇಕಾದಾಗ ನಮ್ಮ ಹತ್ತಿರ ಬರುತ್ತಾರೆ. ಯಾರ ಯಾರ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ ಎಂಬುದು ಗೊತ್ತಿದೆ. ಯಾರು ಯಾರನ್ನ ಅಧಿಕಾರದಿಂದ ತೆಗೆದರು‌, ಎಷ್ಟು ಜನರ ರಾಜಕೀಯ ಜೀವನ ಹಾಳು ಮಾಡಿದರು ಎನ್ನುವುದು ನಿಮಗೆ ತಿಳಿದಿಲ್ಲವೇ” ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಪಥಸಂಚಲನ ಪಾಲಿಟಿಕ್ಸ್‌ | ಕಲಬುರಗಿಯಲ್ಲಿ ನಡೆಯುವುದೇ RSS-DSS ನೇರ ಹಣಾಹಣಿ?

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕಿಲ್ಲ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ಈ ಬಗ್ಗೆ ವಿಷಯ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಅವರು ತಿಳಿಸಿದರು.

ಅನುದಾನ; ಸಿಎಂಗೆ ತರಾಟೆ

ಕೇಂದ್ರದಿಂದ ರಾಜ್ಯಕ್ಕೆ ಸೂಕ್ತ ಅನುದಾನ ಸಿಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ‌ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ದೇಶದಲ್ಲಿ 50 ವರ್ಷಗಳ ಕಾಂಗ್ರೆಸ್ ಪಕ್ಷ ಒಂದೇ ಆಡಳಿತ ನಡೆಸಿದೆ. ಸ್ವಾತಂತ್ರ್ಯ ಬಂದ ನಂತರ ಎಲ್ಲಾ28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಸದರನ್ನೇ ಜನ ಗೆಲ್ಲಿಸುತ್ತಿದ್ದರು. ಆಗ ಕೇಂದ್ರದಲ್ಲೂ, ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಇತ್ತು. ಅವತ್ತಿನ ಅ ಸಂಸತ್ ಸದಸ್ಯರು ಏನೇನು ತಂದಿದ್ದರು” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...