ಜ.19ಕ್ಕೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ, 21ಕ್ಕೆ ಕಾರ್ಯಕರ್ತರ ಸಮಾವೇಶ: ಡಿ ಕೆ ಶಿವಕುಮಾರ್

Date:

ಜ.19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ. ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ” ಎಂದರು.

“ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೀಘ್ರ ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ

ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, “ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿತಿ ಸರಿಯಿಲ್ಲ

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, “ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ” ಎಂದು ತಿಳಿಸಿದರು.

ಸಂಕ್ರಾಂತಿ ಹಬ್ಬದ ಶುಭಾಶಯಗಳು

“ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷ ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಮತ್ತೆ ಇಂತಹ ಪರಿಸ್ಥಿತಿ ಬರಬಾರದು. ರೈತರ ಬದುಕು ಹಸನಾಗಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...