ನರೇಂದ್ರ ಮೋದಿಗೆ ಖಡಕ್ ಸವಾಲೆಸೆದ ಜಗದೀಶ್ ಶೆಟ್ಟರ್

Date:

  • ಪಕ್ಷದಲ್ಲಿ ಬದಲಾವಣೆ ಬಯಸುವ ಮೋದಿ ತಾವೂ ಅದಕ್ಕೆ ಒಳಪಡುತ್ತಾರಾ?
  • ಜನಮನ್ನಣೆ ಇರುವವರೆಗೂ ರಾಜಕೀಯದಲ್ಲಿರಬೇಕು ಎಂದ ಜಗದೀಶ್ ಶೆಟ್ಟರ್

ಇನ್ನೊಬ್ಬರನ್ನು ಅಧಿಕಾರದ ಆಸೆಯಿಂದ ಬೇರೆ ಕಡೆ ಹೋದರು ಎನ್ನುವ ನರೇಂದ್ರ ಮೋದಿ ಅವರು, ತಾವೂ ಅಧಿಕಾರದಿಂದ ದೂರ ಸರಿಯುತ್ತಾರಾ? ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನರೇಂದ್ರ ಮೋದಿ ಅವರು ನಾಲ್ಕು ಬಾರಿ ಸಿಎಂ ಎರಡು ಬಾರಿ ಪ್ರಧಾನಿಯಾಗಿದ್ದಾರೆ. ಅವರು ಈಗ ರಾಜಕೀಯ ಬಿಡ್ತಾರಾ..? ಅದು ಸಾಧ್ಯವಿಲ್ಲ ಇನ್ನೊಮ್ಮೆ ಪ್ರಧಾನಿಯಾಗಲು ಪ್ರಯತ್ನ ಮಾಡುತ್ತಾರೆ. ಆದರೆ ಬೇರೆಯವರು ಅಧಿಕಾರಕ್ಕಾಗಿ ಅನ್ಯ ಪಕ್ಷಕ್ಕೆ ಹೋಗುತ್ತಾರೆಂದು ಪಕ್ಷ ಬಿಟ್ಟವರ ಬಗ್ಗೆ ಮೋದಿ ಹೇಳುತ್ತಾರೆ ಎಂದು ಶೆಟ್ಟರ್ ಪ್ರಧಾನಿಗಳನ್ನು ಕುಟುಕಿದರು.

ನಾನು ಏನೋ ಆಗಬೇಕೆಂಬ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಬಿಜೆಪಿಯವರು ಮಾಡಿದ ಮೋಸದಿಂದ ಕಾಂಗ್ರೆಸ್ ಸೇರಿದೆ. ಶಾಸಕನಾದರೆ ಮನಸ್ಸಿಗೆ ಸಮಾಧಾನ ಆಗುತ್ತದೆ ಎಂದು ಪಕ್ಷ ಬದಲಾಯಿಸಿದೆ. ಇದೇ ವಿಚಾರವನ್ನು ಬಿಜೆಪಿಯವರಿಗೆ ಹೇಳಿದ್ದೆ. ಆದರೆ ಅವರಾರೂ ಇದಕ್ಕೆ ಗಮನ ಕೊಡದೆ ಅಪಮಾನಿಸಿದರು ಎಂದು ಶೆಟ್ಟರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ಎನ್ನುವುದು ಜನರು ನೀಡುವ ಆಶೀರ್ವಾದ. ಹೀಗಾಗಿ ಜನಾಶೀರ್ವಾದ ಇರುವವರೆಗೂ ರಾಜಕೀಯದಲ್ಲಿ ಇರಬೇಕು ಎಂದು ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?:ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಬಿಜೆಪಿ ಹಾಗೂ ಸಿಎಂ ಬೊಮ್ಮಾಯಿ ವಿರುದ್ದ ವಾಗ್ದಾಳಿ ನಡೆಸಿದ ಶೆಟ್ಟರ್, ಉತ್ತರ ಕರ್ನಾಟಕದವರೇ ಸಿಎಂ ಆದರೂ ಅಭಿವೃದ್ಧಿ ಮಾಡಿಲ್ಲ. ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ಮೂಡಿಸಿದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲಿಲ್ಲ. ಮೀಸಲಾತಿಯನ್ನೂ ಸಮರ್ಪಕವಾಗಿ ಅನುಷ್ಠಾನ ಮಾಡಲಿಲ್ಲ, ಈ ಎಲ್ಲ ಕಾರಣಗಳಿಂದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು ಎಂದು ಶೆಟ್ಟರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...