ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು ಅಕ್ಷಮ್ಯ ಅಪರಾಧ : ಯಡಿಯೂರಪ್ಪ

Date:

  • ಶೆಟ್ಟರ್ – ಸವದಿ ಬಂಡವಾಳ ಬಯಲು ಮಾಡುವುದಾಗಿ ಬಿಎಸ್‌ವೈ ಹೇಳಿಕೆ
  • ಬಿಜೆಪಿಯ ಪಕ್ಷಾಂತರ ಬೆಳವಣಿಗೆಗೆ ಕಾರ್ಯಕರ್ತರು ವಿಚಲಿತರಾಗದಂತೆ ಕರೆ

ಜಗದೀಶ್‌ ಶೆಟ್ಟರ್‌ ಅವರಿಗೆ ನಾವು ಏನು ಅನ್ಯಾಯ ಮಾಡಿದ್ದೇವೆ? ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದರು.

ಜಗದೀಶ್‌ ಶೆಟ್ಟರ್‌ ಅವರು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರಬರುತ್ತಿದ್ದಂತೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ದಿಢೀರ್‌ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಶೆಟ್ಟರ್‌ ಪಕ್ಷ ತೊರೆಯುವುದರಿಂದ ಯಾವುದೇ ಡ್ಯಾಮೇಜ್‌ ನಮ್ಮ ಪಕ್ಷಕ್ಕೆ ಆಗುವುದಿಲ್ಲ. ನಮ್ಮ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ” ಎಂದರು.

“ಜನಸಂಘದ ಕಾಲದಿಂದ ಶೆಟ್ಟರ್ ಬಿಜೆಪಿಯೊಂದಿಗೆ ಇದ್ದರು. ಶೆಟ್ಟರ್‌ ಅವರಿಗೆ ಪಕ್ಷ ಎಲ್ಲ ಸ್ಥಾನಮಾನ ನೀಡಿತ್ತು. ನಾನೇ ಮುಂದೆ ನಿಂತು ಅವರನ್ನು ಮುಖ್ಯಮಂತ್ರಿ ಮಾಡಿದ್ದೆ. ಶೆಟ್ಟರ್ ಅವರು ಆತುರದಿಂದ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ಈ ಬೆಳವಣಿಗೆ ಅವರೇ ನಂಬಿರುವ ಸಿದ್ದಾಂತಕ್ಕೆ ವಿರುದ್ಧವಾಗಿದೆ. ನಮಗೆ ಸ್ಥಾನಮಾನ ಸಿಗಲಿ ಬಿಡಲಿ, ದೇಶಕ್ಕಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ನಮ್ಮ ನಾಯಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿಗೆ ತೆರಳಿ, ಕೆಲ ಭರವಸೆ ನೀಡಿದ್ದರು. ಆದರೆ, ಶೆಟ್ಟರ್ ಅವರು ನಮ್ಮ ನಾಯಕರ ಮಾತಿಗೆ ಬೆಲೆ ಕೊಡಲಿಲ್ಲ. ನಮಗೆ ದ್ರೋಹ ಬಗೆದು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ” ಎಂದು ಕಿಡಿ ಕಾರಿದರು.

“ಜಗದೀಶ್ ಶೆಟ್ಟರ್ ಅವರನ್ನು ರಾಜ್ಯಾದ್ಯಕ್ಷ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಮಾಡಿದ್ದೆವು. ಆದರೂ ಅವರು ಕಾಂಗ್ರೆಸ್‌ ಜೊತಗೆ ಕೈ ಜೋಡಿಸಲು ಹೊರಟಿರುವುದು ಅಕ್ಷಮ್ಯ ಅಪರಾಧ ಇದನ್ನು ಜನ ಕ್ಷಮಿಸಲಾರರು. ಬರುವ ದಿನಗಳಲ್ಲಿ ಜಗದೀಶ್‌ ಶೆಟ್ಟರ್‌ ಅವರ ಬಣ್ಣ ಬಯಲು ಮಾಡುವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶೆಟ್ಟರ್‌ ರಾಜೀನಾಮೆಯಿಂದ ಬಿಜೆಪಿಗೆ ‘ಡ್ಯಾಮೇಜ್‌’ ಆಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ

“ನಾವು ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಯತ್ನ. ಹೊಸತನಕ್ಕೆ ನಾವು ದಾರಿ ಮಾಡಿಕೊಡಬೇಕು. ಬಿಜೆಪಿ ನಿಮಗೆ ಎಲ್ಲವೂ ಕೊಟ್ಟಿದೆ. ಆ ಋಣ ತೀರಿಸಬೇಕಿದೆ. ಅದನ್ನು ಶೆಟ್ಟರ್‌ ಅರ್ಥ ಮಾಡಿಕೊಳ್ಳಲಿಲ್ಲ. ನಾನು ಆ ಭಾಗಕ್ಕೆ ಹೋಗಿ ವಾಸ್ತವ ಅರ್ಥ ಮಾಡಿಸುತ್ತೇನೆ. ಪಕ್ಷ ಬಿಟ್ಟು ಹೋದವರ ಬಂಡಾವಳ ಬಯಲು ಮಾಡುತ್ತೇನೆ. ರಾಜಕೀಯ ಬೆಳವಣಿಗೆಯಿಂದ ಕಾರ್ಯಕರ್ತರು ವಿಚಲಿತರಾಗಬೇಡಿ, ಒಟ್ಟಾಗಿ ಕೆಲಸ ಮಾಡಿ” ಎಂದು ಕರೆ ನೀಡಿದರು.

ಲಕ್ಷ್ಮಣ ಸವದಿ ಅವರ ಕುರಿತು ಮಾತನಾಡಿ, “ಚುನಾವಣೆಯಲ್ಲಿ ಸೋತ ಸವದಿಗೆ ಉಪ ಮುಖ್ಯಮಂತ್ರಿ ಮಾಡಿದ್ದೆವು. ಅವರನ್ನು ಎಂಎಲ್‌ಸಿ ಮಾಡಿದ್ದೆವು. ಅವರ ನಿರ್ಧಾರ ದುರದೃಷ್ಟಕರ. ಅದನ್ನು ತಿರಸ್ಕರಿಸಿ ಕಾಂಗ್ರೆಸ್‌ಗೆ ಹೋಗಿದ್ದಾರೆ. ನಮ್ಮ ಕೆಲ ನಾಯಕರು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...