ತೇಜಸ್ವಿ ಸೂರ್ಯ ನಾಮಪತ್ರ: ಮೆರವಣಿಗೆಯಲ್ಲಿ ಕಡ್ಡಾಯ ಭಾಗವಹಿಸಲು ಜೈನ್ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಸೂಚನೆ!

Date:

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ನಾಳೆ(ಏಪ್ರಿಲ್ 4) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆಯಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ‘ಫರ್ಮಾನು’ ಹೊರಡಿಸಿರುವುದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಬೆಂಗಳೂರಿನ ವಿವಿ ಪುರಂನಲ್ಲಿರುವ ಜೈನ್ ಕಾಲೇಜಿನ ವಾಟ್ಸಪ್ ಗ್ರೂಪಿನಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಇದು ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಈ ಸೂಚನೆಯಲ್ಲಿ, “ನಾಳೆ(ಏಪ್ರಿಲ್ 4) ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ಸದಸ್ಯರು ಸೇರಿ ಎಲ್ಲ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಜಯನಗರದ ಮೈಯ್ಯಾಸ್ ಹೋಟೆಲ್ ಬಳಿ ಸೇರಬೇಕು. ಅಲ್ಲಿ ನಿಮಗೆ ಟಿ-ಶರ್ಟ್ ನೀಡಲಾಗುವುದು. ಆದ್ದರಿಂದ ತಡ ಮಾಡಬಾರದು. ಕಡ್ಡಾಯವಾಗಿ ಇದರಲ್ಲಿ ಭಾಗವಹಿಸಬೇಕು. ಇದರಿಂದ ಯಾವುದೇ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಇದಕ್ಕಾಗಿ ನೀವು ಹಾಜರಾತಿ ಪಡೆಯುತ್ತೀರಿ” ಎಂದು ಸೂಚನೆ ನೀಡಲಾಗಿದೆ ಎಂದು ಈ ದಿನ.ಕಾಮ್‌ಗೆ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
surya 1
ಕಡ್ಡಾಯ ಭಾಗವಹಿಸುವಂತೆ ಕಳುಹಿಸಲಾಗಿರುವ ಸಂದೇಶ

ಇಂದು ಕಾಲೇಜಿನ ಪ್ರತಿಯೊಂದು ತರಗತಿಯ ವಾಟ್ಸಪ್ ಗ್ರೂಪ್‌ನಲ್ಲೂ ಕೂಡ ಈ ಸಂದೇಶ ರವಾನಿಸಲಾಗಿದೆ. ಅಲ್ಲದೇ, ಕಾಲೇಜಿನ ಆಡಳಿತ ಮಂಡಳಿಯ ಸೂಚನೆಯ ಹಿನ್ನೆಲೆಯಲ್ಲಿ ಪ್ರತಿಯೊಂದು ವಿಭಾಗದ ತರಗತಿಗಳಿಗೆ ತೆರಳಿಯೂ ಕೂಡ ಸೂಚನೆ ನೀಡಿರುವುದಾಗಿ ಕೆಲವು ವಿದ್ಯಾರ್ಥಿಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಹಲವು ವಿದ್ಯಾರ್ಥಿಗಳು ಈ ಬಗ್ಗೆ ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದು, ಕಡ್ಡಾಯ ಯಾಕೆ ಮಾಡಿದ್ದೀರಾ ಎಂದು ಕಾಲೇಜಿನ ಪ್ರಾಂಶುಪಾಲರಲ್ಲಿ ಪ್ರಶ್ನಿಸಿದಾಗ, ‘ಉತ್ತರ ನೀಡಿಲ್ಲ’ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಬೆಂಗಳೂರಿನ ವಿವಿ ಪುರಂನಲ್ಲಿರುವ ಜೈನ್ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಅವರನ್ನು ಸಂಪರ್ಕಿಸಿತು. ಈ ವೇಳೆ ಪ್ರತಿಕ್ರಿಯಿಸಿದ ಅವರು, “ತೇಜಸ್ವಿ ಸೂರ್ಯ ಮೆರವಣಿಗೆಯಲ್ಲಿ ಭಾಗವಹಿಸಲು ನಾವು ಯಾವುದೇ ಸೂಚನೆ ಕೊಟ್ಟಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

WhatsApp Image 2024 04 03 at 11.00.52 PM

 

ಒಂದು ವಾರದ ಹಿಂದೆ ಕಾಲೇಜಿಗೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ, 2 ವರ್ಷದ ಹಿಂದೆ ನಾನು ನಿಮ್ಮ ಕಾಲೇಜಿನ ಫೆಸ್ಟ್‌ನಲ್ಲಿ ಬಂದು ಭಾಗವಹಿಸಿದ್ದೆ. ಹಾಗಾಗಿ, ನಾನು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು ಭಾಗವಹಿಸಲು ಕಳುಹಿಸಿಕೊಡುವಂತೆ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಬೇಡಿಕೆ ಇರಿಸಿದ್ದರು. ಹೀಗಾಗಿ, ಕಾಲೇಜು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯು ಏಪ್ರಿಲ್ 3ರಂದು ಸೂಚನೆ ನೀಡಿರುವ ಆರೋಪ ಕೂಡ ಕೇಳಿಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...