ಜಲ ಜೀವನ್ ಮಿಷನ್ | ಕರ್ನಾಟಕಕ್ಕೆ ಕೇಂದ್ರ ಸರ್ಕಾರ ದ್ರೋಹ ಬಗೆದಿದ್ದು ಹೇಗೆ? ಸಿಎಂ ವಿವರಣೆ

Date:

ಕರ್ನಾಟಕದಲ್ಲಿ ‘ಜಲ ಜೀವನ್ ಮಿಷನ್’ ಅನ್ನು ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ ಎಂದು ಎಕ್ಸ್‌ ತಾಣದಲ್ಲಿ ಕೇಂದ್ರದ ಅನ್ಯಾಯದ ಬಗ್ಗೆ ಬರೆದುಕೊಂಡಿದ್ದಾರೆ.

ಜಲಜೀವನ್ ಮಿಷನ್‌ಗೆ ಒಟ್ಟು ಹಂಚಿಕೆ – ₹49,262 ಕೋಟಿ (ಕೇಂದ್ರದ ಪಾಲು – ₹26,119 ಕೋಟಿ, ರಾಜ್ಯದ ಪಾಲು – ₹23,142 ಕೋಟಿ). ಬಿಡುಗಡೆಯಾದ ಒಟ್ಟು ಅನುದಾನ ₹32,202 ಕೋಟಿ. ಇದರಲ್ಲಿ ಕೇಂದ್ರದ ಪಾಲು – ₹11,760 ಕೋಟಿ, ರಾಜ್ಯದ ಪಾಲು – ₹20,442 ಕೋಟಿ. ಅಂದರೆ ಜಲಜೀವನ್ ಮಿಷನ್‌ಗೆ ಶೇ. 45ರಷ್ಟು ಮಾತ್ರ ಕೇಂದ್ರ ಸರಾಕರ ಬದ್ಧತೆ ಹೊಂದಿದೆ. ರಾಜ್ಯ ಸರ್ಕಾರ ಶೇ. 88.3ರಷ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024-25ನೇ ಸಾಲಿನ ಬಜೆಟ್‌ನಲ್ಲೂ ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ಕೇಂದ್ರ ಸರ್ಕಾರವು ಜೆಜೆಎಮ್ ಗೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ₹570 ಕೋಟಿ ಮಾತ್ರ ಬಿಡುಗಡೆಯಾಗಿರುತ್ತದೆ. ಈ ವಿಚಾರವಾಗಿ ಹಲವಾರು ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ. ಮತ್ತೊಂದೆಡೆ, ಕರ್ನಾಟಕವು ತನ್ನ ಬಜೆಟ್ ನಲ್ಲಿ ₹7,652 ಕೋಟಿ ಹಂಚಿಕೆ ಮಾಡಿದ್ದು, ₹4,977 ಕೋಟಿ ಹಣವನ್ನು ಬಿಡುಗಡೆ ಮಾಡಿದೆ ಎಂದು ಸಿಎಂ ತಿಳಿಸಿದ್ದಾರೆ.

“ಇದು ಕೇವಲ ಕರ್ನಾಟಕಕ್ಕೆ ಸಂಬಂಧಿಸಿದ್ದು ಮಾತ್ರ ಅಲ್ಲ – ಇದು ದೇಶದ ಎಲ್ಲ ರಾಜ್ಯಗಳಿಗೆ ಮಾಡುತ್ತಿರುವ ಅನ್ಯಾಯ. ಜೆಜೆಎಂ (2024-25) ಗಾಗಿ ಅಂದಾಜು ಬಜೆಟ್ – ₹70,163 ಕೋಟಿ ಪರಿಷ್ಕೃತ ಅಂದಾಜು ಮೊತ್ತವನ್ನು ಕೇವಲ ₹22,694 ಕೋಟಿಗೆ ಇಳಿಸಲಾಗಿದೆ. ಈ ಮೂಲಕ ನರೇಂದ್ರ ಮೋದಿ ಸರ್ಕಾರ ತನ್ನ ಬಜೆಟ್ ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿ ಅಂಕಿ ಅಂಶಗಳನ್ನು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

“ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ. ಈ ರೀತಿ ಜನರನ್ನು ದಾರಿ ತಪ್ಪಿಸುವ ಬದಲು, 2024-25 ಸಾಲಿನ ಬಜೆಟ್‌ನಲ್ಲಿ ಜೆಜೆಎಂಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು” ಎಂದು ಮುಖ್ಯಮಂತ್ರಿಗಳು ಆಗ್ರಹಿಸಿದ್ದಾರೆ.

“ಬಿಜೆಪಿಯ ಇಂತಹ ಕೃತ್ಯಗಳ ಹೊರತಾಗಿಯೂ ಕರ್ನಾಟಕದಲ್ಲಿ ನಮ್ಮ ಸರ್ಕಾರವು ನುಡಿದಂತೆ ನಡೆದು ಉತ್ತಮ ಸಾಧನೆ ಮಾಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ಬದ್ಧವಾಗಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...