ಅರಣ್ಯ ಭೂಮಿ ಗಡಿ ಗುರುತಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೇ: ಸಚಿವ ಈಶ್ವರ್ ಖಂಡ್ರೆ

Date:

ಅರಣ್ಯ ಭೂಮಿ ಗಡಿ ಗುರುತಿಸಿ, ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೇ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ್  ಖಂಡ್ರೆ ಹೇಳಿದರು.

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

“ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಂತೆ ಹಾಗೂ 100 ಮೀಟರ್ ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾತಿ ಪೂರ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಮ್ಮತಿ ಪಡೆಯುವುದು ಕಡ್ಡಾಯವಾಗಿದೆ. ರೈತರು ಕಂದಾಯ ಇಲಾಖೆ ಸಾಗುವಳಿ ಚೀಟಿಗೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರ ಕೋರಿದಾಗ ಅರಣ್ಯ ಇಲಾಖೆಯ ದಾಖಲೆ, ಅಧಿಸೂಚನೆ ಹಾಗೂ ನಕಾಶೆಗಳೊಂದಿಗೆ ಪರಿಶೀಲಿಸಿ, ಜಾಗವು ಅರಣ್ಯ ಪ್ರದೇಶ ವ್ಯಾಪ್ತಿಗೆ ಬರುತ್ತದೆ ಅಥವಾ ಇಲ್ಲವೇ ಎಂದು ಹಿಂಬರಹ ನೀಡಲಾಗುತ್ತದೆ. ಅಧಿಸೂಚಿತ ಹಾಗೂ ಡೀಮ್ಡ್ ಅರಣ್ಯ ಅರಣ್ಯ ಪ್ರದೇಶಗಳಿಗೆ ಸರ್ವೇ ನಂಬರ್‌ವಾರು ವಿವರವಾದ ಮಾಹಿತಿ ಇಲ್ಲದಂತಹ ಸಂದರ್ಭದಲ್ಲಿ ನಿರಾಕ್ಷೇಪಣಾ ಪತ್ರ ನೀಡಲು ಕಂದಾಯ ಇಲಾಖೆಯೊಂದಿಗೆ ಜಂಟಿ ಮೋಜಣಿ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳ್ತಂಗಡಿ ಪ್ರದೇಶದ ರಿ.ಸಂ.69ರಲ್ಲಿ ಅರಣ್ಯ ಭೂಮಿ ಬಗ್ಗೆ ಜಂಟಿ ಸರ್ವೇ ಕೈಗೊಂಡಾಗ 500 ಎಕರೆ ಅಧಿಕ ಭೂಮಿ ಅರಣ್ಯ ಇಲಾಖೆ ಭೂಮಿಯೊಂದಿಗೆ ಇರುವುದು ಕಂಡುಬಂದಿದೆ. ಸರ್ಕಾರ ಅರಣ್ಯ ಅರಣ್ಯ ಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೇ ನಡೆಸಬೇಕು. ಅರಣ್ಯ ಹಾಗೂ ಕಂದಾಯ ಇಲಾಖೆ ಮೊಜಣಿಗೆ ಕಾಲಮಿತಿ ನಿಗದಿ ಪಡಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವರಲ್ಲಿ ಕೋರಿದರು.

ಆನೆಗಳ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್

ರಾಜ್ಯದಲ್ಲಿ 6995 ಆನೆಗಳು ಇವೆ. ಒಟ್ಟು 7 ಆನೆ ಕಾರ್ಯಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಆಲ್ಡಾರಾ ಶಾಖೆಯ ಅರಣ್ಯ ಗಡಿ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 2022-23ನೇ ಸಾಲಿನಲ್ಲಿ ರೂ.1.73 ಕೋಟಿ, 2023-24ರಲ್ಲಿ ರೂ.3.59 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಒಟ್ಟು 7.152 ಕಿ.ಮೀ ರೈಲ್ವೇ ಬ್ಯಾರಿಕೇಡ್ ನಿರ್ಮಾಣ ಮಾಡಬೇಕಿದೆ. ಇದರಲ್ಲಿ 1.215 ಕಿ.ಮೀ ಪೂರ್ಣಗೊಂಡಿದೆ ಎಂದು ಅರಣ್ಯ ಸಚಿವರು ಸದನಕ್ಕೆ ಮಾಹಿತಿ ನೀಡಿದರು.

“2.337 ಕಿ.ಮೀ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 3.60 ಕಿ.ಮೀ ನಿರ್ಮಾಣ ಕಾಮಗಾರಿ ಬಾಕಿ ಉಳಿದಿದೆ. ಡಿಸೆಂಬರ್ 2024ರ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುತ್ತೇವೆ” ಎಂದು ಸಚಿವ ಈಶ್ವರ್ ಖಂಡ್ರೆ, ಶಾಸಕ ರಾಜೇಗೌಡ ಟಿ.ಡಿ ಅವರ ಪ್ರಶ್ನೆಗೆ ಉತ್ತರಿಸಿದರು.

ಮೈಸೂರು ಜಿಲ್ಲೆ ಹೆಗ್ಗದೇವನಕೋಟೆ ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಎಂಟು ಮಾನವ ಹಾಗೂ ವನ್ಯಪ್ರಾಣಿ ಸಂಘರ್ಷಗಳು ದಾಖಲಾಗಿವೆ. ಈ ಭಾಗದಲ್ಲಿ ಅರಣ್ಯ ಗಡಿ ಪ್ರದೇಶ ಗುರುತಿಸುವ ಕಾರ್ಯ ಪೂರ್ಣಗೊಂಡಿದೆ. ಸಂಘರ್ಷ ತಡೆಯಲು ಜಂಟಿ ಸರ್ವೇ ಕಾರ್ಯವನ್ನು ಸಹ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದರು.

“ರಾಜ್ಯದಲ್ಲಿ ಒಟ್ಟು ರೂ.200 ಕೋಟಿ ವೆಚ್ಚದಲ್ಲಿ ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು 640 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಒಟ್ಟು 312 ಕಿ.ಮೀ. ಬ್ಯಾರಿಕೇಡ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಮನೆ ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ, ಆನೆ ತಡೆ ಕಂದಕ ನಿರ್ಮಾಣ ಮಾಡಿ ನಿರ್ವಹಿಸಲಾಗುತ್ತಿದೆ” ಎಂದು ಸಚಿವರು, ಶಾಸಕ ಅನಿಲ್ ಚಿಕ್ಕಮಾದು ಕೇಳಿದ್ದ ಪ್ರಶ್ನೆಗೆ ಉತ್ತರಿಸುವ ವೇಳೆ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...