ಪತ್ರಕರ್ತ ನಿಖಿಲ್ ವಾಘ್ಲೆ ಮೇಲೆ ಬಿಜೆಪಿ ದೂರು: ಪುಣೆಯಲ್ಲಿ ಎಫ್‌ಐಆರ್ ದಾಖಲು

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಇತ್ತೀಚೆಗೆ ಭಾರತರತ್ನ ಪ್ರಶಸ್ತಿ ಪಡೆದ ಬಿಜೆಪಿ ಮುಖಂಡ ಎಲ್‌ಕೆ ಅಡ್ವಾಣಿ ಕುರಿತು ಅವಹೇಳನಕಾರಿ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಆರೋಪದಲ್ಲಿ ಹಿರಿಯ ಪತ್ರಕರ್ತ ನಿಖಿಲ್ ವಾಘ್ಲೆ ಮೇಲೆ ಪುಣೆಯ ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ಬಿಜೆಪಿ ಸಲ್ಲಿಸಿದ ದೂರಿನಲ್ಲಿ, ಎರಡು ಸಮುದಾಯಗಳ ನಡುವೆ ಶತ್ರುತ್ವ ಉತ್ತೇಜಿಸುವುದು ಮತ್ತು ನಾಯಕರ ಅವಹೇಳನ ಮಾಡಿರುವುದು ಮೊದಲಾದ ಆರೋಪಗಳನ್ನು ನಿಖಿಲ್ ಮೇಲೆ ಹೊರಿಸಲಾಗಿದೆ.

ಶುಕ್ರವಾರ ಪುಣೆಯಲ್ಲಿ ನಿಖಿಲ್ ಭಾಗವಹಿಸಲಿದ್ದ ಕಾರ್ಯಕ್ರಮಕ್ಕೆ ಅಡಚಣೆ ಮಾಡುವುದಾಗಿ ಬಿಜೆಪಿ ಬೆದರಿಕೆಯನ್ನೂ ಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಿಖಿಲ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಬರೆದಿದ್ದರು. ಈ ಅಭಿಪ್ರಾಯವನ್ನು ವಿರೋಧಿಸಿ ಹಿರಿಯ ಬಿಜೆಪಿ ನಾಯಕ ಸುನೀಲ್ ಡಿಯೋಡಾರ್ ಅವರು ಶುಕ್ರವಾರ ವಿಶ್ರಾಮ್‌ಬಾಗ್ ಪೊಲೀಸ್ ಠಾಣೆಯಲ್ಲಿ ನಿಖಿಲ್ ವಿರುದ್ಧ ದೂರು ದಾಖಲಿಸಿದ್ದಾರೆ.

ವಾಘ್ಲೆ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153 ಎ (ವಿಭಿನ್ನ ಗುಂಪುಗಳ ನಡುವೆ ಶತ್ರುತ್ವ ಪ್ರಚೋದನೆ), ಸೆಕ್ಷನ್ 500 (ಅವಹೇಳನ ಮಾಡಿರುವುದು) ಹಾಗೂ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ದೂರು ದಾಖಲಾಗಿದೆ.

‘ನಿರ್ಭಯ್ ಬನೋ’ ಎನ್ನುವ ಕಾರ್ಯಕ್ರಮದಲ್ಲಿ ನಿಖಿಲ್ ಭಾಗವಹಿಸುವ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಬೇಕು ಎಂದು ಬಿಜೆಪಿ ಪುಣೆ ಪೊಲೀಸರಿಗೆ ಮನವಿ ಮಾಡಿದೆ. ಆದರೆ ನಿಖಿಲ್ ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. 

ನಿಖಿಲ್ ವಾಘ್ಲೆ ತಮ್ಮ ಬರಹವನ್ನು ಸಾಮಾಜಿಕ ಜಾಲತಾಣದಿಂದ ಅಳಿಸಲು ನಿರಾಕರಿಸಿದ್ದಾರೆ. “ಇದು ಘೋಷಿಸದ ತುರ್ತುಪರಿಸ್ಥಿತಿ” ಎಂದು ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...