ಇಂಡಿಗೋ ಘಟನೆ | ವಿಮಾನ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

Date:

ದೆಹಲಿಯಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ ವಿಮಾನವು 10 ಗಂಟೆ ವಿಳಂಬಗೊಂಡ ವಿಚಾರಕ್ಕೆ ಪೈಲಟ್ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೈದ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕೇಂದ್ರದ ನಾಗರಿಕ ಮತ್ತು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ವಿಮಾನ ಪ್ರಯಾಣಿಕರಿಂದ ಇಂತಹ ಅಶಿಸ್ತಿನ ವರ್ತನೆಗಳನ್ನು ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಅವರು, “ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸಲಾಗುವುದಿಲ್ಲ ಮತ್ತು ಅಂತಹ ಪ್ರತಿಯೊಂದು ಘಟನೆಯನ್ನು ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳ ಪೈಕಿಯೇ ಕ್ರಮ ಕೈಗೊಳ್ಳಬಹುದಾದ ಹೆಚ್ಚು ಕ್ರಮಗಳನ್ನೇ ಬಳಸಲಾಗುವುದು” ಎಂದು ಹೇಳಿದ್ದಾರೆ.

“ದಿಲ್ಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ವಿಮಾನ ವಿಳಂಬವಾಗಿದ್ದಕ್ಕೆ ದಟ್ಟವಾದ ಮಂಜು ಕಾರಣ. 5 ಗಂಟೆಯಿಂದ ನಾಲ್ಕು ಗಂಟೆಗಳವರೆಗೆ ಸೀಮಿತ ಗೋಚರತೆ ಇತ್ತು. ಹಾಗಾಗಿ, ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ವಿಮಾನಗಳನ್ನು ವಿಳಂಬ ಮಾಡಬೇಕಾಗಿ ಬಂತು. ಇಂತಹ ಬೆಳವಣಿಗೆಗಳ ಸಂದರ್ಭದಲ್ಲಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೂಡ ಸಹಕಾರ ನೀಡಬೇಕಾಗುತ್ತದೆ” ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಇನ್ನು ಮುಂದೆ ನಡೆಯಬಾರದು. ಈ ರೀತಿಯ ಅಶಿಸ್ತಿನ ವರ್ತನೆಯ ಘಟನೆಗಳು ಸ್ವೀಕಾರಾರ್ಹವಲ್ಲ. ಮಂಜು ಸಂಬಂಧಿತ ಪರಿಣಾಮವನ್ನು ಕಡಿಮೆ ಮಾಡಲು ವಾಯುಯಾನದ ಎಲ್ಲ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಜನರ ಸುರಕ್ಷತೆಗೂ ಆದ್ಯತೆ ನೀಡಬೇಕಾದುದರಿಂದ ಇಂತಹ ವಿಳಂಬಗಳು ಆಗುತ್ತವೆ. ಹಾಗಾಗಿ, ಎಲ್ಲಾ ಪ್ರಯಾಣಿಕರು ಇಂತಹ ಕಷ್ಟದ ಅವಧಿಯಲ್ಲಿ ತಾಳ್ಮೆ ವಹಿಸಿಕೊಳ್ಳಬೇಕೆಂಬುದು ನನ್ನ ವಿನಂತಿ” ಎಂದು ಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಭಾರೀ ಮಂಜು ಮತ್ತು ಪ್ರತಿಕೂಲ ಹವಾಮಾನದಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ವಿಮಾನಗಳು ವಿಳಂಬವಾಗಿದೆ. ಭಾನುವಾರದಂದು 150 ಕ್ಕೂ ಹೆಚ್ಚು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿತ್ತು. ಇದರಿಂದ ಸೇವೆಯಲ್ಲಿ ವಿಳಂಬವಾಗಿತ್ತು.

ಇದನ್ನು ಓದಿದ್ದೀರಾ? 10 ಗಂಟೆ ಇಂಡಿಗೋ ವಿಮಾನ ವಿಳಂಬ: ಪೈಲಟ್ ಮೇಲೆ ಹಲ್ಲೆಗೈದ ಪ್ರಯಾಣಿಕ; ವಿಡಿಯೋ ವೈರಲ್

ಈ ನಡುವೆ ನಿನ್ನೆ(ಜ.14) 10 ಗಂಟೆಗಳ ಕಾಲ ಇಂಡಿಗೋ ವಿಮಾನ ಪ್ರಯಾಣ ವಿಳಂಬಗೊಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಪ್ರಯಾಣಿಕನೋರ್ವ ಪೈಲಟ್ ಮೇಲೆಯೇ ಹಲ್ಲೆಗೈದ ಘಟನೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿತ್ತು.

ಘಟನೆಯ ದೃಶ್ಯವನ್ನು ಪ್ರಯಾಣಿಕರೋರ್ವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿತ್ತು. ಕೋ- ಪೈಲಟ್ ಅನೂಪ್ ಕುಮಾರ್ ಎಂಬುವವರ ಮೇಲೆ ಕುಪಿತಗೊಂಡ ಸಾಹಿಲ್ ಕಟಾರಿಯಾ ಎಂಬ ಪ್ರಯಾಣಿಕ ಹಲ್ಲೆಗೈದಿದ್ದನು. ಆತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ನ್ಯಾಯಾಲಯವು ಆತನಿಗೆ ಜಾಮೀನು ನೀಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...