ಕಚ್ಚತೀವು ವಿವಾದ | ಮೋದಿ ಆರೋಪಕ್ಕೆ ಶ್ರೀಲಂಕಾ ಮತ್ತು ಕಾಂಗ್ರೆಸ್‌ ಹೇಳಿದ್ದಿಷ್ಟು!

Date:

ಲೋಕಸಭಾ ಚುನಾವಣೆಯ ಸಮಯದಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ, ಶ್ರೀಲಂಕಾದ ಭಾಗವಾಗಿರುವ ಕಚ್ಚತೀವು ದ್ವೀಪದ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್‌ಅನ್ನು ವಿರುದ್ಧ ವಾಗ್ದಾಳಿ ನಡೆಸುತ್ತಿದೆ. 1974ರಲ್ಲಿ ಶ್ರೀಲಂಕಾಗೆ ಸಣ್ಣ ದ್ವೀಪವಾದ ‘ಕಚ್ಚತೀವು’ಅನ್ನು ಬಿಟ್ಟುಕೊಟ್ಟಿದೆ ಎಂದು ಕಾಂಗ್ರೆಸ್‌ಅನ್ನು ಬಿಜೆಪಿ ದೂಷಿಸಿದೆ. ಈ ಬಗ್ಗೆ ಶ್ರೀಲಂಕಾ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿದ್ದು, ಕಚ್ಚತೀವು ಬಗ್ಗೆ ಭಾರತ ಯಾವತ್ತಿಗೂ ಪ್ರಸ್ತಾಪಿಸಿಲ್ಲ ಎಂದು ಶ್ರೀಲಂಕಾ ಸರ್ಕಾರದ ವಕ್ತಾರರು ಮಂಗಳವರ ಹೇಳಿದ್ದಾರೆ.

ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಕಾಂಗ್ರೆಸ್ ಬಿಟ್ಟುಕೊಟ್ಟಿರುವುದಾಗಿ ಹೊಸ ಸಂಗತಿಗಳು ಬಹಿರಂಗಪಡಿಸುತ್ತವೆ ಎಂದು ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ, ಕಚ್ಚತೀವು ದ್ವೀಪದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ನಿಂದ ಪ್ರಧಾನಿಯಾಗಿದ್ದವರು ಕಚ್ಚತೀವು ದ್ವೀಪದ ಬಗ್ಗೆ ಅಸಡ್ಡೆ ಪ್ರದರ್ಶಿಸಿದರು. ಕಾನೂನು ದೃಷ್ಟಿಕೋನಗಳ ಹೊರತಾಗಿಯೂ ಭಾರತೀಯ ಮೀನುಗಾರರ ಹಕ್ಕುಗಳ ಬಗ್ಗೆ ಅವರು ಕಾಳಜಿ ವಹಿಸಲಿಲ್ಲ” ಎಂದು ಜೈಶಂಕರ್ ಸೋಮವಾರ ಆರೋಪಿಸಿದ್ದಾರೆ.

ಮೊದಲು 1974ರಲ್ಲಿ ಮತ್ತು ನಂತರ 1976ರಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಒಪ್ಪಂದಗಳ ವಿವರಗಳನ್ನು ಉಲ್ಲೇಖಿಸಿರುವ ಜೈಶಂಕರ್, “ಭಾರತದ ಭೂಪ್ರದೇಶದ ಬಗ್ಗೆ ಕೇಂದ್ರ ಸರ್ಕಾರ ಮತ್ತು ಅಂದಿನ ಪ್ರಧಾನ ಮಂತ್ರಿಗಳು ಅಸಡ್ಡೆ ತೋರಿಸಿದ್ದು, ಪುನರಾವರ್ತಿತ ವಿಷಯವಾಗಿದೆ” ಎಂದಿದ್ದಾರೆ.

ಏತನ್ಮಧ್ಯೆ, “ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಮತ್ತು ಲಕ್ಷಾಂತರ ತಮಿಳರ ಜೀವ ಉಳಿಸಲು ಕಚ್ಚತೀವು ಶ್ರೀಲಂಕಾಕ್ಕೆ ಬಿಟ್ಟುಕೊಡಲಾಗಿದೆ. 1974ರಲ್ಲಿ ಇತ್ಯರ್ಥವಾದ ಸಮಸ್ಯೆಯನ್ನು ಪ್ರಧಾನಿ ಏಕೆ ಈಗ ಕೆದಕುತ್ತಿದ್ದಾರೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“1974ರಲ್ಲಿ, ಇಂದಿರಾ ಗಾಂಧಿ ಸರ್ಕಾರ, ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಮತ್ತು ಅಲ್ಲಿ ಲಕ್ಷಾಂತರ ತಮಿಳರಿಗೆ ಸಹಾಯ ಮಾಡಲು, ದ್ವೀಪ ರಾಷ್ಟ್ರದ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಮಾತುಕತೆಗಳ ನಂತರ, ಸುಮಾರು 1.9 ಚದರ ಕಿ.ಮೀ ವಿಸ್ತೀರ್ಣದ ಅತ್ಯಂತ ಚಿಕ್ಕ ದ್ವೀಪವಾದ ಕಚ್ಚತೀವುಅನ್ನು ಶ್ರೀಲಂಕಾಗೆ ಸೇರಿದ್ದು ಎಂದು ಭಾರತ ಒಪ್ಪಿಕೊಂಡಿತು. ಇದಕ್ಕೆ ಪ್ರತಿಯಾಗಿ ಆರು ಲಕ್ಷ ತಮಿಳರು ಭಾರತಕ್ಕೆ ಬರಲು ಶ್ರೀಲಂಕಾ ಅನುವು ಮಾಡಿಕೊಟ್ಟಿತು” ಎಂದು ಚಿದಂಬರಂ ಹೇಳಿದ್ದಾರೆ.

“ತಮಿಳರು ಭಾರತಕ್ಕೆ ಬಂದಿದ್ದಾರೆ. ಅವರ ಕುಟುಂಬಗಳು ಇಲ್ಲವೆ. ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿದೆ. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಇಲ್ಲಿದ್ದಾರೆ. ಈ ಸಮಸ್ಯೆಯನ್ನು 50 ವರ್ಷಗಳ ಹಿಂದೆ ಪರಿಹರಿಸಲಾಗಿದೆ” ಎಂದು ಚಿದಂಬರಂ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...