ಕಲಬುರಗಿ | ವಿವಾದಕ್ಕೆಡೆ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್ ನಡೆ; ಹಣೆಗೆ ಕುಂಕುಮ ಹಚ್ಚಲು ನಿರಾಕರಣೆ!

Date:

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಓಲೈಕೆಯಲ್ಲಿ ಮುಳುಗಿದೆ ಎಂದು ಸದಾ ಆರೋಪಿಸುತ್ತಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಹಣೆಗೆ ಕುಂಕುಮ ಹಚ್ಚಲು ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್‌ನಲ್ಲಿರುವ ಬಿಜೆಪಿ ಕಚೇರಿಗೆ ಇಂದು(ಮಾ.24) ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ.

ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ್ ಅವರ ಹಣೆಗೆ ಕುಂಕುಮ ಇಡಲು ಮುಂದಾದರು. ಆದರೆ ಅಶೋಕ್ ಅವರು ಕುಂಕುಮ ಹಚ್ಚದಂತೆ, ‘ಬೇಡ’ ಎನ್ನುವ ಮೂಲಕ ತಡೆದಿದ್ದಾರೆ. ಈ ವೇಳೆ ವಿಶ್ವನಾಥ್ ಅವರು ಒಮ್ಮೆಲೆ ಅವಾಕ್ಕಾದರೂ, ತಂದಿದ್ದಂತಹ ಶಾಲು ಹಾಕಿ ಸನ್ಮಾನಿಸಿದರು. ಇದರ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಬಿಜೆಪಿ ಮುಖಂಡನ ನಡೆಗೆ ವಿರೋಧ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಸದನದಲ್ಲಿ ಚರ್ಚೆಯ ವೇಳೆ ತಮ್ಮನ್ನು ತಾವು ಹೊಗಳುವ ಭರದಲ್ಲಿ, “ನಾನು ಗೃಹ ಸಚಿವನಾಗಿದ್ದಾಗ ಮಂಗಳೂರು ಪಬ್‌ನಲ್ಲಿ ಗಲಾಟೆ ಆದಾಗ ಬಿಜೆಪಿಯನ್ನು ಬೆಂಬಲಿಸುವ ಬಜರಂಗದಳದ ಕಾರ್ಯಕರ್ತರ ವಿರುದ್ಧವೇ ಗೂಂಡಾ ಕಾಯ್ದೆ ಹಾಕಿದ್ದೆ” ಎಂದು ಹೇಳಿದ್ದರು. ಆ ಮೂಲಕ ಸಂಘಪರಿವಾರದ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತಿದ್ದ ಆರ್ ಅಶೋಕ್, ಬಜರಂಗದಳದ ಕಾರ್ಯಕರ್ತರ ಕ್ಷಮೆ ಕೇಳಿದ್ದರು. ಇದೀಗ ಕುಂಕುಮ ಹಣೆಗೆ ಇಡಲು ನಿರಾಕರಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಹಿಂದೂ ವಿರೋಧಿ, ಕೇಸರಿ ಕಂಡರೆ ಆಗಲ್ಲ, ಕೇಸರಿ ಶಲ್ಯ ಧರಿಸಲ್ಲ, ಕುಂಕುಮ ಹಾಕಲ್ಲ ಹಾಗೂ ಡಿ ಕೆ ಶಿವಕುಮಾರ್ ಅವರು ಮುಸ್ಲಿಮರನ್ನು ನನ್ನ ಬ್ರದರ್ಸ್‌ ಎಂದು ಕರೆಯುತ್ತಾರೆ ಎಂದೆಲ್ಲಾ ಸದಾ ಟೀಕಿಸುವ ರಾಜ್ಯದ ಬಿಜೆಪಿ ನಾಯಕರು, ತಮ್ಮದೇ ನಾಯಕನ ಈ ನಡೆಗೆ ಏನು ಹೇಳುತ್ತಾರೆ ಎಂದು ಕಾದುನೋಡಬೇಕಿದೆ. ಈ ನಡುವೆ ಕಾಂಗ್ರೆಸ್ ಇದನ್ನೇ ಅಸ್ತ್ರ ಮಾಡಿಕೊಳ್ಳುವ ಸಾಧ್ಯತೆ ಇದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...