ರಾಹುಲ್‌ ಬಗ್ಗೆ ಅಮಿತ್ ಶಾ ಸುಳ್ಳು ಆರೋಪ: ಕಾಂಗ್ರೆಸ್ ಸಹಾಯ ಸ್ಮರಿಸಿದ ರೈತ ಮಹಿಳೆ ಕಲಾವತಿ

Date:

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಯಾವುದೇ ಸಹಾಯ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ “ಸಂಪೂರ್ಣ ಸುಳ್ಳು” ಎಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಬಡ ರೈತ ಮಹಿಳೆ ಕಲಾವತಿ ಬಂಡೂರ್ಕರ್ ಅವರು ಕಾಂಗ್ರೆಸ್ ಸಹಾಯ ಸ್ಮರಿಸಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, 2014ರ ನಂತರ ನನಗೆ ಯಾವುದೇ ಸಹಾಯ ದೊರಕಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ದ್ವೇಷವಿಲ್ಲ. ನನ್ನ ಜೀವನ ರಾಹುಲ್‌ ಗಾಂಧಿಯವರಿಂದ ಬದಲಾದದ್ದು ನಿಜ ಎಂದು ರೈತ ಮಹಿಳೆ ಕಲಾವತಿ ಸ್ಪಷ್ಟನೆ ನೀಡಿದ್ದಾರೆ.

“ನನ್ನ ಪತಿ 2005ರಲ್ಲಿ ಕೃಷಿ ಸಾಲದ ಬಿಕ್ಕಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. 2008ರವರೆಗೆ, ರಾಹುಲ್ ನಮ್ಮನ್ನು ಭೇಟಿ ಮಾಡುವವರೆಗೂ ಜೀವನ ನಿರ್ವಹಿಸುವುದು ಕಷ್ಟಕರವಾಗಿತ್ತು. ಅವರು ಭೇಟಿ ನೀಡಿದ ನಂತರ ನಮಗೆ ಎಲ್ಲ ರೀತಿಯ ಸಹಾಯ ದೊರಕಿತು” ಎಂದು ಕಲಾವತಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಕೋಟಾದಲ್ಲಿ 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ; ವಾರದಲ್ಲಿ 3ನೇ ಪ್ರಕರಣ

“ಮೊದಲು ನಾನು 3 ಲಕ್ಷ ರೂ. ಪಡೆದುಕೊಂಡೆ, ಅದರೊಂದಿಗೆ ನಾನು ನನ್ನ ಮನೆಯನ್ನು ದುರಸ್ತಿ ಮಾಡಿಸಿದೆ. ಹಾಗೆಯೇ ನಮ್ಮ ಜೀವನ ಸುಧಾರಿಸಿತು. ಇದರ ನಂತರ ಸ್ವಯಂಸೇವಾ ಸಂಘ ಸುಲಭ್ ಇಂಟರ್‌ನ್ಯಾಶನಲ್‌ ನೀಡಿದ 30 ಲಕ್ಷ. ರೂ. ಹಣವನ್ನು ಸ್ಥಿರ ಠೇವಣಿಯಾಗಿ ಬ್ಯಾಂಕಿನಲ್ಲಿ ಇರಿಸಿದ್ದೇನೆ. ಇದರಿಂದ ನನಗೆ ಸುಮಾರು ರೂ 16,000 ಬಡ್ಡಿ ಸಿಗುತ್ತಿದೆ” ಎಂದು ಕಲಾವತಿ ಹೇಳಿದ್ದಾರೆ.

2008ರಲ್ಲಿ ಸಂಸತ್ತಿನಲ್ಲಿ ನಡೆದ ಪರಮಾಣು ಒಪ್ಪಂದದ ಬಗ್ಗೆ ನಡೆದ ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಾತನಾಡಿದ್ದ ರಾಹುಲ್‌ ಗಾಂಧಿ ಕಲಾವತಿ ವಿಷಯವನ್ನು ಪ್ರಸ್ತಾಪಿಸಿದ್ದರು.

ಕಳೆದ ವರ್ಷ ಭಾರತ್ ಜೋಡೋ ಯಾತ್ರೆಯ ವೇಳೆ ಕಲಾವತಿ ಅವರು ರಾಹುಲ್ ಅವರನ್ನು ಸಮೀಪದ ವಾಸೀಮ್‌ನಲ್ಲಿ ಭೇಟಿಯಾಗಿದ್ದರು.

ಸುಳ್ಳು ಹೇಳಿದ ಅಮಿತ್‌ ಶಾ; ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷವಾದ ಕಾಂಗ್ರೆಸ್ ಗುರುವಾರ ಹಕ್ಕುಚ್ಯುತಿ ನೋಟಿಸ್ ನೀಡಿದೆ.

ಈ ನೋಟಿಸ್ ಅನ್ನು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ಕಾಂಗ್ರೆಸ್ ಸಚೇತಕ ಮಣಿಕಂ ಟ್ಯಾಗೋರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಸಲ್ಲಿಸಿದ್ದಾರೆ.

“ನಿನ್ನೆ (ಆಗಸ್ಟ್ 9) ಕಲಾವತಿ ಕತೆಯನ್ನು ತಪ್ಪಾಗಿ ಹೇಳಿ, ಲೋಕಸಭೆಯ ದಾರಿ ತಪ್ಪಿಸಿರುವುದಕ್ಕೆ ನಾನು ಅಮಿತ್ ಶಾ ವಿರುದ್ಧ ಗೌರವಾನ್ವಿತ ಲೋಕಸಭಾಧ್ಯಕ್ಷರಿಗೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದೇನೆ” ಎಂದು ಟ್ಯಾಗೋರ್ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಅವರು ನೋಟಿಸ್ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಆ ರೈತ ಮಹಿಳೆಗೆ ಮನೆ ದೊರೆಯುವಂತೆ ಹಾಗೂ ಹಲವಾರು ಸರ್ಕಾರಿ ಯೋಜನೆಗಳು ದೊರೆಯುವಂತೆ ಖಾತ್ರಿಗೊಳಿಸಿದ್ದು ಮೋದಿ ಸರ್ಕಾರ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಆದರೆ, ಮೋದಿ ಸರ್ಕಾರ ಕಲಾವತಿ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಆ ರೈತ ಮಹಿಳೆಯ ಹೇಳಿಕೆಯ ಸತ್ಯಾಂಶದ ವಿಡಿಯೋವನ್ನು ಟ್ವಿಟರ್‌ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಟ್ಯಾಗೋರ್ ಅವರು ತಮ್ಮ ನೋಟಿಸ್‌ನಲ್ಲಿ, ಅಮಿತ್ ಶಾ ಸದನವನ್ನು ಉದ್ದೇಶಿಸಿ ಮಾತನಾಡುವಾಗ ಕರಾರುವಾಕ್ ಹಾಗೂ ಸತ್ಯಾಂಶವುಳ್ಳ ಮಾಹಿತಿಯನ್ನು ಎತ್ತಿ ಹಿಡಿಯದೆ ಸಂಸದೀಯ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...