ಕಲ್ಯಾಣ ಕರ್ನಾಟಕ | ಖರ್ಗೆ ತವರಲ್ಲಿ ಕಾಂಗ್ರೆಸ್ ಜಯಭೇರಿ

Date:

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನ ಗೆದ್ದಿದ್ದು, ಕಾಂಗ್ರೆಸ್‌ 9 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕಾಂಗ್ರೆಸ್‌ ಗೆದ್ದ 9 ಸ್ಥಾನಗಳಲ್ಲಿ ಖರ್ಗೆ ಅವರು ತವರು ಪ್ರದೇಶ ಕಲ್ಯಾಣ ಕರ್ನಾಟಕದ ಐದು ಸ್ಥಾನಗಳು ಒಳಗೊಂಡಿವೆ. ಕಳೆದ ಬಾರಿ ಬಿಜೆಪಿ ತೆಕ್ಕೆಗೆ ಸೇರಿದ್ದ ಐದೂ ಕ್ಷೇತ್ರಗಳು ಈಗ ಮರಳಿ ಕಾಂಗ್ರೆಸ್‌ ವಶವಾಗಿವೆ.

2019ರಲ್ಲಿ 1 ಸ್ಥಾನದಲ್ಲಿ ಗೆಲುವು ಕಂಡಿದ್ದ ಕಾಂಗ್ರೆಸ್, ಈ ಬಾರಿ 9 ಸ್ಥಾನಗಳನ್ನು ಗೆದ್ದು ತನ್ನ ಸಂಖ್ಯೆಯನ್ನು ಹಿಗ್ಗಿಸಿಕೊಂಡಿದೆ. ಕಲ್ಯಾಣ ಕರ್ನಾಟಕದ ಒಟ್ಟೂ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಗೆಲುವು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆಯನ್ನು ಹೆಚ್ಚಿಸಿದೆ.

ಬೀದರ್, ಬಳ್ಳಾರಿ, ಕೊಪ್ಪಳ, ಕಲಬುರಗಿ, ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಿಜೆಪಿಯ ಘಟಾನುಘಟಿ ನಾಯಕರೇ ಕಲ್ಯಾಣ ಕರ್ನಾಟಕದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಅನುಭವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ಚುನಾವಣೆಗಳಿಂದ ಬಿಜೆಪಿ ವಶದಲ್ಲಿರುವ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸದಲ್ಲಿದ್ದರು. ಆದರೆ, ಸಚಿವ ಈಶ್ವರ್ ಖಂಡ್ರೆ ಅವರ ಮಗ 26 ವರ್ಷದ ಸಾಗರ್ ಖಂಡ್ರೆ ಗೆಲುವಿನ ನಗೆ ಬೀರಿದ್ದಾರೆ.

18 ಅಭ್ಯರ್ಥಿಗಳು ಬೀದರ್ ಲೋಕಸಭೆ ಕ್ಷೇತ್ರದ ಅಖಾಡದಲ್ಲಿದ್ದರು. ಇದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇತ್ತು. ಆದರೆ, ಸಾಗರ್ ಖಂಡ್ರೆ ಅವರು 1,28,875 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ. ನಾಗೇಂದ್ರ ಎದುರು ಸೋಲು ಕಂಡಿದ್ದ ಬಿಜೆಪಿಯ ಶ್ರೀರಾಮುಲು, ಈಗ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿಯೂ ಸೋಲು ಅನುಭವಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಇ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಅವರು 7,30,845 ಮತಗಳನ್ನು ಪಡೆದು, ಬಿಜೆಪಿಯ ಬಿ ಶ್ರೀರಾಮುಲು ಅವರ ಎದುರು 98,992 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಶ್ರೀರಾಮುಲು ಅವರು 6,31,853 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.

ಕೊಪ್ಪಳ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಈ ಕಾರಣಕ್ಕೆ ಕಾಂಗ್ರೆಸ್ ಸೇರಿದ ಸಂಗಣ್ಣ ಕರಡಿ, ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರವಾಗಿ ಪ್ರಚಾರ ಕಣದಲ್ಲಿ ಅಬ್ಬರಿಸಿದರು. ಹೀಗಾಗಿ, ಬಿಜೆಪಿಯ ಭದ್ರ ಕೋಟೆಯಾಗಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರ, ಇದೀಗ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಸೋಲು ಕಂಡಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರ ತೀವ್ರ ಪೈಪೋಟಿಗೆ ಸಾಕ್ಷಿಯಾಗಿತ್ತು. ಈ ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ ಸ್ಪರ್ಧಿಸಿದ್ದರು. ಕಾಂಗ್ರೆಸ್​ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಶ್ವಾಸಾರ್ಹತೆಯನ್ನು ಕಳೆದುಕೊಂಡ ಮೋದಿ ರಾಜೀನಾಮೆ ನೀಡಬೇಕು: ಮಮತಾ ಬ್ಯಾನರ್ಜಿ

ರಾಯಚೂರು ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಬಿಜೆಪಿ ಅಭ್ಯರ್ಥಿ ರಾಜ ಅಮರೇಶ್ವರ ನಾಯ್ಕ ಸೋಲು ಕಂಡಿದ್ದಾರೆ. ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಜಿ ಕುಮಾರ ನಾಯ್ಕ ಗೆಲುವು ಸಾಧಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಗೆಲುವು ಒಂದು ರೀತಿಯಲ್ಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಆರ್ಭಟಕ್ಕೆ, ಹಾರಾಟಕ್ಕೆ ಖರ್ಗೆಯವರು ಮೌನವಾಗಿ ನೀಡಿದ ಉತ್ತರದಂತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...