ಕಮಲ್ ಹಾಸನ್ ನೀಡಿದ ಕನ್ನಡ ಭಾಷೆ ಹೇಳಿಕೆ ಸಂಪೂರ್ಣ ಸುಳ್ಳು: ಕರವೇ ನಾರಾಯಣಗೌಡ

Date:

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ಕ”ಮಲ್ ಹಾಸನ್ ಅವರ ಹೇಳಿಕೆ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿವೆ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕನ್ನಡ ಭಾಷೆಗೆ ಸುಮಾರು 4600–5000 ವರ್ಷಗಳ ಇತಿಹಾಸವಿದೆ. ಭಾಷಾಶಾಸ್ತ್ರೀಯ ಅಧ್ಯಯನಗಳ ಪ್ರಕಾರ, ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ (ಪ್ರೊಟೊ-ದ್ರಾವಿಡಿಯನ್) ಸುಮಾರು 2500–3000 ಕ್ರಿ.ಪೂ. ಆಸುಪಾಸಿನಲ್ಲಿ ಕವಲೊಡೆದಿವೆ. ಅಶೋಕನ ಕಾಲದ ಪ್ರಾಕೃತ ಶಾಸನಗಳಲ್ಲಿ (ಕ್ರಿ.ಪೂ. 3ನೇ ಶತಮಾನ) ಕರ್ನಾಟಕದಲ್ಲಿ ಕಂಡುಬಂದ ಕೆಲವು ಶಾಸನಗಳು ಕನ್ನಡದ ಆದಿಪದಗಳ ಬಳಕೆಯನ್ನು ಸೂಚಿಸುತ್ತವೆ. ಕನ್ನಡದ ಲಿಖಿತ ರೂಪಕ್ಕೆ 2000 ವರ್ಷಗಳ ಇತಿಹಾಸವಿದ್ದು, ಇದಕ್ಕೂ ಮುಂಚಿನ 2000 ವರ್ಷಗಳ ಭಾಷಿಕ ಇತಿಹಾಸವನ್ನು ಒಳಗೊಂಡಂತೆ, ಕನ್ನಡ ನುಡಿಯ ಒಟ್ಟಾರೆ ಇತಿಹಾಸ 4600 ವರ್ಷಗಳಿಗೂ ಹೆಚ್ಚಿನದಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮಿಳು ಸಾಹಿತ್ಯಕ್ಕೆ ಪ್ರಾಚೀನತೆಯಿದ್ದರೂ, ತಮಿಳು ಭಾಷೆಯು ಕನ್ನಡಕ್ಕಿಂತ ಹಳೆಯದು ಎನ್ನಲು ಯಾವುದೇ ಐತಿಹಾಸಿಕ ಅಥವಾ ಭಾಷಾಶಾಸ್ತ್ರೀಯ ಆಧಾರಗಳಿಲ್ಲ. ಇತ್ತೀಚಿನ ಭಾಷಾಶಾಸ್ತ್ರೀಯ ಸಂಶೋಧನೆಗಳು ತಮಿಳು, ಕನ್ನಡ, ತುಳು, ತೆಲುಗು ಮೊದಲಾದ ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ ಏಕಕಾಲಕ್ಕೆ ವಿಕಾಸಗೊಂಡಿವೆ ಎಂದು ಸ್ಪಷ್ಟಪಡಿಸಿವೆ. ಹಲ್ಮಿಡಿ ಶಾಸನ (ಕ್ರಿ.ಶ. 450) ಕನ್ನಡದ ಅತ್ಯಂತ ಪ್ರಾಚೀನ ಲಿಖಿತ ದಾಖಲೆಯಾಗಿದ್ದು, ಕನ್ನಡದ ಸ್ವತಂತ್ರ ಅಸ್ತಿತ್ವವನ್ನು ದೃಢಪಡಿಸುತ್ತದೆ. ಇದಕ್ಕಿಂತಲೂ ಹಳೆಯ ಬ್ರಾಹ್ಮೀ ಲಿಪಿಯ ಶಾಸನಗಳು ಕರ್ನಾಟಕದ ಬನವಾಸಿ, ಚಂದ್ರವಳ್ಳಿಯಂತಹ ಕಡೆಗಳಲ್ಲಿ ಕಂಡುಬಂದಿವೆ, ಇದು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಗಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?

“ಕನ್ನಡ ಸಾಹಿತ್ಯವು ತನ್ನದೇ ಆದ ವಿಶಿಷ್ಟ ವ್ಯಾಕರಣ, ಶಬ್ದಕೋಶ ಮತ್ತು ಶೈಲಿಯನ್ನು ಹೊಂದಿದ್ದು, ತಮಿಳಿನಿಂದ ಸಂಪೂರ್ಣ ಭಿನ್ನವಾಗಿದೆ. ಪಂಪ, ರನ್ನ, ಬಸವಣ್ಣ, ಕುವೆಂಪು ಮುಂತಾದ ಕವಿಗಳಿಂದ ಮತ್ತು ಎಂಟು ಜ್ಞಾನಪೀಠ ಪ್ರಶಸ್ತಿಗಳಿಂದ ಸಮೃದ್ಧವಾದ ಕನ್ನಡ ಸಾಹಿತ್ಯವು ತನ್ನ ಸ್ವತಂತ್ರ ಗುರುತನ್ನು ಶತಮಾನಗಳಿಂದ ಉಳಿಸಿಕೊಂಡಿದೆ. ಕಮಲ್ ಹಾಸನ್ ಅವರ ಈ ಹೇಳಿಕೆಯು ದಕ್ಷಿಣ ಭಾರತದ ಜನತೆಯು ಹಿಂದಿ ಹೇರಿಕೆ ಮತ್ತು ಸಾಮ್ರಾಜ್ಯಶಾಹಿಯ ವಿರುದ್ಧ ನಡೆಸುತ್ತಿರುವ ಒಗ್ಗಟ್ಟಿನ ಹೋರಾಟಕ್ಕೆ ಗಂಭೀರ ಹಾನಿಯುಂಟುಮಾಡುತ್ತದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮೊದಲಾದ ದ್ರಾವಿಡ ಭಾಷೆಗಳು ಒಂದಾಗಿ ನಿಲ್ಲಬೇಕಾದ ಈ ಸಂದರ್ಭದಲ್ಲಿ, ಈ ಜವಾಬ್ದಾರಿಯಿಲ್ಲದ ಹೇಳಿಕೆಯು ಭಾಷಿಕ ಸಮುದಾಯಗಳ ನಡುವೆ ಒಡಕು ಮತ್ತು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಕೀಳುಮಟ್ಟದ ರಾಜಕೀಯ ತಂತ್ರವಾಗಿದೆ. ಇದು ಕೇವಲ ಕನ್ನಡಿಗರಿಗೆ ಅವಮಾನವಲ್ಲ, ದಕ್ಷಿಣ ಭಾರತದ ಎಲ್ಲ ಭಾಷೆಗಳ ಗೌರವಕ್ಕೆ ಧಕ್ಕೆ ತರುವ ಕೃತ್ಯವಾಗಿದೆ” ಎಂದು ದೂರಿದ್ದಾರೆ.

“ಕಮಲ್ ಹಾಸನ್ ಅವರು ಒಬ್ಬ ಅತ್ಯುತ್ತಮ ಕಲಾವಿದರಾಗಿದ್ದು, ಕನ್ನಡ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಇಂತಹ ಹೇಳಿಕೆಗಳಿಂದ ಕನ್ನಡಿಗರು ಮತ್ತು ತಮಿಳರ ನಡುವೆ ದ್ವೇಷವನ್ನು ಹುಟ್ಟುಹಾಕುವುದು ಸರಿಯಲ್ಲ. ಅವರು ತಕ್ಷಣವೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡು, ಕನ್ನಡಿಗರ ಭಾವನೆಗಳಿಗೆ ಗೌರವ ತೋರಬೇಕೆಂದು ಒತ್ತಾಯಿಸುತ್ತೇವೆ. ಕನ್ನಡಿಗರೆಲ್ಲರೂ ಈ ರೀತಿಯ ದುರುದ್ದೇಶಪೂರಿತ ಹೇಳಿಕೆಗಳ ವಿರುದ್ಧ ಒಗ್ಗಟ್ಟಾಗಿ ಧ್ವನಿಯೆತ್ತಬೇಕು” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...