ಬೆಂಗಳೂರು | ಅರೇಬಿಕ್ ಮದ್ರಸಾಗಳ ಶಿಕ್ಷಕರಿಗೆ ಕನ್ನಡ ಬೋಧನೆ: ಅಭಿಯಾನಕ್ಕೆ ಚಾಲನೆ

Date:

ರಾಜ್ಯದ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕೂಡ ಕನ್ನಡ ಬೋಧನೆಯನ್ನು ಮಾಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದರು.

ಮಂಗಳವಾರ ನಗರದ ಶೇಷಾದ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಕೆಎಂಡಿಸಿ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ, ‘ಮದ್ರಸಾ ಶಿಕ್ಷಕರಿಗೆ ಕನ್ನಡ ಕಲಿಸುವ ಅಭಿಯಾನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಮದ್ರಸಾಗಳ 200 ಶಿಕ್ಷಕರಿಗೆ ಕರ್ನಾಟಕದ ರಾಜ್ಯ ಭಾಷೆ ಕನ್ನಡವನ್ನು ಮೊದಲ ಹಂತವಾಗಿ ಕಲಿಸಿಕೊಡಲಾಗುವುದು. ಅದರಂತೆ ಒಟ್ಟು 36 ಗಂಟೆಗಳ ಕನ್ನಡ ಕಲಿಕೆಯನ್ನು 3 ತಿಂಗಳೊಳಗೆ ಹೇಳಿಕೊಡಲಾಗುವುದು. ಮುಂದಿನ ಹಂತದಲ್ಲಿ ಪ್ರತಿ ಮದ್ರಸಾಗಳ ಶಿಕ್ಷಕರಿಗೆ ಕನ್ನಡ ಕಲಿಸುವ ಕಾರ್ಯಕ್ರಮ ವಿಸ್ತರಿಸಲಾಗುವುದು. ಆನಂತರ, ಮುಂಬರುವ ದಿನಗಳಲ್ಲಿ ಪ್ರತಿ ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾಗಳಿಗೂ ಕನ್ನಡ ಕಲಿಕಾ ತರಗತಿ ನಡೆಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನದಿಂದ ನಾವು ಇಂದು ಅಸ್ತಿತ್ವದಲ್ಲಿದ್ದೇವೆ. ರಾಜ್ಯದಲ್ಲಿ ಕಲಬುರಗಿ, ಯಾದಗಿರಿ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಬಹುತೇಕರಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ಕರ್ನಾಟಕದಲ್ಲಿ ಆಡು ಭಾಷೆ ಹಾಗೂ ಆಡಳಿತ ಭಾಷೆ ಕನ್ನಡದಲ್ಲಿರುವುದರಿಂದ ಕನ್ನಡ ಕಲಿಯುವುದು ಅತ್ಯವಶ್ಯಕವಾಗಿದೆ ಎಂದು ಅವರು ತಿಳಿಸಿದರು.

ಕನ್ನಡ ಓದು, ಬರಹವನ್ನು ಕಲಿತರೆ ಕನ್ನಡದಲ್ಲಿ ವ್ಯವಹರಿಸಲು ಸುಲಭವಾಗುತ್ತದೆ. ಇದರಿಂದ ಬಹುಸಂಖ್ಯಾತರು ಹಾಗೂ ಅಲ್ಪಸಂಖ್ಯಾತರ ನಡುವಿನ ಭೇದ ಹೋಗಲಾಡಿಸಿ, ಕನ್ನಡ ಭಾಷೆಯನ್ನು ಬಲಪಡಿಸದಂತಾಗುತ್ತದೆ.‌ ನಾನು ಈಗಲೂ ಕೂಡ ಕನ್ನಡ ಕಲಿಕೆ ಮಾಡುತ್ತಿದ್ದು, ಈ ಅಭಿಯಾನದಲ್ಲಿ ವಿದ್ಯಾರ್ಥಿ ಆಗಿಯೂ ಪಾಲ್ಗೊಳ್ಳಲಿದ್ದೇನೆ ಎಂದು ಸಚಿವ ಝಮೀರ್ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಇದೇ ಸಂದರ್ಭದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕರೂ ಆದ ಆಯೋಗದ ಸದಸ್ಯ ಅಬ್ದುಸ್ಸಲಾಮ್ ಪುತ್ತಿಗೆ, ಕಾರ್ಯದರ್ಶಿ ಡಾ.ಮಾಜುದ್ದೀನ್ ಖಾನ್, ಮೌಲಾನಾ ಸೈಯದ್ ಶಬ್ಬೀರ್ ಅಹ್ಮದ್ ನದ್ವಿ, ಮುಫ್ತಿ ಶಂಸುದ್ದೀನ್ ಬಜ್ಲಿ, ನಿವೃತ್ತ ಡಿಸಿಪಿ ಜಿ.ಎ.ಬಾವಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

1001656318
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...