ಕರವೇ ನಾರಾಯಣಗೌಡ ಬಿಡುಗಡೆಗೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹ

Date:

ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದನ್ನು ಕನ್ನಡ ಸಾಹಿತ್ಯ ಪರಿಷತ್‌ ಖಂಡಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, “ವಿನಾಕರಣ ಬಂಧನಕ್ಕೆ ಒಳಪಡಿಸಿರುವುದನ್ನು ಖಂಡಿಸುತ್ತೇನೆ. ಈ ಪ್ರತಿಭಟನೆಯು ವಾಣಿಜ್ಯೋದ್ಯಮ/ಬ್ಯಾಂಕ್/ಅಂಗಡಿಗಳು/ಮಾಲ್ ಗಳು /ಹೋಟೆಲ್ ಮೊದಲಾದ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯೇ ಇರಬೇಕು ಎನ್ನುವ ರಾಜ್ಯ ಸರ್ಕಾರದ ನಿಯಮದ ಜಾರಿಗಾಗಿ ಅವರು ಒತ್ತಾಯಿಸಿದ್ದು ಕಾನೂನು ಸಮ್ಮತವೇ ಆಗಿದೆ” ಎಂದಿದ್ದಾರೆ.

“ಈ ಪ್ರತಿಭಟನೆಯ ಕುರಿತು ಟಿ ಎ ನಾರಾಯಣಗೌಡ ಸಾಕಷ್ಟು ಮುಂಚೆಯೇ ಸಾಮಾಜಿಕ ಜಾಲತಾಣ ಕರಪತ್ರ, ಜಾಹೀರಾತುಗಳ ಮೂಲಕ ಪ್ರಕಟಣೆ ನೀಡಿದ್ದರು. ಹೀಗಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸದೆ ಪ್ರತಿಭಟನೆಯ ಅನಿವಾರ್ಯತೆಗೆ ಸಿಲುಕಿಸಿ ಈಗ ಬಂಧನಕ್ಕೆ ಕಾರಣವಾಗಿರುವುದು ಕನ್ನಡ ನಾಮಫಲಕಗಳನ್ನು ಹಾಕದೆ ಇದ್ದರೂ ನಡೆಯುತ್ತದೆ ಎನ್ನುವ ಪರಭಾಷಿಕರ ಉಡಾಫೆ ಧೋರಣೆಯನ್ನು ಬೆಂಬಲಿಸಿದಂತಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರವು ಮತ್ತು ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನಕಾರರ ವಿಷಯದಲ್ಲಿ ಸಂವೇದನಾಶೀಲವಾಗಿ ವರ್ತಿಸಬಹುದಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಇಲ್ಲವೆ ಕರ್ನಾಟಕ ರಾಜ್ಯ ವಾಣಿಜ್ಯ ಮಹಾಮಂಡಳಿಯ ನೇತೃತ್ವದಲ್ಲಿ ದುಂಡು ಮೇಜಿನ ಸಭೆಯನ್ನು ಮೊದಲೇ ನಡೆಸಿದ್ದರೆ ಕ.ರ.ವೇ ಪ್ರತಿಭಟನೆಯು ನಡೆಯುತ್ತಲೇ ಇರಲಿಲ್ಲ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

“ಕನ್ನಡಿಗರ ಆಕ್ರೋಶವು ಕಟ್ಟೆಯೊಡೆಯುವ ಮುನ್ನ ಸರ್ಕಾರವು ಟಿ.ಎ.ನಾರಾಯಣಗೌಡ ಮತ್ತು ಬಂಧಿತ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಕನ್ನಡ ಸಾಹಿತ್ಯ ಪರಿಷತ್ತು ಸಹ ವಾಣಿಜ್ಯೋದ್ಯಮ ನಾಮಫಲಕಗಳಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ಸಿಗಬೇಕು ಎನ್ನುವ ಅಭಿಯಾನವನ್ನು ಬೆಂಬಲಿಸುವದರ ಜೊತೆಗೆ ಮುಂದಿನ ದಿನಗಳಲ್ಲಿ ಕನ್ನಡ ಬರಹಗಾರರು, ಎಲ್ಲಾ ಕನ್ನಡ ಸಂಘ ಸಂಸ್ಥೆಗಳು, ಹೋರಾಟಗಾರರು, ಚಲನಚಿತ್ರ ಕಲಾವಿದರು ಸಂಘಟನೆಗಳು ಹಾಗೂ ಎಲ್ಲಾ ಕನ್ನಡಿಗರನ್ನೂ ಸೇರಿಸಿಕೊಂಡು ಪ್ರತಿಭಟನೆಯ ನೇತೃತ್ವ ವಹಿಸಲಿದೆ” ಎಂದು ಮಹೇಶ ಜೋಶಿ ಎಚ್ಚರಿಸಿದ್ದಾರೆ.

ರಾಜ್ಯಪಾಲರಿಗೆ ಪತ್ರ

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಕೂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, “ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಬೃಹತ್ ಹೋರಾಟದ ಪರಿಣಾಮವಾಗಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರನ್ನು ಬಂದಿಸಿದ್ದು, ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಸರ್ಕಾರದ ಈ ನಡೆಯನ್ನು ಖಂಡಿಸುತ್ತದೆ. ಇಂತಹ ಕನ್ನಡ ಕಟ್ಟಾಳು ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕು ಮತ್ತು ಕನ್ನಡ ಪರ ಹೋರಾಟಗಾರರ ಮೇಲಿರುವ ಕೇಸುಗಳನ್ನು ವಜಾಗೊಳಿಸಬೇಕು” ಎಂದು ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...