‘ಕರ್ನಾಟಕ ಬಂದ್’ ಬಹುತೇಕ ಶಾಂತಿಯುತ: ಕೆಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ

Date:

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ‘ಕರ್ನಾಟಕ ಬಂದ್’ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನ ಪುರಭವನ ಎದುರು ಬಿಎಂಟಿಸಿ ಬಸ್‌ ಗಾಜು ಒಡೆದ ಘಟನೆ ಹೊರತುಪಡಿಸಿದರೆ ಬಂದ್‌ ಬಹುತೇಕ ಶಾಂತಿಯುತವಾಗಿತ್ತು.

ಕಾವೇರಿ ಕಣಿವೆ ಭಾಗದ ಜಿಲ್ಲೆಗಳಲ್ಲಿ ಬಂದ್​ಗೆ ಉತ್ತಮ ವ್ಯಕ್ತವಾಗಿದ್ದರೆ, ಕಾವೇರಿಯ ಉಗಮ ಸ್ಥಾನವಾದ ಕೊಡಗು ಜಿಲ್ಲೆಗೆ ಬಂದ್‌ಗೆ ಬಿಸಿ ತಟ್ಟಿಲ್ಲ. ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಬಂದ್‌ಗೆ ಸಹಕಾರ ನೀಡಿದ ಜಿಲ್ಲೆಗಳಲ್ಲಿ ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಬಹುತೇಕ ಬಂದ್ ಆಗಿದ್ದವು, ಕರ್ನಾಟಕ ಬಂದ್​ಗೆ ಸುಮಾರು ಎರಡು ಸಾವಿರ ಸಂಘಟನೆಗಳ ಸಾಥ್ ನೀಡಿದ್ದವು. ಹೋಟೆಲ್, ಮಾಲ್, ಚಲನಚಿತ್ರ ಮಂದಿರಗಳು ಸೇರಿದಂತೆ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಸಿನಿಮಾ ನಟರು, ನಿರ್ಮಾಪಕರು ಹಾಗೂ ತಂತ್ರಜ್ಞರು ಕಾವೇರಿಗಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಇದೇ ವೇಳೆ ನಟ ಶಿವರಾಜ್‌ಕುಮಾರ್ ಅವರು ತಮಿಳು ನಟ ಸಿದ್ದಾರ್ಥ್‌ ಅವರನ್ನು ಕ್ಷಮೆಯೂ ಕೇಳಿದರು.

ಬಂದ್‌ಗೆ ಕರೆ ಕೊಟ್ಟಿದ್ದ ಸಂಘಟಕರಲ್ಲೊರ್ವರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಖಾಲಿ ಕೊಡ ಹಿಡಿದು, ಬುರ್ಖಾ ಧರಿಸಿ ಪ್ರತಿಭಟಿಸಿ, ಗಮನ ಸೆಳೆದಿದ್ದಾರೆ.

ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತವಾಯಿತು. ವಿವಿಧ ಸಂಘಟನೆಗಳು ಬೀದಿಗಿಳಿದು ತಮ್ಮ ಆಕ್ರೋಶ ಹೊರಹಾಕಿದರು. ಖಾಲಿ ಕೊಡ ಹಿಡಿದು, ಉರುಳು ಸೇವೆ ಮಾಡಿ, ಸಂಸದ ಅಣಕು ಶವಯಾತ್ರೆ ನಡೆಸಿ, ತಮಿಳು ಸಿನಿಮಾಗಳ ಪೋಸ್ಟರ್ ಹರಿದು ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ ಮೆಟ್ರೊ ಸಂಚಾರ ಎಂದಿನಂತೆಯೇ ಇತ್ತು. ಬಿಎಂಟಿಸಿ ಸಂಚಾರ ಇತ್ತಾದರೂ ಎರಡು ಸಾವಿರಕ್ಕೂ ಹೆಚ್ಚು ಟ್ರಪ್‌ಗಳು ನಡೆಯಲಿಲ್ಲ. ವಿಮಾನ ನಿಲ್ದಾಣದಲ್ಲೂ ಪ್ರತಿಭಟನೆ ನಡೆಯಿತು. ಜತೆಗೆ ಅಲ್ಲಿಗೆ ಹೋಗಲು ಪ್ರಯಾಣಿಕರಿಗೆ ವಾಹನ ಸೌಕರ್ಯ ಇಲ್ಲದ ಕಾರಣ 44 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.

ಕಳೆದ ಮಂಗಳವಾರ ಬೆಂಗಳೂರು ಬಂದ್, ಇಂದು ( ಸೆ29) ಕರ್ನಾಟಕ ಬಂದ್​ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಬಿಜೆಪಿ ಮತ್ತು ಜೆಡಿಎಸ್ ಈ ಬಂದ್​ಗೆ ಬಾಹ್ಯ ಬೆಂಬಲವನ್ನು ನೀಡಿದ್ದವು.

ಎರಡೆರಡು ಬಂದ್ ನಡೆದರು ಕೂಡ ಕರ್ನಾಟಕದ ಸಂಕಷ್ಟ ಮುಗಿಯಲಿಲ್ಲ. ಅಕ್ಟೋಬರ್ 15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...