‘ಕರ್ನಾಟಕ ಎಫ್‌ಡಿಐ ಕಳೆದುಕೊಳ್ಳುತ್ತಿದೆ’ ಎಂದ ವಿತ್ತ ಸಚಿವೆಗೆ ಕೇಂದ್ರದ ಡೇಟಾ ಉಲ್ಲೇಖಿಸಿ ಸಿಎಂ ತಿರುಗೇಟು

Date:

ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಾವೇಶವೊಂದರಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿಯೇ ಕರ್ನಾಟಕವು ವಿದೇಶಿ ಹೂಡಿಕೆಯನ್ನು (ಎಫ್‌ಡಿಐ) ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರದ ಡೇಟಾ ಮೂಲಕವೇ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ (ಟ್ವೀಟ್) ಮಾಡಿರುವ ಸಿಎಂ, “ಇತ್ತೀಚೆಗಷ್ಟೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದು ಸಮಾವೇಶದಲ್ಲಿ ಕರ್ನಾಟಕದ ಬಗ್ಗೆ ಆಧಾರರಹಿತ ಹೇಳಿಕೆ ನೀಡಿದ್ದಾರೆ. ಒಂದು ವರ್ಷದ ಹಿಂದೆ ಕರ್ನಾಟಕವು ಹೂಡಿಕೆಗೆ ನೆಚ್ಚಿನ ತಾಣವಾಗಿತ್ತು, ಆದರೆ ಈಗ ಗ್ಯಾರಂಟಿ ಯೋಜನೆಯಿಂದಾಗಿ ಆ ಸ್ಥಾನ ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದರು. ನಿರ್ಮಲಾ ಸೀತಾರಾಮನ್ ಅವರೇ, ಕರ್ನಾಟಕವು ಈಗಲೂ ಎಫ್‌ಡಿಐಗೆ ನೆಚ್ಚಿನ ತಾಣವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ಸರ್ಕಾರದ ವೆಬ್‌ಸೈಟ್ investindia.gov.in ಪ್ರಕಾರ ನಾವು ಹೇಳುವುದಾದರೆ 2023-24 ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ಎಫ್‌ಡಿಐ ಪಡೆದ ಟಾಪ್ 5 ರಾಜ್ಯಗಳಲ್ಲಿ ಕರ್ನಾಟಕ ಕೂಡಾ ಒಂದು. ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಶೇಕಡ 30, ಕರ್ನಾಟಕ ಶೇಕಡ 22, ಗುಜರಾತ್ ಶೇಕಡ 17, ದೆಹಲಿ ಶೇಕಡ 13 ಮತ್ತು ತಮಿಳುನಾಡು ಶೇಕಡ 5ರಷ್ಟು ಎಫ್‌ಡಿಐ ಸ್ವೀಕರಿಸಿದೆ” ಎಂದು ಸಿದ್ಧರಾಮಯ್ಯ ವಿವರಿಸಿದರು.

“ಇನ್ನೊಂದೆಡೆ ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಎಫ್‌ಡಿಐ ಬೆಳವಣಿಗೆಯ ಸ್ಥಿತಿಯನ್ನು ನೀವೇ ನೋಡಿ. ಭಾರತದಲ್ಲಿ ಎಫ್‌ಡಿಐ ಕಡಿಮೆಯಾಗುತ್ತಿದೆ. ಯುಪಿಎ ಸರ್ಕಾರ ಇದ್ದಾಗ ಹತ್ತು ವರ್ಷದಲ್ಲಿ ಶೇಕಡ 27 ರಷ್ಟು ಎಫ್‌ಡಿಐ ಬೆಳವಣಿಗೆಯಾಗಿದೆ. ಆದರೆ ನಿಮ್ಮ ಸರ್ಕಾರ ಅಧಿಕಾರ ನಡೆಸಿದ 10 ವರ್ಷಗಳಲ್ಲಿ ವರ್ಷಕ್ಕೆ ಶೇಕಡ 6.6ಕ್ಕೆ ಇಳಿದಿದೆ. ಇತರರಿಗೆ ಲೆಕ್ಚರ್ ನೀಡುವ ಮುನ್ನ ಸ್ವಲ್ಪ ನಿಮ್ಮ ಮನೆಯನ್ನು ನೋಡಿಕೊಳ್ಳಿ” ಎಂದು ಸಿದ್ಧರಾಮಯ್ಯ ಅವರು ಟಾಂಗ್ ನೀಡಿದ್ದಾರೆ.

“ಪ್ರತಿ ಕುಟುಂಬಕ್ಕೆ ವಾರ್ಷಿಕ 24,000 ರೂಪಾಯಿಗಳ ನಗದು ವರ್ಗಾವಣೆ ಮತ್ತು ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಮಹಿಳೆಯರ ಸಬಲೀಕರಣವನ್ನು ಮಾಡುವ ನಮ್ಮ ಸರ್ಕಾರದ ನಿರ್ಧಾರವನ್ನು ನೀವು ವಿರೋಧಿಸುತ್ತಿದ್ದರೆ, ಅದು ನಿಮ್ಮ ನೀತಿಯಾಗಿದೆ. ನಮ್ಮ ಜನರೊಂದಿಗೆ ನಿಲ್ಲುವುದು ಮತ್ತು ಜನರಿಗೆ ಆರ್ಥಿಕ ಸಹಾಯ ಮಾಡಿ ಸಬಲೀಕರಣಗೊಳಿಸುವುದು ನಮ್ಮ ನೀತಿಯಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ನಿಮಗೆ ದೇಣಿಗೆ ನೀಡುವ ದೊಡ್ಡ ಉದ್ಯಮಿಗಳ ಪರವಾಗಿ ನೀವು ನಿಲ್ಲುತ್ತೀರಿ. ನಾವು ಜನರೊಂದಿಗೆ ನಿಲ್ಲುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...