ದೆಹಲಿ ಚಲೋ | ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಲ್ಲಬೇಡಿ: ಸಿಎಂ ಸಿದ್ದರಾಮಯ್ಯ

Date:

“ಅನುದಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ. ಇದು ದ್ರೋಹ. ಅನಿವಾರ್ಯವಾಗಿ ದೆಹಲಿಗೆ ಬಂದು ಪ್ರತಿಭಟನೆ ನಡೆಸಬೇಕಾಯಿತು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ದ್ರೋಹ, ವಂಚನೆ ಖಂಡಿಸಿ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.

“ಕೇಂದ್ರ ಸರ್ಕಾರದ ಅಂಕಿ ಅಂಶಗಳೇ ನಮ್ಮ‌ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಹೇಳುತ್ತಿವೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ. ನಮಗೇ ಏಕೆ ಈ ಮಟ್ಟದ ಅನ್ಯಾಯ” ಎಂದು ಪ್ರಶ್ನಿಸಿದ ಸಿಎಂ, “ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಂದು ಹಾಕಬೇಡಿ, ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ ಎಂದು ಒತ್ತಾಯಿಸಲು ನಮ್ಮ ಪ್ರತಿಭಟನೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಅವರು ಪ್ರಧಾನಿ ಆದ ಬಳಿಕ ರಚಿಸಲಾದ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಆಯಿತು. ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿಗೆ ಅನುದಾನ ಕೊಡುವ ಬಗ್ಗೆ ನಮಗೆ ತಕರಾರುಗಳಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ” ಎಂದು ಸಿಎಂ ತಿಳಿಸಿದರು.

“ನಾವು ಕನ್ನಡಿಗರು 430000 ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಾಸ್ ಬರುವುದು ಕೇವಲ 50,000 ಕೋಟಿ ಮಾತ್ರ. ಅಂದರೆ ನಾವು ಕೊಡುವ ಪ್ರತಿ 100 ರೂ ನಲ್ಲಿ 13 ರೂ ಮಾತ್ರ ನಮಗೆ ವಾಪಾಸ್ ಬರ್ತದೆ. ಇದಕ್ಕಿಂತ ಭೀಕರ ಅನ್ಯಾಯ ಏನಿದೆ? ಈ ಅನ್ಯಾಯವನ್ನು ನಾವು ಸಹಿಸಬೇಕಾ?” ಎಂದು ಕೇಳಿದರು.

“15 ನೇ ಹಣಕಾಸು ಆಯೋಗದಿಂದಾಗಿ ನಮಗೆ 62098 ಕೋಟಿ ರೂ ನಮಗೆ ತೆರಿಗೆಯೊಂದರಲ್ಲೇ ನಮಗೆ ಅನ್ಯಾಯ ಆಗಿದೆ. ಇದನ್ನು ನಾವು ಪ್ರಶ್ನಿಸಬಾರದಾ? ಈ ಕಾರಣಗಳಿಗೇ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಬಿಜೆಪಿ ನಿರಂತರ ಸುಳ್ಳುಗಳ ಮೂಲಕ ತಮ್ಮ ದ್ರೋಹವನ್ನು ಮರೆ ಮಾಚಲು ನೋಡುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ ಈ ಪ್ರಮಾಣದಲ್ಲೂ ನಮಗೆ ಹಂಚಿಕೆ ಆಗಿಲ್ಲ. ಇದನ್ನು ಕೇಂದ್ರದ ಅಂಕಿ ಅಂಶಗಳೇ ಹೇಳುತ್ತಿವೆ” ಎಂದು ಸಿಎಂ ತಿಳಿಸಿದರು.

ಕಳೆದ 10 ವರ್ಷಗಳಿಂದ ಹಂತ ಹಂತವಾಗಿ ರಾಜ್ಯದ ಪಾಲಿನ ತೆರಿಗೆ ಪಾಲು, ಕೇಂದ್ರದ ಅನುದಾನದ ಪಾಲು ನಿರಂತರವಾಗಿ ಕಡಿಮೆ ಆಗುತ್ತಿರುವುದನ್ನು ಮುಖ್ಯಮಂತ್ರಿಗಳು ಪ್ರತೀ ವರ್ಷದ ಅಂಕಿ ಅಂಶಗಳೊಂದಿಗೆ ವಿವರಿಸಿದರು.

“ಕೇಂದ್ರದ ಬಜೆಟ್ ಗಾತ್ರ ದುಪ್ಪಟ್ಟಾಗಿದೆ. ಆದರೆ ರಾಜ್ಯದ ಪಾಲಿನ ತೆರಿಗೆ ಪಾಲು ಅರ್ಧಕ್ಕಿಂತ ಕಡಿಮೆ ಆಗಿದೆ. ನಮ್ಮ ಪಾಲು ದುಪ್ಪಟ್ಟಾಗಬೇಕಾದ ಜಾಗದಲ್ಲಿ ಅರ್ಧಕ್ಕಿಂತ ಕಡಿಮೆ ಆಗಿರುವುದು ಅನ್ಯಾಯ ಅಲ್ಲವೇ? ಜಿಎಸ್‌ಟಿಯಲ್ಲಿ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಇನ್ನೂ ಬೃಹತ್ತಾಗಿದೆ. ಜಿಎಸ್‌ಟಿಯಲ್ಲಿ ಆಗುವ ಅನ್ಯಾಯವನ್ನು ವಿಶೇಷ ಪರಿಹಾರ ಕೊಟ್ಟು ಸರಿದೂಗಿಸುವುದಾಗಿ ಹೇಳಿದರು. ಈಗ ಪರಿಹಾರ ಕೊಡುತ್ತಿಲ್ಲ. ಇದರಿಂದ 59000 ಕೋಟಿಗೂ ಅಧಿಕ ಅನ್ಯಾಯ, ವಂಚನೆ ಆಯಿತು” ಎಂದು ಸಿಎಂ ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...