ಇಂದಿನಿಂದ ಮೂರು ದಿನ ನೂತನ ಶಾಸಕರಿಗೆ ತರಬೇತಿ ಶಿಬಿರ

Date:

ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ. ಅದೇ ರೀತಿ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸಂಸದೀಯ ಕಲಾಪದ ಕುರಿತು ಅರಿವು ಮೂಡಿಸಲು ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಜೂ. 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದೆ.

ಶಿಬಿರವನ್ನು ಜೂ. 26ರಂದು ಬೆಳಗ್ಗೆ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ ಜೆ ಜಾರ್ಜ್, ವಸತಿ ಸಚಿವ ಜಮೀ‌ರ್‌ ಅಹ್ಮದ್‌ ಖಾನ್ ಉಪಸ್ಥಿತರಿರಲಿದ್ದಾರೆ.

ಮೂರೂ ದಿನ ಬೆಳಗ್ಗೆ 6ರಿಂದ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆ ನಡೆಯಲಿದೆ. 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಕಲಾಪದಲ್ಲಿ ಭಾಗವಹಿಸುವಿಕೆ, ನಿಲುವಳಿ ಸೂಚನೆ, ನಿಯಮ-69, ವಿಶ್ವಾಸ ಮತ್ತು ಅವಿಶ್ವಾಸ ನಿರ್ಣಯ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾರ್ಗದರ್ಶನ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಾಸನ ರಚನೆ ಮತ್ತು ಅದರಲ್ಲಿ ಸದಸ್ಯರುಗಳ ಭಾಗವಹಿಸುವಿಕೆ ಮತ್ತು ಉಭಯ ಸದನಗಳ ಸಂಬಂಧ ಕುರಿತು ಮಾತನಾಡಲಿದ್ದಾರೆ. ಟಿ ಬಿ ಜಯಚಂದ್ರ ಅವರು ಶಾಸಕರ ಕರ್ತವ್ಯಗಳು, ಜವಾಬ್ದಾರಿ ಮತ್ತು ಹಕ್ಕುಬಾಧ್ಯತೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಾನ್ಯ ಸಭಾಧ್ಯಕ್ಷ ಖಾದರ್ ಅವರು ನೂತನ ಶಾಸಕರಿಗೆ ಯಾವ ದಿಕ್ಕು ತೋರಿಸುತ್ತಿದ್ದಾರೆ?

ಪರಿಷತ್‌ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಅವರು ಸದಸ್ಯರು ಅಳವಡಿಸಿಕೊಳ್ಳಬೇಕಾದ ನೀತಿ ನಿಯಮಗಳು, ಪಾಲಿಸಬೇಕಾದ ನಿಯಮಗಳು ಸಂಸದೀಯ ಭಾಷೆಯ ಬಳಕೆ ಮತ್ತು ಜನ ಮೆಚ್ಚಿದ ಶಾಸಕನಾಗುವುದು ಹೇಗೆ ಎಂದು ತಿಳಿಸಿಕೊಡಲಿದ್ದಾರೆ. ಶಾಸನ ಸಭೆಯಲ್ಲಿ ಕರ್ತವ್ಯದ ಹಾಸ್ಯಭರಿತ ನಿರ್ವಹಣೆ ಕುರಿತು ಮುಖ್ಯಮಂತ್ರಿ ಚಂದ್ರು ತಿಳಿಸಿಕೊಡಲಿದ್ದಾರೆ. ಬಿ ಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ ಸಂವಾದ ನಡೆಸಲಿದ್ದಾರೆ.

ಮೊದಲ ದಿನ ಸಂಜೆ ಬ್ರಹ್ಮಕುಮಾರೀಸ್ ಸಂಸ್ಥೆಯ ಬಿ ಕೆ ವೀಣಾ ಮತ್ತು ಬಿ ಕೆ ಭುವನೇಶ್ವರಿ ಹಿತವಚನ ನೀಡಲಿದ್ದಾರೆ. ಸಾಮರಸ್ಯ ಸಮಾಜ ವಿಷಯದ ಕುರಿತು ಜೂ. 27ರಂದು ಸಂಜೆ ಡಿ ವೀರೇಂದ್ರ ಹೆಗ್ಗಡೆ, ಕೊನೆಯ ದಿನ ಬೆಳಗ್ಗೆ ಜನಪ್ರತಿನಿಧಿ ಮತ್ತು ಜನರ ಮಧ್ಯೆ ಸಂಬಂಧ ಬಾಂಧವ್ಯವನ್ನು ವೃದ್ಧಿಗೊಳಿಸುವುದು ವಿಷಯದ ಕುರಿತು ಜಮಾತೆ ಇಸ್ಲಾಮಿ ಹಿಂದ್‌ನ ಮಹಮ್ಮದ್ ಕುಂಞ ಮಾತನಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...