ಕರ್ನಾಟಕದಲ್ಲಿರುವುದು ಅತ್ಯಂತ ಭ್ರಷ್ಟ ಸರಕಾರ: ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ವಾಗ್ದಾಳಿ

Date:

ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು; “ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, “ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು” ಎಂದು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್‌ ಸರಕಾರ ಯಾವ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರಕಾರ. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ; ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿದೆ. ಸರಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಸರಕಾರದ ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಸದನದಲ್ಲಿ ಓದಲೇ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯರು ಮಾಜಿ ಪ್ರಧಾನಿಗಳ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ದೇವೇಗೌಡರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಕಾಂಗ್ರೆಸ್ ಪಕ್ಷದ ಬಗ್ಗೆ ‘ಶೇಮ್‌ ಶೇಮ್‌’ ಎಂದು ಘೋಷಣೆ ಕೂಗಿದರು. 

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು

“ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇ ದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು” ಎಂದು ಒತ್ತಾಯ ಮಾಡಿದರು.

“ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...