ಮತ್ತೊಮ್ಮೆ ಸತ್ಯದ ಘರ್ಜನೆಯಾಗಲಿದೆ : ಸಚಿವ ಪ್ರಿಯಾಂಕ್ ಖರ್ಗೆ

Date:

  • ರಾಹುಲ್ ಗಾಂಧಿ ಪರ ಸುಪ್ರೀಂ ತಡೆ : ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ
  • ಸೂರ್ಯ, ಚಂದ್ರ, ಸತ್ಯವನ್ನು ಬಹಳಷ್ಟು ದಿನ ಮುಚ್ಚಿಡಲಿಕ್ಕೆ ಆಗಲ್ಲ: ಖರ್ಗೆ

ರಾಹುಲ್ ಗಾಂಧಿಯವರ ಪ್ರಶ್ನೆ ಬಿಜೆಪಿಯವರಿಗೆ ತೊಂದರೆ ಉಂಟು ಮಾಡುತ್ತಿದೆ. ಅದಕ್ಕಾಗಿ ಅವರ ಧ್ವನಿಯನ್ನು ಅಡಗಿಸಲು ವ್ಯವಸ್ಥಿತವಾಗಿ ಯತ್ನಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಸರ್ಕಾರಕ್ಕೆ ಮತ್ತೆ ಪ್ರಶ್ನೆಗಳನ್ನು ಕೇಳಿ, ಸಕ್ರಿಯವಾಗಲಿದ್ದಾರೆ. ಲೋಕಸಭೆಯ ಒಳಗಡೆ ಹಾಗೂ ಹೊರಗಡೆ ಸತ್ಯದ ಘರ್ಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧಿಯವರಿಗೆ ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ಅವರು ಪ್ರತಿಕ್ರಿಯಿಸಿದರು.

ಕಲಬುರಗಿಯಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಜೊತೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೂರ್ಯ, ಚಂದ್ರ, ಸತ್ಯವನ್ನು ಬಹಳಷ್ಟು ದಿನ ಮುಚ್ಚಿಡಲಿಕ್ಕೆ ಆಗುವುದಿಲ್ಲ ಎಂದು ಬುದ್ಧ ಹೇಳಿದ್ದಾನೆ. ಅದೇ ರೀತಿ, ಇವತ್ತು ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಯವರ ಪರವಾಗಿ ನೀಡಿದ ತಡೆಯಾಜ್ಞೆಯು ರಾಷ್ಟ್ರದಲ್ಲಿ ನಡೆಯುತ್ತಿರುವ ಸತ್ಯವನ್ನು ಬಿಚ್ಚಿಟ್ಟಿದೆ. ಈ ಆದೇಶವು ಸಂವಿಧಾನದ ಗೆಲುವು, ಪ್ರಜಾಪ್ರಭುತ್ವದ ಹಾಗೂ ಕೋಟ್ಯಂತರ ಜನರ ಗೆಲುವು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಸಂಸ್ಥೆ, ಮಾಧ್ಯಮ ಹಾಗೂ ವಿಪಕ್ಷದವರು ಸರ್ಕಾರದ ವಿರುದ್ಧ ಮಾತನಾಡಿದರೆ ಅವರನ್ನು ಹೆದರಿಸುವ, ಬೆದರಿಸುವ ತಂತ್ರಗಾರಿಕೆ ನಡೆದಿದೆ. ಕಳೆದ 10 ವರ್ಷಗಳಿಂದ ಇದೇ ರೀತಿ ನಡೆಯುತ್ತಿದೆ. ಜನರ ಪರವಾಗಿ, ಸಂವಿಧಾನದ ಪರವಾಗಿ ಮಾತನಾಡುವವರನ್ನು ವ್ಯವಸ್ಥಿತ ಷಡ್ಯಂತ್ರದ ಮೂಲಕ ಸದೆಬಡಿಯಲಾಗುತ್ತಿದೆ ಎಂಬುದನ್ನು ಉತ್ತರ ಪ್ರದೇಶ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಉದಾಹರಣೆ ಸಹಿತ ಸಚಿವ ಖರ್ಗೆ ವಿವರಿಸಿದರು.

ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಾಧೀಶರ ಪೀಠವು ಈ ತಡೆಯಾಜ್ಞೆ ನೀಡಿದ ವೇಳೆ ಕೆಳ ಹಂತದ ನ್ಯಾಯಾಲಯಗಳ ಪ್ರಬುದ್ಧತೆಯನ್ನು ಪ್ರಶ್ನೆ ಮಾಡಿದೆ. ಈ ಪ್ರಕರಣ ಇಲ್ಲಿಯತನಕ ಬರುವಂತಹ ಅವಶ್ಯಕತೆಯೇ ಇರಲಿಲ್ಲ ಎಂಬುದನ್ನು ಹೇಳಿದೆ. ಈ ಪ್ರಕರಣ ದಾಖಲಾಗಿ, ಓರ್ವ ಚುನಾಯಿತ ಜನಪ್ರತಿನಿಧಿಗೆ ಶಿಕ್ಷೆಯಾಗಿರುವುದಲ್ಲದೇ, ಅನರ್ಹತೆಯಾಗಿರುವುದರ ಬಗ್ಗೆ ದೇಶದ ನೂರಾರು ಕಾನೂನು ತಜ್ಞರೇ ಆಶ್ಚರ್ಯಪಟ್ಟಿದ್ದರು. ನನ್ನ ಪ್ರಕಾರ, ಇದು ದಾಖಲಾಗಬೇಕಾದ ಪ್ರಕರಣವೇ ಅಲ್ಲ. ಯಾವ ಮಟ್ಟಕ್ಕೆ ಇವರು ವ್ಯವಸ್ಥೆಯನ್ನು ದುರುಪಯೋಗ ಪಡಿಸಿದ್ದಾರೆ ಎಂಬುದು ತಿಳಿದುಬರುತ್ತದೆ ಎಂದು ಸಚಿವ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಏನೇ ಇರಲಿ, ನ್ಯಾಯಾಲಯದ ಮೇಲೆ ರಾಹುಲ್ ಗಾಂಧಿ ಸಹಿತ ಎಲ್ಲರಿಗೂ ನಂಬಿಕೆ ಇತ್ತು. ಸುಪ್ರೀಂ ಕೋರ್ಟ್‌ ಆ ನಂಬಿಕೆಯನ್ನು ಉಳಿಸಿಕೊಂಡಿದೆ. ರಾಹುಲ್ ಗಾಂಧಿಯವರ ಪ್ರಾಮಾಣಿಕ ಹೋರಾಟ ಮತ್ತು ಬುದ್ಧ, ಬಸವ, ಅಂಬೇಡ್ಕರ್ ಹೋರಾಟವನ್ನು ಈ ಆದೇಶ ಎತ್ತಿ ಹಿಡಿದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

‘ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ಕೋಲಾರದಲ್ಲಿ. ಆದರೆ ಪ್ರಕರಣ ದಾಖಲಾಗಿ ಎಲ್ಲ ನಡೆಯುತ್ತಿರುವುದು ಗುಜರಾತ್‌ನಲ್ಲಿ. ಅದರಲ್ಲೇ ನಮಗೆ ಗೊತ್ತಾಗುತ್ತದೆ ಯಾವ ರೀತಿ ವ್ಯವಸ್ಥಿತವಾಗಿ ಅವರ ಧ್ವನಿಯನ್ನು ಅಡಗಿಸಲಾಗುತ್ತದೆ ಎಂಬುದು. ನ್ಯಾಯಾಲಯದ ಮೇಲೆ ಎಲ್ಲರಿಗೂ ನಂಬಿಕೆ ಇತ್ತು. ಹಾಗಾಗಿಯೇ ನಮ್ಮ ನಂಬಿಕೆಗೆ ಗೆಲುವಾಗಿದೆ’ ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...