ಕರ್ನಾಟಕ ಶಾಲಾ ಶಿಕ್ಷಣ ವ್ಯವಸ್ಥೆ: ಅವ್ಯವಸ್ಥೆಗಳ ಆಗರ

Date:

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆಗಳ ಪಟ್ಟಿ ಇಲ್ಲಿದೆ. ಇದನ್ನು ಸರಿಪಡಿಸದೆ, ಕೆಪಿಎಸ್ ಶಾಲೆಗಳತ್ತ ನೋಡುವುದು ಎಷ್ಟು ಸರಿ?

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಏಕೋಪಾಧ್ಯಾಯ ಶಾಲೆಗಳು: 6,400

50 ಅಥವಾ 50ಕ್ಕಿಂತ ಕಡಿಮೆ ಇರುವ ಶಾಲೆಗಳ ಸಂಖ್ಯೆ: 23,342

ಸರ್ಕಾರಿ ಶಾಲೆಗಳು: 46,473

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲಿ ಮಕ್ಕಳದಾಖಲಾತಿ: 42,75,354

ಸರಾಸರಿ: ಪ್ರತಿ ಶಾಲೆಗೆ/92 ಮಕ್ಕಳು

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ: 43,133

ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ: 10,168

ಸರ್ಕಾರಿ ಶಾಲೆಗಳಲ್ಲಿನ ಅತಿಥಿ ಶಿಕ್ಷಕರ ಸಂಖ್ಯೆ: 40,000

2028-29ರಲ್ಲಿ ನಿವೃತ್ತಿ ಹೊಂದುತ್ತಿರುವ ಪ್ರಾಥಮಿಕ ಶಿಕ್ಷಕರ ಸಂಖ್ಯೆ: 34,807

2028-29ರಲ್ಲಿ ನಿವೃತ್ತಿ ಹೊಂದುತ್ತಿರುವ ಪ್ರೌಢಶಾಲಾ ಶಿಕ್ಷಕರ ಸಂಖ್ಯೆ: 4,128
(ಮೇಲಿನ ಮಾಹಿತಿ ಕೃಪೆ: ಶಿಕ್ಷಣ ಇಲಾಖೆ ಮತ್ತು ನಿರಂಜನಾರಾಧ್ಯ)

ಇದನ್ನು ಓದಿದ್ದೀರಾ?: ಶಿಕ್ಷಣದ ಜವಾಬ್ದಾರಿಯಿಂದ ಸರ್ಕಾರ ನಿಧಾನವಾಗಿ ನುಣುಚಿಕೊಳ್ಳುತ್ತಿದೆಯೇ?

ಇನ್ನು ರಾಜ್ಯ ಶಿಕ್ಷಣ ಇಲಾಖೆಯ ವೈಫಲ್ಯದ ಕಾರಣದಿಂದ…

  • ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 500-1000 ಖಾಸಗಿ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ.
  • 50 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆ ಖಾಲಿ ಇದ್ದರೂ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.
  • 1-5ರವರೆಗೆ: ತರಗತಿಗೆ ಒಬ್ಬ ಶಿಕ್ಷಕರು
  • 6-10ರವರೆಗೆ: ವಿಷಯಕ್ಕೊಬ್ಬ ಶಿಕ್ಷಕರು ಅಗತ್ಯವಿದೆ. ಆದರೆ ಇದು ವಾಸ್ತವದಲ್ಲಿ ಜಾರಿಗೊಂಡಿಲ್ಲ
  • ಬಹುತೇಕ ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆ ತಲುಪಿವೆ, ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದ ಸಾವಿರಾರು ಶಾಲೆಗಳಿವೆ
  • ಆಧುನಿಕ, ಸುಸಜ್ಜಿತ ಗ್ರಂಥಾಲಯಗಳಿಲ್ಲ
  • ಕಂಪ್ಯೂಟರ್‍‌ಗಳ ಲಭ್ಯತೆ ಇಲ್ಲ
  • ಶಿಕ್ಷಕರಿಗೆ ಪಾಠಕ್ಕಿಂತ ಇತರೆ ಕೆಲಸಗಳ ಹೊರೆಯೇ ಹೆಚ್ಚಾಗಿದೆ.
  • ಇರುವ ಶಿಕ್ಷಕರ ಪೈಕಿ ಕೆಲವರು ಬದ್ಧತೆಯಿಂದ ಕೆಲಸ ಮಾಡುತ್ತಿಲ್ಲ.
  • ಇಂದಿಗೂ ಆಧುನಿಕ ಶಿಕ್ಷಣ ಮತ್ತು ವಂಚಿತ ಸಮುದಾಯಗಳ ಶಿಕ್ಷಣಕ್ಕೆ ಅಗತ್ಯವಾದ ವ್ಯಾಸಂಗಕ್ರಮ(ಪೆಡಗಾಜಿ)
    ರೂಪಿಸಲು ವಿಫಲರಾಗಿದ್ದಾರೆ.
  • ಶಿಕ್ಷಕರ ತರಬೇತಿಗಾಗಿ ಇರುವ ‘ಡಯಟ್’ನ್ನು ಬಲಪಡಿಸದೆ ಅದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ, ಎನ್‌ಜಿಒಗಳಿಗೆ ಹೊರಗುತ್ತಿಗೆ ನೀಡುವುದು ಯಾವ ರೀತಿ ನೀತಿ?
  • ಬಜೆಟ್ ವೆಚ್ಚದ ಶೇ.24ರಷ್ಟಿರಬೇಕಾದ ಸಾರ್ವಜನಿಕ ಬಂಡವಾಳ ಹೂಡಿಕೆ ಇಂದಿಗೂ ಶೇ.11ರ ಆಸುಪಾಸಿನಲ್ಲಿದೆ. ಇದರಿಂದ ಸರ್ಕಾರಿ ಶಾಲೆಗಳ ಸಬಲೀಕರಣ ಸಾಧ್ಯವೇ?
  • ಇದರ ಬದಲು ಬಂಡವಾಳಶಾಹಿಗಳ ಮೇಲೆ ಅವಲಂಬಿತರಾಗುವುದು ಎಷ್ಟು ಸರಿ?
  • ಸಿಎಸ್‌ಆರ್ ಫಂಡ್ ಮೇಲೆ ಅವಲಂಬಿತರಾಗುವುದು ನ್ಯಾಯವೇ?
  • ಇಂತಹ ಪರಿಸ್ಥಿತಿಯಲ್ಲಿ ಗುಣಮಟ್ಟದ ಶಿಕ್ಷಣ ಕೊಡುವುದು ಹೇಗೆ?
  • ಸರ್ಕಾರವು ಇದರ ಕುರಿತು ಮೊದಲು ಗಮನ ಹರಿಸಬೇಕಲ್ಲವೇ?

ಈಗ ಹೇಳಿ, ಇದಕ್ಕೆ ಕೆಪಿಎಸ್ ವ್ಯವಸ್ಥೆ ಪರಿಹಾರವೇ? ಬದಲಿಗೆ, ಸಮಗ್ರ ಶಿಕ್ಷಣ ನೀತಿಯ ಅಗತ್ಯವಿದೆಯಲ್ಲವೇ? ಥೋರಟ್ ಆಯೋಗದ ಎಸ್‌ಇಪಿ(ರಾಜ್ಯ ಶಿಕ್ಷಣ ನೀತಿ) ಶಿಫಾರಸ್ಸುಗಳ ಕತೆ ಏನು?

bhut sir
ಬಿ. ಶ್ರೀಪಾದ ಭಟ್
+ posts

ಶಿಕ್ಷಣ ತಜ್ಞರಾದ ಶ್ರೀಪಾದ ಭಟ್ ಅವರು, ಮೂಲತಃ  ವಿಜಯನಗರ ಜಿಲ್ಲೆಯವರು. ದಲಿತ ಮತ್ತು ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯರಾಗಿರುವ ಇವರು, 'ಹಿಂದುತ್ವ ರಾಜಕಾರಣ - ಅಂದು ಇಂದು ಮುಂದು', 'ಬಿಸಿಲು, ಬಯಲು, ನೆಳಲು - ಹೊಸ ಅಲೆ ಸಿನಿಮಾ ಕುರಿತಾದ ಕಥನ', 'ಕಣ್ಕಟ್ಟು', 'ಸಾವಿತ್ರಿಬಾಯಿ ಫುಲೆ ಬದುಕು ಬರಹ' ಮೊದಲಾದ ಕೃತಿಗಳನ್ನು ಬರೆದಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಬಿ. ಶ್ರೀಪಾದ ಭಟ್
ಬಿ. ಶ್ರೀಪಾದ ಭಟ್
ಶಿಕ್ಷಣ ತಜ್ಞರಾದ ಶ್ರೀಪಾದ ಭಟ್ ಅವರು, ಮೂಲತಃ  ವಿಜಯನಗರ ಜಿಲ್ಲೆಯವರು. ದಲಿತ ಮತ್ತು ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯರಾಗಿರುವ ಇವರು, 'ಹಿಂದುತ್ವ ರಾಜಕಾರಣ - ಅಂದು ಇಂದು ಮುಂದು', 'ಬಿಸಿಲು, ಬಯಲು, ನೆಳಲು - ಹೊಸ ಅಲೆ ಸಿನಿಮಾ ಕುರಿತಾದ ಕಥನ', 'ಕಣ್ಕಟ್ಟು', 'ಸಾವಿತ್ರಿಬಾಯಿ ಫುಲೆ ಬದುಕು ಬರಹ' ಮೊದಲಾದ ಕೃತಿಗಳನ್ನು ಬರೆದಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...