ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆಯಾಗಿ ಡಾ. ಆರತಿ ಕೃಷ್ಣ ನೇಮಕ

Date:

ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರನ್ನಾಗಿ ಡಾ. ಆರತಿ ಕೃಷ್ಣ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿದೆ. ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದ, ಹಿರಿಯ ಕಾಂಗ್ರೆಸ್ ನಾಯಕ ಬೇಗಾನೆ ರಾಮಯ್ಯ ಅವರ ಪುತ್ರಿಯಾಗಿರುವ ಡಾ. ಆರತಿ ಅವರು ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದಾರೆ. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎನ್‌ಆರ್‌ಐ ಸೆಲ್‌ನ ಮೊದಲ ಅಧ್ಯಕ್ಷರಾಗಿದ್ದರು.

ಅಭಿನಂದನೆ ಸಲ್ಲಿಸಿದ ಝಕರಿಯಾ ಜೋಕಟ್ಟೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈದಿನ.ಕಾಮ್’ನೊಂದಿಗೆ ಮಾತನಾಡಿರುವ ಅನಿವಾಸಿ ಭಾರತೀಯ ಉದ್ಯಮಿ, ಸೌದಿ ಅರೇಬಿಯಾದ ಪ್ರತಿಷ್ಠಿತ ‘ಅಲ್ ಮುಝೈನ್’ ಸಂಸ್ಥೆಯ ಆಡಳಿತ ನಿರ್ದೇಶಕ ಬಿ. ಝಕರಿಯಾ ಜೋಕಟ್ಟೆ, ‘ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆಯಾಗಿ ಡಾ. ಆರತಿ ಕೃಷ್ಣ ಅವರನ್ನು ಸರ್ಕಾರ ನೇಮಕಗೊಳಿಸಿರುವ ಮೂಲಕ ಸೂಕ್ತ ವ್ಯಕ್ತಿಯನ್ನೇ ನೇಮಕಾತಿ ಮಾಡಿದೆ’ ಎಂದು ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

WhatsApp Image 2023 10 18 at 1.53.35 PM

ಝಕರಿಯಾ ಜೋಕಟ್ಟೆ

‘ರಾಜ್ಯ ಸರ್ಕಾರಕ್ಕೆ ಹಾಗೂ ಡಾ. ಆರತಿ ಕೃಷ್ಣ ಅವರಿಗೆ ಅನಿವಾಸಿ ಭಾರತೀಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆರತಿ ಕೃಷ್ಣ ಅವರ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸಗಳು ಆಗಲಿ ಎಂದು ಹಾರೈಸುತ್ತೇನೆ’ ಎಂದು ಬಿ. ಝಕರಿಯಾ ಜೋಕಟ್ಟೆ ಶುಭಾಶಯ ಸಲ್ಲಿಸಿದ್ದಾರೆ.

ಡಾ. ಆರತಿ ಕೃಷ್ಣ ಪರಿಚಯ

ಡಾ. ಆರತಿಕೃಷ್ಣ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದು, ಜನಿಸಿದ್ದು ಉಡುಪಿಯಲ್ಲಿ. ಇವರ ತಂದೆ ಬೇಗಾನೆ ರಾಮಯ್ಯ, ತಾಯಿ ಸೀತಾ ಬಿ. ರಾಮಯ್ಯ. ತಂದೆ ಶೃಂಗೇರಿ ಎನ್.ಆರ್. ಪುರದಲ್ಲಿ ವಕೀಲರಾಗಿದ್ದು, ಶೃಂಗೇರಿ ಶಾಸಕರಾಗಿ, ರಾಜ್ಯ ಗ್ರಾಮೀಣಾಭಿವೃದ್ಧಿ ಮಾಜಿ ಸಚಿವರಾಗಿದ್ದರು. ಕೋವಿಡ್ ಸಂಕಷ್ಟ ಕಾಲದಲ್ಲಿ ಅನಿವಾಸಿ ಭಾರತೀಯರು ಯಾರೇ ಸಂಕಷ್ಟಕ್ಕೀಡಾದರೂ ಕೂಡಲೇ ಸ್ಪಂದಿಸಿ ಅದಕ್ಕೆ ಪರಿಹಾರ ಒದಗಿಸುವ ಮೂಲಕ ಕೋವಿಡ್ ವಾರಿಯರ್ ಆಗಿಯೂ ಡಾ. ಆರತಿ ಕೃಷ್ಣ ಅವರು ಗುರುತಿಸಿಕೊಂಡಿದ್ದರು.

4696632828

ಕಷ್ಟಕ್ಕೆ ಸಿಲುಕಿದ್ದ 40 ಸಾವಿರಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ವಿದೇಶದಿಂದ ತಾಯ್ನಾಡಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎನ್‌ಆರ್‌ಐ ಸಂಸ್ಥೆಗಳಿಗೆ ಚಾರ್ಟರ್ ವಿಮಾನಕ್ಕೆ ಬೇಕಾದ ಅನುಮತಿಯನ್ನು ರಾಯಭಾರಿ ಕಚೇರಿ ಮೂಲಕ ಒದಗಿಸಿಕೊಡಲು ಇವರು ಶ್ರಮಿಸಿದ್ದರು.

ಜಗತ್ತಿನಾದ್ಯಂತ ಇರುವ ಹಲವಾರು ದೇಶಗಳ ರಾಯಭಾರಿಗಳ ನಿರಂತರ ಸಂಪರ್ಕದಿಂದ ಚೀನಾ, ಇಟಲಿ, ಆಸ್ಟ್ರೇಲಿಯಾ. ಅಮೆರಿಕ. ಫಿಲಿಪೈನ್ಸ್, ಸ್ಪೇನ್, ಫಿನ್‌ಲ್ಯಾಂಡ್‌, ಮಲೇಷಿಯಾ, ವಿಯೆಟ್ನಾಂ, ಕಾಂಬೋಡಿಯಾ, ಲಾವೋಸ್, ಪೋಲ್ಯಾಂಡ್, ಬಾಂಗ್ಲಾದೇಶ, ಶ್ರೀಲಂಕಾ, ಇಂಗ್ಲೆಂಡ್, ಕೊಲ್ಲಿ ರಾಷ್ಟ್ರಗಳು ಮೊದಲಾದ ದೇಶಗಳಲ್ಲಿ ನೆಲೆಸಿರುವ ಭಾರತೀಯರು ಹಾಗೂ ಇತರ ರಾಷ್ಟ್ರಗಳ ಪ್ರಜೆಗಳು ಸಹಾಯಯಾಚಿಸಿ ಬಂದವರಿಗೆ ಸೂಕ್ತ ವ್ಯವಸ್ಥೆ ಮಾಡಿ ಲಕ್ಷಾಂತರ ಜನರ ಮನ ಗೆದ್ದಿದ್ದಾರೆ.

ಇವರ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ, ಸಹ್ಯಾದ್ರಿ ಸಂಘದ ಗೌರವ ಪ್ರಶಸ್ತಿ, ಮಹಾತ್ಮಗಾಂಧಿ ಸಮ್ಮಾನ ಅವಾರ್ಡ್ ಬ್ಯಾಂಕಾಕ್‌ನಲ್ಲಿ, ದುಬೈ ಕನ್ನಡ ಕಾಯಕ ರತ್ನ, ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಗವರ್ನರ್‌ನಿಂದ ಇಂಡಿಯನ್ ಕಮ್ಯೂನಿಟಿ ಎಡ್ವಕೇಟ್ ಪ್ರಶಸ್ತಿ ಅರಸಿ ಬಂದಿವೆ. ದೇಶ-ವಿದೇಶದಲ್ಲಿ ಸಲ್ಲಿಸಿದ ಕೊಡುಗೆಯನ್ನು ಮೆಚ್ಚಿದ ಜನ ‘ಮಲೆನಾಡ ಇಂದಿರಾ’ ಬಿರುದನ್ನು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...