ಕರ್ನಾಟಕದ್ದು ‘ಜನ-ಕರ’ ವಸೂಲಿ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

Date:

ರಾಜ್ಯ ಕಾಂಗ್ರೆಸ್‌ ಸರ್ಕಾರ, ಹಾಲು-ಮೊಸರಷ್ಟೇ ಅಲ್ಲ; ಈಗ ಮನೆಯ ಕಸಕ್ಕೂ ಕನಿಷ್ಠ ₹400 ವರೆಗೆ ಶುಲ್ಕ ವಿಧಿಸಿ ಗ್ಯಾರಂಟಿ “ಶುಲ್ಕ ವಸೂಲಿಗಾರ ಸರ್ಕಾರʼ ಆಗಿದ್ದು, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ದೆಹಲಿಯಲ್ಲಿ ಮಂಗಳವಾರ ಮಾದ್ಯಮದವರೊಂದಿಗೆ ಮಾತನಾಡಿ, “ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗಾಗಿ ಆಸ್ತಿ ತೆರಿಗೆಯಲ್ಲೇ ಅಡಕವಾಗಿದ್ದ ಕಡಿಮೆ ಉಪಕರದ ಬದಲು ಇದೀಗ ಕಟ್ಟಡದ ವಿಸ್ತೀರ್ಣದ ಮೇಲೆ ಸಾವಿರಾರು ರೂಪಾಯಿ ಶುಲ್ಕ ನಿಗದಿಪಡಿಸಿ ಜನಪರ ಬದಲು “ಜನ-ಕರʼ ವಸೂಲಿಗಾರ ಸರ್ಕಾರ ಆಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“600 ಚದರ ಅಡಿ ನಿವೇಶನದಲ್ಲಿನ ವಸತಿ ಕಟ್ಟಡದ ಪ್ರತಿ ಮನೆಗೆ ಮಾಸಿಕ ₹120ವರೆಗೆ ಶುಲ್ಕ ವಿಧಿಸುತ್ತಿದೆ. ಆಸ್ತಿ ವಿಸ್ತೀರ್ಣ ಹೆಚ್ಚಿದಂತೆ ಬಳಕೆದಾರರ ಶುಲ್ಕವನ್ನೂ ಹೆಚ್ಚಿಸಲಾಗಿದೆ. 4 ಸಾವಿರ ಚದರಡಿ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದ ಪ್ರತಿ ಮನೆಗೆ ಮಾಸಿಕ ತಲಾ ₹400ರಂತೆ ವಾರ್ಷಿಕ ₹4,800 ಶುಲ್ಕ ವಿಧಿಸುತ್ತಿರುವ ಸರ್ಕಾರದ ಕ್ರಮ ಅಕ್ಷಮ್ಯ” ಎಂದು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಲದೆ ಕಟ್ಟಡಗಳಿಗೆ ಪ್ರತಿ ವರ್ಷವೂ ಶೇ.5ರಷ್ಟು ಶುಲ್ಕ ಹೆಚ್ಚಳ ಮಾಡಿದೆ. ಸಾಲದ್ದಕ್ಕೆ ಲಿಫ್ಟ್‌, ಜನರೇಟರ್‌ ಪರಿಶೀಲನೆ ಮತ್ತು ರಿನಿವಲ್‌ಗೆ ₹800 ಇದ್ದ ದರ ಇದೀಗ ಏಕಾಏಕಿ ₹ 5,000 ದಿಂದ ₹8,000 ವರೆಗೆ ಏರಿಸಿ ಜನ-ಕರ ವಸೂಲಿ ಸರ್ಕಾರವಾಗಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮೂರು ಮೂರು ಬಾರಿ ಹೆಚ್ಚಳ

“ಕಾಂಗ್ರೆಸ್‌ ಸರ್ಕಾರ ಹಾಲು, ವಿದ್ಯುತ್‌, ಪೆಟ್ರೋಲ್‌, ನೋಂದಣಿ ಶುಲ್ಕ, ಪಹಣಿ ಶುಲ್ಕ, ಅಬಕಾರಿ ಶುಲ್ಕ, ಮುದ್ರಾಂಕ ಶುಲ್ಕ, ಬಸ್ ಪ್ರಯಾಣ ದರ, ಮೆಟ್ರೋ ದರ, ಜನನ-ಮರಣ ಪ್ರಮಾಣ ಪತ್ರ ಶುಲ್ಕ, ಆಸ್ತಿ ತೆರಿಗೆ, ವಾಹನ ತೆರಿಗೆ, ರೋಡ್‌ ಟ್ಯಾಕ್ಸ್‌ ಹೀಗೆ ಪ್ರತಿಯೊಂದನ್ನೂ ಮೂರು ಮೂರು ಬಾರಿ ಹೆಚ್ಚಿಸಿ ಜನಸಾಮಾನ್ಯರ ಜೀವ ಹಿಂಡುತ್ತಿದೆ” ಎಂದು ಹರಿಹಾಯ್ದರು.

ಹಾಲು ಉತ್ಪಾದಕರಿಗೆ ಇದ್ದ ಬೆಲೆಯೂ ಕಡಿತ

“ರಾಜ್ಯ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ 20 ತಿಂಗಳಲ್ಲಿ ಹಾಲು ಉತ್ಪಾದಕರಿಗೆ ಎನ್ನುತ್ತ ಮೂರು ಬಾರಿ ಹಾಲಿನ ದರ ಏರಿಸಿದೆ. ಈ ಸಲ ಅತಿ ಹೆಚ್ಚು ₹4 ಹೆಚ್ಚಿಸಿದೆ. ಆದರೆ, ಇತ್ತ ರೈತರಿಗೆ ಹಾಲಿನ ದರವನ್ನು ಏರಿಸಿಲ್ಲ, ಪ್ರೋತ್ಸಾಹ ಧನವನ್ನೂ ಕೊಟ್ಟಿಲ್ಲ ಬದಲಿಗೆ ಹೈನುಗಾರರಿಗೆ ₹ 3.50 ಕಡಿತ ಮಾಡಿದೆ” ಎಂದು ಜೋಶಿ ಆರೋಪಿಸಿದರು.

₹75-80 ಸಾವಿರ ಕೋಟಿ ವಸೂಲಿ

“ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ವಾರ್ಷಿಕವಾಗಿ ಹೆಚ್ಚೆಂದರೆ ₹50-60 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಆದರೆ, ಬೆಲೆ ಏರಿಕೆ, ಕರ ಹೆಚ್ಚಳ ಎನ್ನುತ್ತ ಜನರಿಂದ ನೇರವಾಗಿ ₹75ರಿಂದ 80 ಸಾವಿರ ಕೋಟಿ ವಸೂಲಿ ಮಾಡುತ್ತಿದೆ. ಇತ್ತ ಜನಸಾಮಾನ್ಯರಿಗೆ ಗ್ಯಾರೆಂಟಿಗಳನ್ನೂ ಸರಿ ಕೊಡುತ್ತಿಲ್ಲ, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ” ಎಂದು ದೂರಿದರು.

ಹುಬ್ಬಳ್ಳಿಯಲ್ಲಿ ಮುಸ್ಲಿಂ ಏರಿಯಾವೇ ವಕ್ಫ್‌ ಪಾಲು

“ರಾಜ್ಯದಲ್ಲಿ ಚಾಲುಕ್ಯರ ಆಡಳಿತದಲ್ಲಿ ಇದ್ದಂತಹ ಮಂದಿರಗಳೂ ವಕ್ಫ್‌ ಆಸ್ತಿ ಎಂದಾಗಿದೆ. ಇನ್ನು, ಹುಬ್ಬಳ್ಳಿಯಲ್ಲಿ ಮುಸಲ್ಮಾನರು ನೆಲೆಸಿರುವ ಇಡೀ ಒಂದು ಪ್ರದೇಶವೇ ವಕ್ಫ್‌ ಆಸ್ತಿ ಎಂದಾಗಿದೆ. ಈ ಅನ್ಯಾಯದ ವಿರುದ್ಧ ಆಸ್ತಿ ಮಾಲೀಕರು ಕೋರ್ಟ್‌ ಮೆಟ್ಟಿಲೇರಿದ್ದಾರೆ. ವಕ್ಫ್‌ನ ಇಂಥ ಭೂ ಕಬಳಿಕೆ ವಿರುದ್ಧ ಬಿಜೆಪಿ ಹೋರಾಡುತ್ತಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...